ಮನಃ ಪರಿವರ್ತನೆಗೆ ವಚನಗಳು ಸಹಕಾರಿ; ಡಾ| ಚನ್ನವೀರ ದೇವರು

ಮನುಷ್ಯ ಬದಲಾವಣೆಯ ಬದುಕಿಗಾಗಿ ವಚನಗಳನ್ನು ಅರಿತು ಬಾಳುವುದು ಮುಖ್ಯ.

Team Udayavani, Aug 15, 2022, 6:19 PM IST

ಮನಃ ಪರಿವರ್ತನೆಗೆ ವಚನಗಳು ಸಹಕಾರಿ; ಡಾ| ಚನ್ನವೀರ ದೇವರು

ವಿಜಯಪುರ: ತಾಳ್ಮೆಯಿಂದ ಇರುವ ಮನುಷ್ಯ ಸಹನೆ-ವಿವೇಕದಿಂದ ಎಲ್ಲವನ್ನೂ ಗೆಲ್ಲುವ ಶಕ್ತಿ ಹೊಂದಿರುತ್ತಾನೆ. ಸಿಟ್ಟು-ಕೋಪ, ಆವೇಶದಂಥ ಗುಣಗಳು ಜೀವನದಲ್ಲಿ ಸೋಲನ್ನೇ ತರುತ್ತದೆ. ಲೋಕದ ದೃಷ್ಟಿಯಲ್ಲಿ ಜೈಲಿನಲ್ಲಿರುವ ಕೈದಿಗಳು ಹೃದಯ ಪರಿವರ್ತಿಸಿಕೊಂಡ ಪ್ರವಾದಿಗಳಾಗಿ, ಬಸವಾದಿ ಪ್ರಥಮರಾಗಿ, ಗೌತಮ ಬುದ್ಧರಾಗಿ ಜೀವಿಸಲು ಇರುವ ಅವಕಾಶ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕುಂಟೋಜಿ ಹಿರೇಮಠದ ಡಾ| ಚನ್ನವೀರ ದೇವರು ಕಿವಿಮಾತು ಹೇಳಿದರು.

ನಗರದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಶ್ರಾವಣ ಮಾಸದ ನಿಮಿತ್ತ ಕುಮಾರೇಶ್ವರ ಜೀವನ ವಿಕಾಸ ಫೌಂಡೇಶನ್‌, ಬಸವನಬಾಗೇವಾಡಿಯ ವಿಶ್ವಬಂಧು ಬಸವ ಸಮಿತಿ, ಕುಂಟೋಜಿ ಯಶಸ್ವಿನಿ ಮಹಿಳಾ ಬಳಗದ ಸಹಯೋಗದಲಿ ಕೈದಿಗಳಿಗೆ ಹಮ್ಮಿಕೊಂಡಿದ್ದ ರುದ್ರಾಕ್ಷಿ ದೀಕ್ಷೆ, ವಿಭೂತಿ ವಿತರಣೆ, ವಚನ ಪುಸ್ತಕಗಳ ವಿತರಣೆ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ತಪ್ಪು ಮಾಡುವುದು ತಪ್ಪಲ್ಲ. ತಪ್ಪು ಅಂತಾ ತಿಳಿದ ಮೇಲೂ ಮಾಡುವ ತಪ್ಪೇ ತಪ್ಪು. ಮಹಾತ್ಮ ಗಾಂಧಿಜಿ ಜೈಲಿನಲ್ಲಿ ಇದ್ದುಕೊಂಡೇ ಆತ್ಮ ಕಥನ ಬರೆದರು. ಸುಭಾಷ್‌ಚಂದ್ರ ಬೋಸ್‌, ಭಗತಸಿಂಗ್‌ ಅವರ ಆದರ್ಶಗಳು, ಬಸವಾದಿ ಶರಣರ ವಚನಗಳನ್ನು ಕಂಠಪಾಠ ಮಾಡಿದಲ್ಲಿ ಜೀವನದಲ್ಲಿ ಮಹಾ ಮಾನವರಾಗಲು ಸಾಧ್ಯವಿದೆ ಎಂದು ಮಾರ್ಗದರ್ಶನ ಮಾಡಿದರು.

ವಿಜಯಪುರ ಜಿಲ್ಲಾ ಕೇಂದ್ರ ಕಾರಾಗೃಹದ ಅಧೀಕ್ಷಕ ಜೆ.ಐ. ಮ್ಯಾಗೇರಿ ಮಾತನಾಡಿ, ಜೈಲುಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳನ್ನು ಸನ್ನಡತೆ ಆದರದ ಮೇಲೆ ಕೆಲವರು ಈ ವರ್ಷ ಬಿಡುಗಡೆ ಆಗಲಿದ್ದಾರೆ. ಇತರೆ ಕೈದಿಗಳು ಸಹ ಸನ್ನಡನೆ ಮೂಲಕ ನಿಮ್ಮ ಜೀವನವನ್ನು ಉತ್ತಮವಾಗಿಸಿಕೊಳ್ಳಿ ಎಂದು ಸಲಹೆ ನೀಡಿದರು.

ವಿವಿಧ ಕಾರಣಗಳಿಂದಾಗಿ ಜೈಲುಗಳಲ್ಲಿ ಬಂಧಿಗಳಾಗಿರುವ ಕೈದಿಗಳು ಮಾನಸಿಕ ವೇದನೆ ಅನುಭವಿಸುತ್ತಿದ್ದಾರೆ. ಅಂಥ ಬಂಧಿಗಳು ನೈತಿಕ ಮೌಲ್ಯಗಳ ಧಾರ್ಮಿಕ ಮಾರ್ಗ, ಧ್ಯಾನ, ಪ್ರಾಣಾಯಾಮ, ಪ್ರಾರ್ಥನೆಯ ಮಾಡುವುದನ್ನು ರೂಢಿಸಿಕೊಳ್ಳಬೇಕು. ಕೈದಿಗಳು ಸನ್ನಡತೆ ಮೈಗೂಡಿಸಿಕೊಳ್ಳಲು ಧಾರ್ಮಿಕ ಮಾರ್ಗಗಳ ಸರಳ ಸೂತ್ರಗಳನು ಹೇಳಿಕೊಟ್ಟಿದ್ದಾರೆ. ಇದನ್ನು ಕೈದಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ಮನುಷ್ಯ ಬದಲಾವಣೆಯ ಬದುಕಿಗಾಗಿ ವಚನಗಳನ್ನು ಅರಿತು ಬಾಳುವುದು ಮುಖ್ಯ. ಶರಣರ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ದಯೆ, ತಾಳ್ಮೆ, ಸಹನೆ ಹೀಗೆ ಸದ್ಗುಣಗಳು ನಿಮ್ಮದಾಗಲಿವೆ. ಸದರಿ ಕಾರ್ಯಕ್ರಮದ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಜೈಲು ಬಂಧಿಗಳು ಭವಿಷ್ಯದಲ್ಲಿ ಸಮಾಜದ ಉತ್ತಮ ನಾಗರಿಕರಾಗಿ ಜೀವಿಸಬೇಕು ಎಂದು ವಿಶ್ವ ಬಸವ ಬಂಧು ಸಮಿತಿಯ ಡಾ| ಅಮರೇಶ ಮಿಣಜಿಗಿ ಸಲಹೆ ನೀಡಿದರು.

ಉಪನ್ಯಾಸಕ ರಾಜೇಂದ್ರಕುಮಾರ ಮಾತನಾಡಿ, ಮನುಷ್ಯನಿಗೆ ಕ್ಷಮಾಗುಣ ಅವಶ್ಯ. ದಯೆ ಕರುಣೆ ತ್ಯಾಗದಿಂದಲೇ ಎಲ್ಲವನ್ನು ಗೆಲ್ಲಬೇಕು ಎಂದರು. ವಿಶ್ವಬಂಧು ಬಸವ ಸಮಿತಿ ಅಧ್ಯಕ್ಷ ಡಾ| ಅಮರೇಶ ಮಿಣಜಗಿ ಪ್ರಾಸ್ತಾವಿಕ ಮಾತನಾಡಿದರು.

ಐ.ಎಸ್‌. ಹಿರೇಮಠ, ಸುರೇಶ ಪೂಜಾರಿ ವೇದಿಕೆಯಲ್ಲಿದ್ದರು. ಬಂಧಿಖಾನೆಯಲ್ಲಿರುವ ಕೈದಿಗಳಿಗೆ ಹಣೆಗೆ ವಿಭೂತಿ ಹಚ್ಚಿ, ಕೊರಳಲ್ಲಿ ರುದ್ರಾಕ್ಷಿ ಧರಿಸಿ ವಚನ ಪುಸ್ತಕ ನೀಡಿ ಪ್ರಸಾದ ವಿತರಿಸಲಾಯಿತು. ಯಶಸ್ವಿನಿ ಮಹಿಳಾ ಸಂಘದವರು ಎಲ್ಲ ಕೈದಿಗಳಿಗೆ ರಾಖಿ ಕಟ್ಟಿ ಸಿಹಿ ನೀಡಿದರು. ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಸಂಗಮೇಶ ಗುತ್ತೇದಾರ, ದೇವೇಂದ್ರ ಪತ್ತಾರ, ಶಿವಪುತ್ರ ಯಶರದಾ, ಶಂಕ್ರಮ್ಮ ಹೂಗಾರ, ಸ್ನೇಹಾ ಹಿರೇಮಠ, ಸಿದ್ದಮ್ಮ ಒಣರೊಟ್ಟಿ, ರೇಖಾ ಹೂಗಾರ, ಶಿವಮ್ಮ ಹೂಗಾರ ಇದ್ದರು. ಬಿ.ಆರ್‌. ಬನಸೋಡೆ ಪ್ರಾರ್ಥಿಸಿದರು. ಶಕೀಲಾ ಬೇಗಂ ನಿರೂಪಿಸಿದರು.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

pejawar swamiji reacts to Rahul Gandhi’s Hindu remark on parliament

Hindu remark; ಅಂತವರನ್ನು ದೂರ ಇಡಬೇಕು..: ರಾಹುಲ್ ಹೇಳಿಕೆಗೆ ಪೇಜಾವರಶ್ರೀ ಕಿಡಿ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

2-Vijayapura

Vijayapura: ಕೃಷ್ಣಾ ನದಿ ತೆಪ್ಪ ದುರಂತ: ಮತ್ತೊಬ್ಬನ ಶವ ಪತ್ತೆ

ತೆಪ್ಪದ ದುರಂತ: ಪೊಲೀಸರ ವರ್ತನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಸಚಿವ ಶಿವಾನಂದ 

ತೆಪ್ಪದ ದುರಂತ: ಪೊಲೀಸರ ವರ್ತನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಸಚಿವ ಶಿವಾನಂದ 

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.