![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 27, 2020, 1:42 PM IST
ವಿಜಯಪುರ: ನಗರದಲ್ಲಿ ಸೋಮವಾರ ಮತ್ತೆ ಇಬ್ಬರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 41 ಕ್ಕೆ ಏರಿದೆ.
ಸೋಮವಾರ ಬೆಳಗಿನ ಹೆಲ್ತ್ ಬುಲಿಟಿನ್ ನಲ್ಲಿ ಇಬ್ಬರಿಗೆ ಸೋಂಕು ದೃಢಪಟ್ಟಿದ್ದು, P221 ಸೋಂಕಿತೆಯಿಂದ 45 ವರ್ಷದ P510 ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಆದರೆ ಹೊಸದಾಗಿ ಸೋಂಕು ದೃಢಪಟ್ಟಿರುವ 27 ವರ್ಷದ P511 ಯುವಕನ ಸಂಪರ್ಕ ಪತ್ತೆ ತಲೆನೋವಾಗಿದೆ.
P511 ಸೋಂಕಿತ ಯುವಕ ಯುಟ್ಯೂಬ್ ಚಾನಲ್ ಕ್ಯಾಮರಾಮನ್ ಆಗಿದ್ದು, ಜಿಲ್ಲಾಡಳಿತ ಈತನ ಸೋಂಕು ಸಂಪರ್ಕ ಪತ್ತೆಗಾಗಿ ಟ್ರಾವೆಲ್ ಹಿಸ್ಟರಿ ಸಂಗ್ರಹಕ್ಕೆ ಮುಂದಾಗಿದೆ.
ಸದರಿ ಯುವಕನೊಂದಿಗೆ ನಗರದ ಐತಿಹಾಸಿಕ ಬಾರಾಕಮಾನ್ ಪ್ರದೇಶದ ಮೂಲಕ ಹೊಸದಾಗಿ ಮತ್ತೊಂದು ಪ್ರದೇಶಕ್ಕೆ ಸೋಂಕು ವಿಸ್ತರಣೆಯಾಗಿದೆ. ಸದರಿ ಪ್ರದೇಶ ಜನರಲ್ಲಿ ಆತಂಕ ಮನೆ ಮಾಡಿದೆ.
ನಗರದಲ್ಲಿ ಮೊದಲ ಸೋಂಕಿತೆ ವಿಶ್ವವಿಖ್ಯಾತ ಐತಿಹಾಸಿಕ ಗೋಲಗುಮ್ಮಟ ಪ್ರದೇಶದ ಚಪ್ಪರಬಂದ್ ಕಾಲೋನಿ ಪ್ರದೇಶಕ್ಕೆ ಸೀಮಿತವಾಗಿತ್ತು. ಹೀಗಾಗಿ ನಗರದಲ್ಲಿ ಛಪ್ಪರಬಂದ್, ಬಡಿಕಮಾನ್ ಪ್ರದೇಶದ ಹಲವು ಗಲ್ಲಿಗಳನ್ನು ಸೀಲ್ ಡೌನ್ ಮಾಡಲಾಗಿದೆ.
ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಯಾವುದೇ ಸೋಂಕಿತರು ಪತ್ತೆಯಾಗಿರದೇ, ಭಾನುವಾರ ಜಿಲ್ಲೆಯ ಮೊದಲ ಸೋಂಕಿತ ವೃದ್ಧೆ ಸಂಪೂರ್ಣ ಗುಣಮುಖಳಾಗಿ ಮನೆಗೆ ತೆರಳುವ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಕುಸಿತವಾಗಿತ್ತು.
ಇದರ ಬೆನ್ನಲ್ಲೇ ಮೊದಲ ಸೋಂಕಿತೆ ಸಂಪರ್ಕದಿಂದ ಒಂದು ಹಾಗೂ ಸಂಪರ್ಕದ ಪ್ರಾಥಮಿಕ ಮಾಹಿತಿ ಇಲ್ಲದ ಯೂಟ್ಯೂಬ್ ಚಾನಲ್ ಕ್ಯಾಮರಾಮನ್ ಗೆ ಸೋಂಕು ದೃಢಪಟ್ಟಿದೆ. ಇದರಿಂದ ಜಿಲ್ಲೆಯಲ್ಲಿ ಕೋವಿಡ್-19 ತಣ್ಣಗಾಗುತ್ತಿದೆ ಎನ್ನುವಾಗಲೇ ಮತ್ತಿಬ್ಬರಲ್ಲಿ ಸೋಂಕು ದೃಢಪಟ್ಟಿರುವುದು ಜಿಲ್ಲಾಡಳಿತಕ್ಕೆ ತಲೆನೋವಾಗಿದೆ.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.