![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 27, 2022, 5:29 PM IST
ಬಸವನಬಾಗೇವಾಡಿ: ರಾಜ್ಯಸರ್ಕಾರ ಈಗಾಗಲೇ ಶರಣರು ಜನ್ಮವೆತ್ತಿದ ಸ್ಥಳಗಳಲ್ಲಿ ಅದ್ಧೂರಿಯಾಗಿ ಜಯಂತ್ಯುತ್ಸವ ಆಚರಿಸಲು ನಿರ್ಧರಿಸಿದ್ದು ಅದೇ ರೀತಿ ಬಸವ ಜನ್ಮಸ್ಥಳವಾದ ಬಸವನಬಾಗೇವಾಡಿಯಲ್ಲಿ ಬಸವ ಜಯಂತಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
ಮಂಗಳವಾರ ಸಂಜೆ ಪಟ್ಟಣದಲ್ಲಿ ಬಸವಜನ್ಮ ಸ್ಮಾರಕ ನೂತವಾಗಿ ನಿರ್ಮಾಣವಾಗುತ್ತಿರುವ ಮೆಗಾ ಮಾರುಕಟ್ಟೆ, ಪುರಸಭೆ ಕಾರ್ಯಾಲಯದ ಕಟ್ಟಡ ವೀಕ್ಷಿಸಿ ಅವರು ಮಾತನಾಡಿದರು.
ಶರಣರು ಜನ್ಮ ತಾಳಿದ ಸ್ಥಳಗಳಲ್ಲಿ ಜಯಂತಿಗಳನ್ನು ಆಚರಿಸಬೇಕೆಂದು ಸರ್ಕಾರ ಆದೇಶಿಸಿದೆ. ಈ ನಿಟ್ಟಿನಲ್ಲಿ ಬಸವ ಜಯಂತಿ ಕಾರ್ಯಕ್ರಮವನ್ನು ರಾಜ್ಯಮಟ್ಟದ ರೀತಿಯಲ್ಲಿ ಒಂದು ದಿನ ಆದ್ಧೂರಿಯಾಗಿ ಆಚರಿಸಲು ಏ. 27ರಂದು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಬಸವ ಜಯಂತಿ ಆಚರಣೆ ಕುರಿತು ಚರ್ಚಿಸಿ ಆಚರಣೆ ಮಾಡಲು ನಿರ್ಧರಿಸಲಾಗುವುದು ಎಂದು ಹೇಳಿದರು.
ಬಸವ ಜಯಂತ್ಯುತ್ಸವಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಬರುವ ನಿರೀಕ್ಷೆ ಇದೆ. ಪುರಸಭೆ ಕಾರ್ಯಾಲಯ ವಿಶಾಲವಾದ ಜಾಗೆಯಲ್ಲಿ ನಿರ್ಮಾಣಗೊಂಡಿರುವುದು. ಸಂತಸದ ವಿಷಯ ಸರಕಾರಿ ಕಟ್ಟಡಗಳು ಶೀಘ್ರದಲ್ಲಿ ಉದ್ಘಾಟಿಸಲು ಈಗಾಗಲೇ ಅನುಮೋದನೆಗೆ ಕಳುಹಿಸಲಾಗಿದೆ ಎಂದರು.
ಉಪ ವಿಭಾಗಗಾಧಿಕಾರಿ ಬಲರಾಮ ನಾಯಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಡಿ.ನಾಗರಾಜ, ತಹಶೀಲ್ದಾರ್ ವಿಜಯಕುಮಾರ ಕಡಕೋಳ, ಕೆಪಿಸಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ಪಟ್ಟಣಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ರವಿ ರಾಠೊಡ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ ಹಾರಿವಾಳ, ಪುರಸಭೆ ಮುಖ್ಯಾಧಿಕಾರಿ ಶಿವಾನಂದ ಪೂಜಾರಿ, ಅಭಿಯಂತರ ಮಹಾದೇವ ಜಂಬಗಿ, ಆರೋಗ್ಯ ನಿರೀಕ್ಷಕರಾದ ಸಿದ್ಧಾರ್ಥ ಕಳ್ಳಿಮನಿ, ಮಹೇಶ ಹಿರೇಮಠ ಸೇರಿದಂತೆ ಅನೇಕರು ಇದ್ದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.