ಮಳಖೇಡ ಮೂಲ ವೃಂದಾವನದ ಅಪಪ್ರಚಾರಕ್ಕೆ ಖಂಡನೆ


Team Udayavani, Jul 5, 2022, 4:34 PM IST

17protest

ವಿಜಯಪುರ: ಮಳಖೇಡದಲ್ಲಿರುವ ಮೂಲ ವೃಂದಾವನದ ಬಗ್ಗೆ ವಿನಾಕಾರಣ ಅಪಪ್ರಚಾರ ಮಾಡುತ್ತಿರುವುವುದು ನೋವಿನ ಸಂಗತಿ. ಈ ರೀತಿ ಘಟನೆಗಳಿಗೆ ಕಡಿವಾಣ ಹಾಕಬೇಕು ಎಂದು ಬ್ರಾಹ್ಮಣ ಸಮಾಜದ ಗುರುಗಳು, ಮುಖಂಡರು ಪ್ರತಿಭಟನಾ ರ್ಯಾಲಿ ನಡೆಸಿದರು.

ನಗರದ ಬಿ.ಆರ್‌. ಅಂಬೇಡ್ಕರ್‌ ವೃತ್ತದಿಂದ ಆರಂಭಗೊಂಡ ರ್ಯಾಲಿ ವಿವಿಧ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ನೇತೃತ್ವ ವಹಿಸಿದ್ದ ಸರ್ವಜ್ಞ ವಿದ್ಯಾವಿಹಾರ ಪೀಠದ ಕುಲಪತಿ ಪಂ| ಮಧ್ವಾಚಾರ್ಯ ಮೊಕಾಶಿ ಮಾತನಾಡಿ, ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡದಲ್ಲಿ ಉತ್ತರಾದಿ ಮಠದ ಯತಿಗಳಾದ ಜಯತೀರ್ಥರ ಮೂಲ ವೃಂದಾವನವಿದೆ. 650 ವರ್ಷಗಳಿಂದಲೂ ಅನೇಕ ಸನ್ಯಾಸಿಗಳು, ಹರಿದಾಸರು ಇವರು ಮಳಖೇಡದಲ್ಲಿಯೇ ಇರುವರೆಂದು ಕೊಂಡಾಡಿದ್ದಾರೆ. ಅನೇಕ ಸರ್ಕಾರಿ ದಾಖಲೆಗಳೂ ಇದನ್ನೇ ಸಾರಿವೆ. ಆದರೆ ವಿನಾಕಾರಣ ಕೆಲವರು ಈ ಬಗ್ಗೆ ಗೊಂದಲ ಸೃಷ್ಟಿಸುತ್ತಿರುವುದು ಖಂಡನೀಯ ಎಂದರು.

ಪ್ರಸ್ತುತ ಕೆಲವರು ಈ ಮೂಲ ವೃಂದಾವನ ಮಳಖೇಡದಲ್ಲಿಲ್ಲ. ಆನೆಗುಂದಿ ತಾಲೂಕಿನ ನವ ವೃಂದಾವನದಲ್ಲಿರುವ ರಘುವರ್ಯ ತೀರ್ಥರ ವೃಂದಾವನವೇ ಜಯತೀರ್ಥರ ವೃಂದಾವನ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಈ ವಿಚಾರ ಜಯತೀರ್ಥರ ಭಕ್ತ ವೃಂದಕ್ಕೆ ದೊಡ್ಡ ಆಘಾತವಾಗಿದೆ. ಈ ಬಗ್ಗೆ ಯಾವ ಗೊಂದಲವಿಲ್ಲದಿದ್ದರೂ ಸಹ ವಿನಾಕಾರಣ ಗೊಂದಲ ಸೃಷ್ಟಿಸಿ ಭಕ್ತರ ಮನಸ್ಸಿಗೆ ನೋವುಂಟು ಮಾಡುವ ಬೆಳವಣಿಗೆಗಳ ಮೇಲೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ಪಂ| ಸಂಜೀವಾಚಾರ್ಯ ಮಧಭಾವಿ ಮಾತನಾಡಿದರು. ಪ್ರಮುಖರಾದ ಆನಂದ ಜೋಶಿ, ವಿಡಿಎ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಅರವಿಂದ ಕುಲಕರ್ಣಿ, ಕೃಷ್ಣಾಜಿ ಕುಲಕರ್ಣಿ, ಸು ಧೀಂದ್ರ ಕುಲಕರ್ಣಿ, ರಾಜಶ್ರೀ ಕುಲಕರ್ಣಿ, ಸಂದೀಪ ಅರ್ಜುಣಗಿ, ರಘೋತ್ತಮ ಅರ್ಜುಣಗಿ, ಗೋವಿಂದ ಜೋಶಿ ಸೇರಿದಂತೆ ಇತರರು ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.