Vijayapura: ಬಕ್ರೀದ್ ಹಬ್ಬದ ಹಿನ್ನೆಲೆ… ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಜಿಲ್ಲಾಡಳಿತ

ಅಕ್ರಮವಾಗಿ ಜಾನುವಾರು ಸಾಗಿಸಿದರೆ ವಾಹನ ವರವಾನಿಗೆ ರದ್ದು

Team Udayavani, Jun 12, 2024, 4:45 PM IST

Vijayapura: ಬಕ್ರೀದ್ ಹಬ್ಬ… ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಜಿಲ್ಲಾಡಳಿತ

ವಿಜಯಪುರ: ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುವುದು ಕಂಡು ಬಂದಲ್ಲಿ ಕೂಡಲೇ ಕ್ರಮ ಕೈಗೊಳ್ಳಬೇಕು. ಅಕ್ರಮವಾಗಿ ಜಾನುವಾರು ಹತ್ಯೆ ಮಾಡುವವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಡಳಿತದ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ತಾಕೀತು ಮಾಡಿದೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಜರುಗಿದ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ಸಾಗಾಟ ಹಾಗೂ ವಧೆ ತಡೆಗಟ್ಟುವ ಪೂರ್ವ ಸಿದ್ಧತೆ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಅನಧಿಕೃತವಾಗಿ ಜಾನುವಾರಗಳ ಸಾಗಾಟ ಮಾಡುವ ವಾಹನಗಳ ನೋಂದಣಿ ರದ್ದುಪಡಿಸುವ ಕುರಿತು ಕ್ರಮಕೈಗೊಳ್ಳಬೇಕು ಎಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

2020-21 ನೇ ಕರ್ನಾಟಕ ಅಧ್ಯಾದೇಶ ಸಂಖ್ಯೆ ಕರ್ನಾಟಕ ಜಾನುವಾರು ಹತ್ಯೆ ಪ್ರಭಂದಕ ಮತ್ತು ಸಂರಕ್ಷಣಾ ಅಧ್ಯಾದೇಶ ರನ್ವಯ ಎಲ್ಲಾ ವಯಸ್ಸಿನ ಆಕಳು, ಆಕಳು ಕರ, ಹೋರಿ, 13 ವರ್ಷದೊಳಗಿನ ಎಮ್ಮೆ ಕೋಣಗಳ ವಧೆ ಮಾಡುವಂತಿಲ್ಲ. ಜಿಲ್ಲೆಯಲ್ಲಿ ಸದರಿ ಕಾಯ್ದೆ ಉಲ್ಲಘನೆಯಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಅನಧಿಕೃತ ಜಾನುವಾರುಗಳ ಅಕ್ರಮ ಸಾಗಟು ತಡೆಗೆ ಜಿಲ್ಲೆಯ ಕನಮಡಿ, ಅರಕೇರಿ ಸಿದ್ಧಾಪುರ, ಯತ್ನಾಳ, ಧೂಳಖೇಡ, ಶಿರದೋಣ, ಅಗರಖೇಡ ಸೇರಿದಂತೆ ಜಿಲ್ಲೆಯ ಗಡಿಯಲ್ಲಿ ಅಗತ್ಯ ಚೆಕ್‍ ಪೋಸ್ಟ್ ಸ್ಥಾಪಿಸಲಾಗಿದೆ. ಹಬ್ಬದ ಹಿಂದಿನ 3 ದಿನಗಳು ಅಧಿಕಾರಿಗಳು ಕಟ್ಟುನಿಟ್ಟಾಗಿ ಎಲ್ಲಾ ವಾಹನಗಳನ್ನು ತಪಾಸಣೆ ಮಾಡಬೇಕು ಎಂದು ಸೂಚಿಸಿದರು.

ಬಕ್ರೀದ್ ಹಬ್ಬಕ್ಕೆ ಮೂರು ಮುನ್ನವೇ ನಗರಪಾಲಿಕೆ ಸೇರಿದಂತೆ ಸ್ಥಾನಿಕ ಆಡಳಿತಗಳು, ಪಶುಪಾಲನಾ ಇಲಾಖೆ, ಪೊಲೀಸ್ ಇಲಾಖೆಗಳ ಅಧಿಕಾರಿಗಳ ತಂಡ ರಚಿಸಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ತಾಲೂಕು ವ್ಯಾಪ್ತಿಯಲ್ಲಿ ತಹಶೀಲ್ದಾರ ನೇತೃತ್ವದಲ್ಲಿ ತಂಡಗಳನ್ನು ರಚಿಸಿಕೊಂಡು ಅಕ್ರಮ ಸಾಗಣೆ ಹಾಗೂ ವಧೆ ತಡೆಗಟ್ಟಲು ಕಾರ್ಯೋನ್ಮುಖರಾಗಬೇಕು ಎಂದು ನಿರ್ದೇಶನ ನೀಡಿದರು.

13 ವರ್ಷ ವಯಸ್ಸು ಮೀರಿದ ಎಮ್ಮೆ ಹಾಗೂ ಕೊಣಗಳನ್ನು ವಧೆ ಮಾಡಬಹುದು. ಆದರೆ ಇದಕ್ಕೆ ಸಂಬಂಧಿಸಿದಂತೆ ಪಶು ಇಲಾಖೆಯಿಂದ ನಿರಾಪೇಕ್ಷಣೆ ಪತ್ರ ಹಾಗೂ ವೈದ್ಯಕೀಯ ತಪಾಸಣೆ ಪತ್ರ ಹೊಂದಿರಬೇಕು ಎಂದು ತಿಳಿಸಿದರು.

ಜಾನುವಾರುಗಳ ಸಾಗಾಟ ಮಾಡುವಾಗ, ಖರೀದಿಸುವಾಗ, ಮಾರಾಟ ಮಾಡುವ ಸಂದರ್ಭದಲ್ಲಿ ಜಾನುವಾರುಗಳಿಗೆ ಕಿವಿಯೋಲೆ ಇರುವುದು ಕಡ್ಡಾಯ. ಸಾಗಾಣಿಕೆ ಸಂದರ್ಭದಲ್ಲಿ ಸಂಬಂಧಿಸಿದ ಅಧಿಕಾರಿಗಳಿಂದ ದೃಢೀಕರಣ ಪತ್ರ ತೆಗೆದುಕೊಂಡು ಸಾಗಾಣಿಕೆ ಮಾಡುವುದು ಕಡ್ಡಾಯವಾಗಿರುತ್ತದೆ ಎಂದರು.

ಜಿಲ್ಲೆಯ ಎಲ್ಲಾ ಜಾನುವಾರುಗಳ ಮಾಲೀಕರು ತಮ್ಮ ಜಾನುವಾರುಗಳಿಗೆ ಗುರುತಿನ ಸಂಖ್ಯೆ ಹೊಂದಿರುವ ಕಿವಿಯೋಲೆ ಹಾಕುವಂತೆ ನಿರ್ದೇಶನ ನೀಡಬೇಕು. ಹಬ್ಬದ ಸಂದರ್ಭದಲ್ಲಿ ಮಾಂಸದ ತಾಜ್ಯಗಳನ್ನು ಎಲ್ಲೆಂದರಲ್ಲಿ ಬಿಸಾಡದೇ, ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.

ಮಹಾನಗರಪಾಲಿಕೆ, ಪುರಸಭೆ, ಪಟ್ಟಣ ಪಂಚಾಯತ್, ಗ್ರಾಮ ಪಂಚಾಯತ್ ಸೇರಿದಂತೆ ನಗರ, ಗ್ರಮೀಣ ಸ್ಥಳೀಯ ಸಂಸ್ಥೆಗಳು ಈ ಬಗ್ಗೆ ಮಾಂಸ ಮಾರಾಟಗಾರರಿಗೆ ತಿಳಿವಳಿಕೆ ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿ.ಪಂ. ಸಿಇಒ ರಿಷಿ ಆನಂದ, ಎಸ್ಪಿ ಋಷಿಕೇಶ ಸೋನಾವಣೆ, ಎಎಸ್ಪಿ ಶಂಕರ ಮಾರಿಹಾಳ, ಪಶುಪಾಲನಾ ಮತ್ತು ಪಶವೈದ್ಯ ಸೇವಾ ಇಲಾಖೆಯ ಅಶೋಕ ಘೋಣಸಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ: Indian Films: ಯುಕೆ ನ್ಯಾಷನಲ್‌ ಫಿಲ್ಮ್‌ ಅವಾರ್ಡ್ಸ್‌ಗೆ ಭಾರತದ ಎರಡು ಚಿತ್ರಗಳು ನಾಮಿನೇಟ್

ಟಾಪ್ ನ್ಯೂಸ್

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Andhra-Kalyan–Khandre

Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.