ವಿಜಯಪುರ: 5ನೇ ಸ್ನಾತಕೋತ್ತರ ಪರೀಕ್ಷೆ ಬರೆಯುತ್ತಿರುವ 81ರ ವೃದ್ದ


Team Udayavani, Jun 9, 2023, 5:43 PM IST

ವಿಜಯಪುರ: 5ನೇ ಸ್ನಾತಕೋತ್ತರ ಪರೀಕ್ಷೆ ಬರೆಯುತ್ತಿರುವ 81ರ ವೃದ್ದ

ವಿಜಯಪುರ: 81 ರ ಇಳಿವಯಸ್ಸಿನ ವೃದ್ಧರೊಬ್ಬರು ಐದನೇ ಸ್ನಾತಕೋತ್ತರ ಪರೀಕ್ಷೆ ಬರೆಯುವ ಮೂಲಕ ಯುವ ವಿದ್ಯಾರ್ಥಿ ಸಮೂಹ ಹುಬ್ಬೇರಿಸುವಂತೆ ಮಾಡಿದ್ದಾರೆ. ಇಗ್ನೋ ವಿಶ್ವವಿದ್ಯಾಲಯದಿಂದ ಆಂಗ್ಲಭಾಷೆಯಲ್ಲಿ ಎಂ.ಎ. ಪದವಿ ಪಡೆಯುವುದಕ್ಕಾಗಿ ಅಂತಿಮ ವರ್ಷದ ಪರೀಕ್ಷೆ ಬರೆದಿದ್ದಾರೆ.

ನೆರೆಯ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗುಡೂರು ಬಳಿಯ ಎಸ್.ಸಿ.ಹಳ್ಳಿ ಗ್ರಾಮದ ನಿಂಗಯ್ಯ ಒಡೆಯರ ಎಂಬ ಹಿರಿಯ ನಾಯಕರೇ ಈ ಶೈಕ್ಷಣಿಕ ಸಾಧನೆಗೆ ಮುಂದಾಗಿರುವ ಮಾದರಿ ಹಿರಿಯ ವಿದ್ಯಾರ್ಥಿ.

ಸರಕಾರಿ ಸೇವೆಯಿಂದ ವಯೋ ನಿವೃತ್ತಿಯಾದ ಬಳಿಕ ಓದುವ ಹವ್ಯಾಸ ಬೆಳೆಸಿಕೊಂಡ ನಿಂಗಯ್ಯ ಒಡೆಯರ, ತನ್ನ ಓದನ್ನು ಶೈಕ್ಷಣಿಕ ಸಾಧನೆಗೆ ಬಳಸಿಕೊಳ್ಳಲು ಮುಂದಾದರು. ಇದಕ್ಕಾಗಿ ಈಗಾಗಲೇ ಕನ್ನಡ, ಹಿಂದಿ ಮತ್ತು ಇಂಗ್ಲೀಷ ವಿಷಯದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಇದೀಗ ಇಂದಿರಾ ಗಾಂಧಿ ಮುಕ್ತ ವಿಶ್ವವಿದ್ಯಾಲಯ (ಇಗ್ನೋ) ದಿಂದ ಎಂ.ಎ. ಇಂಗ್ಲೀಷ್ ಅಂತಿಮ ವರ್ಷದ ಪರೀಕ್ಷೆ ಬರೆಯುತ್ತಿದ್ದಾರೆ. ಇದು ನಿಂಗಯ್ಯ ಅವರ 5ನೇ ಸ್ನಾತಕೋತ್ತರ ಪರೀಕ್ಷೆ ಎಂಬುದು ಗಮನೀಯ.

ಇಗ್ನೋ ಮೂಲಕವೇ ಅದಾಗಲೇ ಸಮಾಜಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಆದರೂ ಇವರಿಗೆ ಶೈಕ್ಷಣಿಕ ಓದು ಹಾಗೂ ಪರೀಕ್ಷೆ ಎದುರಿಸುವ ಹಂಬಲ ಕಡಿಮೆಯಾಗದ ಕಾರಣ ಎಂ.ಎ. ಇಂಗ್ಲೀಷ ಪರೀಕ್ಷೆಗೆ ಬರೆಯುವ ಮೂಲಕ ವಿದ್ಯಾರ್ಥಿ ಯುವ ಸಮೂಹಕ್ಕೆ ಮಾದರಿಯಾಗಿದ್ದಾರೆ.

ವಿಜಯಪುರ ನಗರದಲ್ಲಿರುವ ಬಿಎಲ್‍ಡಿಇ ನರ್ಸಿಂಗ್ ಕಾಲೇಜಿನಲ್ಲಿ ನಡೆಯುತ್ತಿರುವ ಇಗ್ನೋ ಸ್ನಾತಕೋತ್ತರ ಪರೀಕ್ಷೆಯಲ್ಲಿ ಎಂ.ಎ. ಪರೀಕ್ಷೆ ಬರೆಯುತ್ತಿರುವ ನಿಂಗಯ್ಯ, ತಮ್ಮ ವಯಸ್ಸಿನ ಕಾರಣಕ್ಕೆ ಇದೀಗ ಪರೀಕ್ಷಾ ಕೇಂದ್ರದಲ್ಲಿ ಆಕರ್ಷಕ ವ್ಯಕ್ತಿಯಾಗಿದ್ದು, ಮಾತ್ರವಲ್ಲ ಯುವ ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಬರೆಯುವ ಸ್ಫೂರ್ತಿ ತುಂಬುವ ಚೈತನ್ಯವಾಗಿ ಹೊರ ಹೊಮ್ಮಿದ್ಧಾರೆ.

ತಮ್ಮ ಈ ಸಾಧನೆಗೆ ಪತ್ನಿಯ ಪ್ರೋತ್ಸಾಹವೇ ಕಾರಣ ಎಂದು ಹೆಮ್ಮೆಯಿಂದ ಮುಗುಳುನಗೆ ಬೀರುವ ನಿಂಗಯ್ಯ ಅವರ ಓದುವ ಹವ್ಯಾಸ, ಪರೀಕ್ಷೆ ಬರೆಯುವ ಉಮೇದು ಕಂಡು ಇಗ್ನೋ ಪ್ರಾಂತ ನಿರ್ದೇಶಕ ಡಾ. ಎ.ವರದರಾಜನ, ಸಹಾಯಕ ನಿರ್ದೇಶಕ ಡಾ. ಬಿ.ಎನ್.ದೇವೇಂದ್ರ ಅಚ್ಚರಿ ಹಾಗೂ ಸಂತಸ ವ್ಯಕ್ತಪಡಿಸಿದ್ದಾರೆ.

ನಿಂಗಯ್ಯ ಅವರ ಜೀವನೋತ್ಸಾಹಕ್ಕೆ ಬಿ.ಎಲ್.ಡಿ. ಇ ನರ್ಸಿಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಶಾಲ್ಮೊನ್ ಚೋಪಡೆ, ಇಗ್ನೋ ಸಹ ಸಂಯೋಜಕ ಡಾ. ಸತೀಶ ನಡಗಡ್ಡಿ ಸಂತಸ ವ್ಯಕ್ತಪಡಿಸಿ, ಇಳಿವಯದಲ್ಲೂ ಪರೀಕ್ಷೆ ಬರೆಯುವ ಹುಮ್ಮಸ್ಸು ಕಂಡು, ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

dw

Muddebihal: ಬೈಕ್ ವ್ಹೀಲಿಂಗ್ ನಾಲ್ವರು ಯುವಕರ ಬಲಿ

Yathanal

Ganesh Festival: ಪ್ರಸಾದಕ್ಕೆ ಪರವಾನಗಿ: ಹಿಂದೂ ಹಬ್ಬಗಳ ಹತ್ತಿಕ್ಕುವ ಪ್ರಯತ್ನ: ಯತ್ನಾಳ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.