Vijayapura; ನೀರಿಗೆ ಆಗ್ರಹ: ಎತ್ತುಗಳೊಂದಿಗೆ ಕೆರೆಯಲ್ಲಿ ರೈತರ ಧರಣಿ
Team Udayavani, Feb 18, 2024, 2:23 PM IST
ವಿಜಯಪುರ: ತಮ್ಮ ಕೆರೆಗಳಿಗೆ ಕಾಲುವೆ ಮೂಲಕ ನೀರು ತುಂಬಿಸುವಂತೆ ಆಗ್ರಹಿಸಿ ರೈತರು ರೈತರು ಎತ್ತುಗಳೊಂದಿಗೆ ಬರಿದಾದ ಕೆರೆಯಲ್ಲಿ ಸುಡುವ ಬಿಸಲನ್ನೂ ಲೆಕ್ಕಿಸದೆ ಪ್ರತಿಭಟನೆ ಆರಂಭಿಸಿದ್ದಾರೆ.
ಜಿಲ್ಲೆಯಲ್ಲಿ ಪ್ರಮುಖ ಏತ ನೀರಾವರಿಯಾಗಿರುವ ಚಿಮ್ಮಲಗಿ ಮುಖ್ಯ ಕಾಲುವೆ ಮೂಲಕ ತಮ್ಮ ಭಾಗದ ಕೆರೆಗಳಿಗೆ ನೀರು ಹರಿಸಬೇಕು. ಜನ ಜಾನುವಾರುಗಳಿಗೆ ಕುಡಿಯಲು ನೀರಿಲ್ಲದ ಕಾರಣ ಕೂಡಲೇ ಸರ್ಕಾರ ಕಾಲುವೆಗೆ ನೀರು ಹರಿಸಬೇಕು ಎಂದು ಆಗ್ರಹಿಸಿ ವಿವಿಧ ಗ್ರಾಮಗಳ ರೈತರು ಕಡ್ಲೇವಾಡ ಗ್ರಾಮದಲ್ಲಿ ನೀರಿಲ್ಲದೆ ಬರಿದಾಗಿರುವ ಕೆರೆಯಲ್ಲಿ ಎತ್ತುಗಳೊಂದಿಗೆ ಧರಣಿ ಆರಂಭಿಸಿದ್ದಾರೆ.
ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಮುಳಸಾವಳಗಿ, ಚಿಕ್ಕರೂಗಿ, ಕಡ್ಲೇವಾಡ ಸೇರಿದಂತೆ ವಿವಿಧ ಗ್ರಾಮಗಳ ರೈತರು ತಮ್ಮ ಜಾನುವಾರುಗಳೊಂದಿಗೆ ಆಗಮಿಸಿ ಕೆರೆಯಲ್ಲಿ ಧರಣಿ ಆರಂಭಿಸಿದ್ದಾರೆ.
ಚಿಮ್ಮಲಗಿ ಏತ ನೀರಾವರಿ ಯೋಜನೆ ನಾಗಠಾಣಾ ಸೇರಿದಂತೆ ವಿವಿಧ ಕಾಲುವೆ-ಉಪ ಕಾಲುವೆಗಳಿಗೆ ನೀರು ಹರಿಸಲು ಅಗ್ರಹಿಸಿ ಧರಣಿ ಆರಂಭಿಸಿದ್ದು, ಸರ್ಕಾರ ಹಾಗೂ ಜಿಲ್ಲಾಡಳಿತ ತಕ್ಷಣ ಸ್ಪಂದಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.
ಮಧ್ಯಾಹ್ನದ ಬಿರು ಬಿಸಿಲನ್ನೂ ಲೆಕ್ಕಿಸದೆ ನೀರಿಲ್ಲದ ಕೆರೆಯಲ್ಲಿ ಧರಣಿ ಆರಂಭಿಸಿರುವ ರೈತರು, ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ಅಭಾವ ಎದುರಾಗಿದೆ. ಕೂಡಲೇ ಕಾಲುವೆಗಳಿಗೆ ನೀರು ಹರಿಸಿ ನಮ್ಮ ಭಾಗದ ಎಲ್ಲ ಕೆರೆಗಳಿಗೆ ನೀರು ತುಂಬಿಸಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Vijayapura: ರಾಜಕಾಲುವೆಗೆ ಬಿದ್ದು 2 ವರ್ಷದ ಮಗು ಸಾವು
Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
Basangouda Patil Yatnal: ಫಸ್ಟ್ ಲೈನ್ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ
Vijayapura: ಖರ್ಗೆ ಕುಟುಂಬ ನಿವೇಶನ ವಾಪಸ್ ಕೊಟ್ಟಿದ್ದು ಗೊತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.