Vijayapura: ಬಕ್ರೀದ್ ಹಬ್ಬದ ಹಿನ್ನೆಲೆ… ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಜಿಲ್ಲಾಡಳಿತ

ಅಕ್ರಮವಾಗಿ ಜಾನುವಾರು ಸಾಗಿಸಿದರೆ ವಾಹನ ವರವಾನಿಗೆ ರದ್ದು

Team Udayavani, Jun 12, 2024, 4:45 PM IST

Vijayapura: ಬಕ್ರೀದ್ ಹಬ್ಬ… ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಜಿಲ್ಲಾಡಳಿತ

ವಿಜಯಪುರ: ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುವುದು ಕಂಡು ಬಂದಲ್ಲಿ ಕೂಡಲೇ ಕ್ರಮ ಕೈಗೊಳ್ಳಬೇಕು. ಅಕ್ರಮವಾಗಿ ಜಾನುವಾರು ಹತ್ಯೆ ಮಾಡುವವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಡಳಿತದ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ತಾಕೀತು ಮಾಡಿದೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಜರುಗಿದ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ಸಾಗಾಟ ಹಾಗೂ ವಧೆ ತಡೆಗಟ್ಟುವ ಪೂರ್ವ ಸಿದ್ಧತೆ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಅನಧಿಕೃತವಾಗಿ ಜಾನುವಾರಗಳ ಸಾಗಾಟ ಮಾಡುವ ವಾಹನಗಳ ನೋಂದಣಿ ರದ್ದುಪಡಿಸುವ ಕುರಿತು ಕ್ರಮಕೈಗೊಳ್ಳಬೇಕು ಎಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

2020-21 ನೇ ಕರ್ನಾಟಕ ಅಧ್ಯಾದೇಶ ಸಂಖ್ಯೆ ಕರ್ನಾಟಕ ಜಾನುವಾರು ಹತ್ಯೆ ಪ್ರಭಂದಕ ಮತ್ತು ಸಂರಕ್ಷಣಾ ಅಧ್ಯಾದೇಶ ರನ್ವಯ ಎಲ್ಲಾ ವಯಸ್ಸಿನ ಆಕಳು, ಆಕಳು ಕರ, ಹೋರಿ, 13 ವರ್ಷದೊಳಗಿನ ಎಮ್ಮೆ ಕೋಣಗಳ ವಧೆ ಮಾಡುವಂತಿಲ್ಲ. ಜಿಲ್ಲೆಯಲ್ಲಿ ಸದರಿ ಕಾಯ್ದೆ ಉಲ್ಲಘನೆಯಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಅನಧಿಕೃತ ಜಾನುವಾರುಗಳ ಅಕ್ರಮ ಸಾಗಟು ತಡೆಗೆ ಜಿಲ್ಲೆಯ ಕನಮಡಿ, ಅರಕೇರಿ ಸಿದ್ಧಾಪುರ, ಯತ್ನಾಳ, ಧೂಳಖೇಡ, ಶಿರದೋಣ, ಅಗರಖೇಡ ಸೇರಿದಂತೆ ಜಿಲ್ಲೆಯ ಗಡಿಯಲ್ಲಿ ಅಗತ್ಯ ಚೆಕ್‍ ಪೋಸ್ಟ್ ಸ್ಥಾಪಿಸಲಾಗಿದೆ. ಹಬ್ಬದ ಹಿಂದಿನ 3 ದಿನಗಳು ಅಧಿಕಾರಿಗಳು ಕಟ್ಟುನಿಟ್ಟಾಗಿ ಎಲ್ಲಾ ವಾಹನಗಳನ್ನು ತಪಾಸಣೆ ಮಾಡಬೇಕು ಎಂದು ಸೂಚಿಸಿದರು.

ಬಕ್ರೀದ್ ಹಬ್ಬಕ್ಕೆ ಮೂರು ಮುನ್ನವೇ ನಗರಪಾಲಿಕೆ ಸೇರಿದಂತೆ ಸ್ಥಾನಿಕ ಆಡಳಿತಗಳು, ಪಶುಪಾಲನಾ ಇಲಾಖೆ, ಪೊಲೀಸ್ ಇಲಾಖೆಗಳ ಅಧಿಕಾರಿಗಳ ತಂಡ ರಚಿಸಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ತಾಲೂಕು ವ್ಯಾಪ್ತಿಯಲ್ಲಿ ತಹಶೀಲ್ದಾರ ನೇತೃತ್ವದಲ್ಲಿ ತಂಡಗಳನ್ನು ರಚಿಸಿಕೊಂಡು ಅಕ್ರಮ ಸಾಗಣೆ ಹಾಗೂ ವಧೆ ತಡೆಗಟ್ಟಲು ಕಾರ್ಯೋನ್ಮುಖರಾಗಬೇಕು ಎಂದು ನಿರ್ದೇಶನ ನೀಡಿದರು.

13 ವರ್ಷ ವಯಸ್ಸು ಮೀರಿದ ಎಮ್ಮೆ ಹಾಗೂ ಕೊಣಗಳನ್ನು ವಧೆ ಮಾಡಬಹುದು. ಆದರೆ ಇದಕ್ಕೆ ಸಂಬಂಧಿಸಿದಂತೆ ಪಶು ಇಲಾಖೆಯಿಂದ ನಿರಾಪೇಕ್ಷಣೆ ಪತ್ರ ಹಾಗೂ ವೈದ್ಯಕೀಯ ತಪಾಸಣೆ ಪತ್ರ ಹೊಂದಿರಬೇಕು ಎಂದು ತಿಳಿಸಿದರು.

ಜಾನುವಾರುಗಳ ಸಾಗಾಟ ಮಾಡುವಾಗ, ಖರೀದಿಸುವಾಗ, ಮಾರಾಟ ಮಾಡುವ ಸಂದರ್ಭದಲ್ಲಿ ಜಾನುವಾರುಗಳಿಗೆ ಕಿವಿಯೋಲೆ ಇರುವುದು ಕಡ್ಡಾಯ. ಸಾಗಾಣಿಕೆ ಸಂದರ್ಭದಲ್ಲಿ ಸಂಬಂಧಿಸಿದ ಅಧಿಕಾರಿಗಳಿಂದ ದೃಢೀಕರಣ ಪತ್ರ ತೆಗೆದುಕೊಂಡು ಸಾಗಾಣಿಕೆ ಮಾಡುವುದು ಕಡ್ಡಾಯವಾಗಿರುತ್ತದೆ ಎಂದರು.

ಜಿಲ್ಲೆಯ ಎಲ್ಲಾ ಜಾನುವಾರುಗಳ ಮಾಲೀಕರು ತಮ್ಮ ಜಾನುವಾರುಗಳಿಗೆ ಗುರುತಿನ ಸಂಖ್ಯೆ ಹೊಂದಿರುವ ಕಿವಿಯೋಲೆ ಹಾಕುವಂತೆ ನಿರ್ದೇಶನ ನೀಡಬೇಕು. ಹಬ್ಬದ ಸಂದರ್ಭದಲ್ಲಿ ಮಾಂಸದ ತಾಜ್ಯಗಳನ್ನು ಎಲ್ಲೆಂದರಲ್ಲಿ ಬಿಸಾಡದೇ, ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.

ಮಹಾನಗರಪಾಲಿಕೆ, ಪುರಸಭೆ, ಪಟ್ಟಣ ಪಂಚಾಯತ್, ಗ್ರಾಮ ಪಂಚಾಯತ್ ಸೇರಿದಂತೆ ನಗರ, ಗ್ರಮೀಣ ಸ್ಥಳೀಯ ಸಂಸ್ಥೆಗಳು ಈ ಬಗ್ಗೆ ಮಾಂಸ ಮಾರಾಟಗಾರರಿಗೆ ತಿಳಿವಳಿಕೆ ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿ.ಪಂ. ಸಿಇಒ ರಿಷಿ ಆನಂದ, ಎಸ್ಪಿ ಋಷಿಕೇಶ ಸೋನಾವಣೆ, ಎಎಸ್ಪಿ ಶಂಕರ ಮಾರಿಹಾಳ, ಪಶುಪಾಲನಾ ಮತ್ತು ಪಶವೈದ್ಯ ಸೇವಾ ಇಲಾಖೆಯ ಅಶೋಕ ಘೋಣಸಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ: Indian Films: ಯುಕೆ ನ್ಯಾಷನಲ್‌ ಫಿಲ್ಮ್‌ ಅವಾರ್ಡ್ಸ್‌ಗೆ ಭಾರತದ ಎರಡು ಚಿತ್ರಗಳು ನಾಮಿನೇಟ್

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.