![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 29, 2021, 10:05 AM IST
ಮುದ್ದೇಬಿಹಾಳ: ನೀರು ಕುಡಿಯಲೆಂದು ಕೃಷ್ಣಾ ನದಿಗೆ ಇಳಿದಿದ್ದ ಬಾಲಕಿಯೊಬ್ಬಳು ಕಾಲುಜಾರಿ ಗುಂಡಿಯಲ್ಲಿ ಬಿದ್ದು ಮುಳುಗಿದ್ದನ್ನು ಕಂಡ ಆಕೆಯನ್ನು ರಕ್ಷಿಸಲು ಧಾವಿಸಿದ ಅವಳ ಅತ್ತೆಯೂ ನೀರುಪಾಲಾದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ಕೃಷ್ಣಾ ನದಿ ತೀರದ ಹುನಕುಂಟಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಮೃತರನ್ನು ಹುನಕುಂಟಿ ಗ್ರಾಮದ ಶಾಂತಮ್ಮ ಭೀಮನಗೌಡ ನಾಗೋಡ (20 ವ) ಹಾಗೂ ಗುರುಸಂಗಮ್ಮ ಭೀಮಪ್ಪ ಮುದೂರ (8 ವ) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಮಂಗಳೂರು: ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೊಲೀಸ್ ಸೆರೆ
ದನ ಮೇಯಿಸಲೆಂದು ನದಿ ತೀರಕ್ಕೆ ಇಬ್ಬರು ಹೋಗಿದ್ದರು. ಬಾಯಾರಿಕೆ ಆಗಿದ್ದರಿಂದ ಗುರುಸಂಗಮ್ಮ ನೀರು ಕುಡಿಯಲೆಂದು ನದಿಗೆ ಇಳಿದಿದ್ದಾಳೆ. ನದಿ ತೀರದಲ್ಲಿ ಅಲ್ಲಲ್ಲಿ ಮಣ್ಣು ತೆಗೆದಿದ್ದರಿಂದ ಆಳವಾದ ಗುಂಡಿಗಳಿದ್ದು, ಅವುಗಳು ಭರ್ತಿಯಾಗಿರುವುದನ್ನು ತಿಳಿಯದೇ ಬಾಲಕಿ ಗುರುಸಂಗಮ್ಮ ಕಾಲು ಜಾರಿ ಗುಂಡಿಯೊಳಗೆ ಬಿದ್ದಿದ್ದಾಳೆ. ಇದನ್ನು ಗಮನಿಸಿದ ಅತ್ತೆ ಶಾಂತಾ ಆಕೆಯ ರಕ್ಷಣೆಗೆ ತೆರಳಿದ್ದು, ಆಕೆಯೂ ಕೂಡ ನೀರುಪಾಲಾಗಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದ ಕೂಡಲೇ ಮುದ್ದೇಬಿಹಾಳ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಪ್ರಮೋದ ಸುಂಕದ ನೇತೃತ್ವದ ತಂಡ ಸ್ಥಳಕ್ಕಾಗಮಿಸಿ ನೀರಿನ ಗುಂಡಿಯಲ್ಲಿ ಮುಳುಗಿದ್ದ ಇಬ್ಬರ ಶವವನ್ನು ಕಾರ್ಯಾಚರಣೆ ಮೂಲಕ ಹೊರ ತೆಗೆದರು.
ಸ್ಥಳಕ್ಕೆ ಪಿಎಸೈ ಎಂ.ಬಿ. ಬಿರಾದಾರ, ಗ್ರಾಮಲೆಕ್ಕಾಧಿಕಾರಿ ಸುನೀಲ್ ಚವ್ಹಾಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಈ ಕುರಿತ ಪ್ರಕರಣ ದಾಖಲಾಗಿದೆ.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.