ಇಳಿ ವಯಸ್ಸಿನಲ್ಲೂ ಕುಗ್ಗದ ಓದಿನ ಉತ್ಸಾಹ ಇಂಗ್ಲಿಷ್‌ ಪರೀಕ್ಷೆ ಬರೆದ ಮೂವರು ಹಿರಿಯರು


Team Udayavani, Jun 8, 2024, 6:06 PM IST

ಇಳಿ ವಯಸ್ಸಿನಲ್ಲೂ ಕುಗ್ಗದ ಓದಿನ ಉತ್ಸಾಹ ಇಂಗ್ಲಿಷ್‌ ಪರೀಕ್ಷೆ ಬರೆದ ಮೂವರು ಹಿರಿಯರು

ಉದಯವಾಣಿ ಸಮಾಚಾರ
ವಿಜಯಪುರ:ಶೈಕ್ಷಣಿಕ ಸಾಧನೆಗಾಗಿ ಯುವ ಸಮೂಹ ಓದಿನ ಹಳವಂಡದಲ್ಲಿ ಕಂಗಲಾಗಿ ಜೀವನೋತ್ಸಾಹವನ್ನೇ ಕಳೆದುಕೊಳ್ಳುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ನಗರದಲ್ಲಿ ಮೂವರು ಹಿರಿಯ ನಾಗರಿ ಕರು ವಯೋಮಾನದ ಹಂಗಿಲ್ಲದೇ ಸ್ನಾತಕೋತ್ತರ ಪರೀಕ್ಷೆ ಎದುರಿಸಿದ್ದು ವಿದ್ಯಾರ್ಥಿ ಯುವ ಸಮೂಹಕ್ಕೆ ಮಾದರಿ ಮಾತ್ರವಲ್ಲ, ಸ್ಫೂರ್ತಿಯಾಗಿದ್ದಾರೆ.

ಶುಕ್ರವಾರ ಮಧ್ಯಾಹ್ನ 2ರಿಂದ 5ರವರೆಗೆ ನಗರದ ಜೆಎಸ್ಸೆಸ್‌ ಕಾಲೇಜಿನಲ್ಲಿ ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ (ಇಗ್ನೊ) ಕೇಂದ್ರಲ್ಲಿ ಈ ಮೂವರು ಹಿರಿಯ ನಾಗರಿಕರು ಸ್ನಾತಕೋತ್ತರ ಇಂಗ್ಲಿಷ್‌ ವಿಷಯದ ಪರೀಕ್ಷೆ ಎದುರಿಸಿದ್ದಾರೆ. ಈಗಾಗಲೇ ಕನ್ನಡ, ಹಿಂದಿ, ಸಮಾಜ ಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪರೀಕ್ಷೆ ಎದುರಿಸಿ, ಯಶಸ್ವಿಯಾಗಿರುವ 83ರ ಇಳಿಹರೆಯದ ನಿಂಗಯ್ಯ ಬಸಯ್ಯ ಒಡೆಯರ್‌, ಇದೀಗ ಇಂಗ್ಲಿಷ್‌ ವಿಷಯದಲ್ಲಿ ಸ್ನಾತಕೋತ್ತರ ಪರೀಕ್ಷೆ ಎದುರಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಇಳಕಲ್ಲ ತಾಲೂಕಿನ ಗುಡೂರ ಮೂಲದ 83 ವರ್ಷದ ನಿಂಗಯ್ಯ ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ, 24 ವರ್ಷಗಳ ಹಿಂದೆಯೇ ಸೇವಾ ನಿವೃತ್ತಿ ಹೊಂದಿದ್ದಾರೆ. ಆದರೂ ಓದು ಹಂಬಲ, ಪದವಿ ಗಳಿಸಲು ಪರೀಕ್ಷೆ ಎದುರಿಸುವ ಕಲಿಕಾ ಆಸಕ್ತಿ ಕುಗ್ಗಿಲ್ಲ. ಬಡತನದ ಹಿನ್ನೆಲೆ ಇದ್ದರೂ 1956ರಲ್ಲಿ ಮೊದಲ ಬಾರಿಗೆ 1ನೇ ತರಗತಿ ಪರೀಕ್ಷೆ ಎದುರಿಸಿದ್ದೆ. ಸರ್ಕಾರಿ ಸೇವಾ ಹಂತದಲ್ಲಿ ಹೆಚ್ಚಿನ ಹಾಗೂ ಉನ್ನತ ಶಿಕ್ಷಣದ ಓದು ಸಾಧ್ಯವಾಗಲಿಲ್ಲ. ನಿವೃತ್ತಿ ಬಳಿಕ ಬಡತನದಿಂದ ಸಾಧ್ಯವಾಗದ ಶೈಕ್ಷಣಿಕ ಪದವಿಗಳನ್ನು ಪಡೆಯುವ ಹಂಬಲವನ್ನು ನಿವೃತ್ತಿ ಬಳಿಕ ಡೇರಿಸಿಕೊಳ್ಳಲು
ಮುಂದಾಗಿದ್ದೇನೆ. ನನ್ನ ಕನಸು ಕೈಗೂಡಲು ಇಗ್ನೊ ನೆರವಿಗೆ ಬಂದಿದೆ ಎನ್ನುತ್ತಾರೆ ನಿಂಗಯ್ಯ. ಕನ್ನಡ, ಹಿಂದಿ, ಸಂಸ್ಕೃತ ಹಾಗೂ ಇಂಗ್ಲಿಷ್‌ ಭಾಷಾ ಪ್ರವೀಣರಾಗಿರುವ ನಿಂಗಯ್ಯ, ಕನ್ನಡದಲ್ಲಿ ವಿವಿಧ ವಿಷಯಗಳ 15 ಕೃತಿಗಳನ್ನು ಬರೆದು ಪ್ರಕಟಿಸಿದ್ದಾರೆ.

ಕಲಿಕೆಗೆ ವಯಸ್ಸಿನ ಹಂಗಿಲ್ಲ ಎನ್ನುವ ಈ ಹಿರಿಯ ಜೀವ, ಕಲಿಕೆಯಿಂದ ಹಿಂದೆ ಸರಿದ ದಿನದಿಂದಲೇ ನಮ್ಮ ಜ್ಞಾನ ಕಬ್ಬಿಣದಂತೆ ತುಕ್ಕು ಹಿಡಿಯಲಾರಂಭಿಸುತ್ತದೆ ಎನ್ನುವ ಮೂಲಕ ಶಿಕ್ಷಣದ ಮಹತ್ವ ಸಾರುತ್ತಿದ್ದಾರೆ. ಜಿಲ್ಲೆಯ ಸಿಂದಗಿ ಮೂಲದ ನಿವೃತ್ತ ಉಪನ್ಯಾಸಕ ಪಿ.ಎಂ.ಮಡಿವಾಳ ಕೂಡ ಇಂಗ್ಲಿಷ್‌ ಸ್ನಾತಕೋತ್ತರ ಪರೀಕ್ಷೆ ಬರೆದಿದ್ದಾರೆ. ಉಪನ್ಯಾಸಕರಾಗಿ ನಿವೃತ್ತರಾದರೂ ಓದುವ ಹಂಬಲ, ಪರೀಕ್ಷೆ ಬರೆಯುವ ತುಡಿತ ಮಾತ್ರ ಇವರಿಗೆ ಇಂಗಿಲ್ಲ.

ಓರ್ವ ಪ್ರಾಧ್ಯಾಪಕನಾಗಿ ನಿತ್ಯೂ ಓದಿನಲ್ಲಿ ನಿರತನಾಗಿರಬೇಕು ಎಂಬ ಆಶಯದೊಂದಿಗೆ ಜ್ಞಾನ ಸಂಪಾದನೆಗಾಗಿ ಹೊಸತನ್ನು ಹುಡುಕು, ಸಂಶೋಧಿಸುವ ಮನಸ್ಥಿತಿ ಇರಬೇಕು. ನನ್ನ ಮಗಳು ಇಗ್ನೊ ಮೂಲಕವೇ ಸ್ನಾತಕೋತ್ತರ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾಗ ನಾನೂ ಅರ್ಜಿ ಹಾಕಿದ್ದೆ. ವಿದ್ಯಾರ್ಥಿಗಳು ಗುಣಮಟ್ಟದ ಬೋಧನೆ ಮಾಡುವ ಉದ್ದೇಶದಿಂದ ನಿವೃತ್ತಿ ನಂತರವೂ ಎಂಎ ಪರೀಕ್ಷೆ ಬರೆಯಲು ಮುಂದಾದೆ ಎನ್ನುತ್ತಾರೆ.

ಇನ್ನು ಐದು ವರ್ಷಗಳಲ್ಲಿ ಸೇವಾ ನಿವೃತ್ತಿ ಆಗುತ್ತಿರುವ ಕಲಾ ಶಿಕ್ಷಕ ನಾಗನಗೌಡ ಪಾಟೀಲ ಕೂಡ ಎಂಎ ಇಂಗ್ಲಿಷ್‌ ಪರೀಕ್ಷೆ ಬರೆದಿದ್ದಾರೆ. ಶಿವಮೊಗ್ಗದ ನಾಗನಗೌಡ, ಓದು ಹಾಗೂ ಶೈಕ್ಷಣಿಕ ಪದವಿ ಪಡೆಯುವುದಕ್ಕೆ ವಯಸ್ಸಿನ ಮಿತಿ ಎಂಬ ಹಂಗೇ ಇಲ್ಲ ಎಂದರು.

ಹಿರಿಯ ನಾಗರಿಕರು ಜೀವನೋತ್ಸಾಹದ ಶೈಕ್ಷಣಿಕ ಕಲಿಕಾ ಪ್ರೀತಿಯ ಹಂಬಲ ಕಂಡು ಇಗ್ನೊ ಕೇಂದ್ರದ ಸಂಯೋಜಕ ಡಾ|ಮಂಜುನಾಥ ಕೋರಿ ಕೂಡ ಸಂತಸಗೊಂಡಿದ್ದಾರೆ. ಹಿರಿಯ ನಾಗರಿಕರು ವೃದ್ಧಾಪದ್ಯದಲ್ಲೂ ಉನ್ನತ ಶಿಕ್ಷಣ ಪಡೆಯುವ ಕನಸಿನೊಂದಿಗೆ ಪರೀಕ್ಷೆ ಎದುರಿಸುತ್ತಿರುವುದು ಇಂದಿನ ವಿದ್ಯಾರ್ಥಿ ಯುಜನರಿಗೆ ಸ್ಫೂರ್ತಿದಾಯಕ.

ಇಗ್ನೊ ಕೇಂದ್ರದಲ್ಲಿ ಕಡಿಮೆ ಖರ್ಚಿನಲ್ಲಿ ಉನ್ನತ ಶಿಕ್ಷಣ ಪಡೆಯುವವರಿಗೆ ಹೆಚ್ಚು ಅವಕಾಶಗಳಿದ್ದು ಅಗತ್ಯ ಮೂಲಭೂತ ಸೌಲಭ್ಯಗಳೂ ಇವೆ ಎನ್ನುತ್ತಾರೆ. ಇಗ್ನೊ ವಿಜಯಪುರ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಡಾ| ರವಿಕಾಂತ ಕಮಲೇಕರ, ರಾಜ್ಯದ ಉತ್ತರ ಕರ್ನಾಟಕದಲ್ಲಿ ನಾವು 12 ಜಿಲ್ಲೆಗಳು ಮತ್ತು ಮಹಾರಾಷ್ಟ್ರದ 2 ಜಿಲ್ಲೆಗಳು ನಮ್ಮ ಇಗ್ನೊ ಕೇಂದ್ರದ ವ್ಯಾಪ್ತಿಯಲ್ಲಿ ಬರುತ್ತವೆ. ಯುವಜನರಂತೆ ಹಿರಿಯ ನಾಗರಿಕರು, ಉತ್ಸಾಹದಿಂದ ಉನ್ನತ ಶಿಕ್ಷಣ ಪಡೆಯಲು ಮುಂದೆ ಬರುತ್ತಿರುವುದು ಆಶಾದಾಯಕ ಬೆಳವಣಿಗೆ ಎಂದಿದ್ದಾರೆ.

ಇಗ್ನೊ ಅಧ್ಯಯನ ಕೇಂದ್ರದ ಮೇಲ್ವಿಚಾರಕಿ ಡಾ|ಭಾರತಿ ಖಾಸನೀಸ್‌, ಜೂನ 7ರಿಂದ ಆರಂಭಗೊಂಡಿರುವ ಪರೀಕ್ಷೆಗಳು ಜುಲೈ 15ರವರೆಗೆ ನಡೆಯಲಿವೆ. ಸರ್ಟಿಫಿಕೆಟ್‌ ಕೋರ್ಸ್‌, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಕೋರ್ಸ್‌ಗಳ ಅಧ್ಯಯನಕ್ಕೆ ನಮ್ಮಲ್ಲಿ ಅವಕಾಶವಿದೆ ಎಂದರು.

ಟಾಪ್ ನ್ಯೂಸ್

vidhana-Soudha

Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ

FKCCI

Digitization: ರಾಜ್ಯದ ಎಲ್ಲ ಎಪಿಎಂಸಿ ಡಿಜಿಟಲೀಕರಣ: ಸಚಿವ ಶಿವಾನಂದ ಪಾಟೀಲ್‌

cOurt

Belagavi: ಮೂರು ವರ್ಷದ ಮಗುವಿನ “ಹತ್ಯಾಚಾರಿ’ಗೆ ಗಲ್ಲು ಶಿಕ್ಷೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Congress-Symbol

Congress: ಪಕ್ಷದ ನಿಲುವಿಗೆ ಭಿನ್ನ ಹೇಳಿಕೆ ನೀಡಿದರೆ ಸಹಿಸುವುದಿಲ್ಲ: ಕೆಪಿಸಿಸಿ

Isrel 2

Israel ಮೇಲೆ ಹೌಥಿ ಉಗ್ರರಿಂದ ಡ್ರೋನ್‌ ದಾಳಿ!

Kodihalli

Electrical system: ಕೃಷಿ ಪಂಪ್‌ಸೆಟ್‌-ಆಧಾರ್‌ ಜೋಡಣೆ ಕೂಡಲೇ ಕೈಬಿಡಲಿ: ಕೋಡಿಹಳ್ಳಿ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadinadu-Award

Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ

2-muddebihal

Muddebihal: ನಿಂತಿದ್ದ ಕ್ಯಾಂಟರ್‌ ಗೆ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

State Govt: 14 ಜಿಲ್ಲಾಸ್ಪತ್ರೆಗಳಲ್ಲಿ ಸ್ಕ್ಯಾನ್ ಸೇವೆ ಸ್ಥಗಿತ

State Govt: 14 ಜಿಲ್ಲಾಸ್ಪತ್ರೆಗಳಲ್ಲಿ ಸ್ಕ್ಯಾನ್ ಸೇವೆ ಸ್ಥಗಿತ

Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ

Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

vidhana-Soudha

Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ

FKCCI

Digitization: ರಾಜ್ಯದ ಎಲ್ಲ ಎಪಿಎಂಸಿ ಡಿಜಿಟಲೀಕರಣ: ಸಚಿವ ಶಿವಾನಂದ ಪಾಟೀಲ್‌

1-kamindu

Test; ಬ್ರಾಡ್‌ಮನ್‌ ದಾಖಲೆ ಸರಿದೂಗಿಸಿದ ಮೆಂಡಿಸ್‌

cOurt

Belagavi: ಮೂರು ವರ್ಷದ ಮಗುವಿನ “ಹತ್ಯಾಚಾರಿ’ಗೆ ಗಲ್ಲು ಶಿಕ್ಷೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.