Vijayapura; ಅಪಘಾತದಂತೆ ಬಿಂಬಿಸಿ ಸಂಚಿನಿಂದ ವಕೀಲನ ಹತ್ಯೆ; ಐವರ ಬಂಧನ


Team Udayavani, Aug 13, 2024, 8:11 PM IST

Vijayapura; ಅಪಘಾತದಂತೆ ಬಿಂಬಿಸಿ ಸಂಚಿನಿಂದ ವಕೀಲನ ಹತ್ಯೆ; ಐವರ ಬಂಧನ

ವಿಜಯಪುರ: ನಗರದಲ್ಲಿ ಆ.8 ರಂದು ನಡೆದಿದ್ದ ವಕೀಲನ ಸಾವು ಅಪಘಾತದಿಂದ ಆದ್ದದ್ದಲ್ಲ, ಹಳೆಯ ಧ್ವೇಷದ ಹಿನ್ನೆಲೆಯಲ್ಲಿ ವ್ಯವಸ್ಥಿತ ಸಂಚಿನಿಂದ ನಡೆಸಿದ ಹತ್ಯೆ ಎಂಬುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಪ್ರಕರಣದಲ್ಲಿ ಐವರನ್ನು ಬಂಧಿಸಿರುವ ಪೊಲೀಸರು, ತಲೆ ಮರೆಸಿಕೊಂಡಿರುವ ಇತರರ ಪತ್ತೆಗೆ ಜಾಲ ಬೀಸಿದ್ದಾರೆ.

ಮಂಗಳವಾರ ತಮ್ಮ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪ್ರಕರಣದ ವಿವರ ನೀಡಿದ ಎಸ್ಪಿ ಋಷಿಕೇಶ ಭಗವಾನ್, ನಗರದಲ್ಲಿ ಆ.8 ರಂದು ಸಂಜೆ 5-30 ರ ಸುಮಾರಿಗೆ ನಡೆದಿದ್ದ ಅಪಘಾತದಲ್ಲಿ ಇನ್ನೋವಾ ಕಾರಿನಲ್ಲಿ ಸಿಲುಕಿ ಸುಮಾರು ಎರಡೂವರೆ ಕಿ.ಮೀ. ದೂರಕ್ಕೆ ಎಳೆದೊಯ್ದ ಘಟನೆಯಲ್ಲಿ ನಗರದ ಯುವ ವಕೀಲ ರವಿ ಮೇಲಿನಕೇರಿ ಮೃತಪಟ್ಟಿದ್ದ.

ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದಿದ್ದ ಪೊಲೀಸರಿಗೆ ಇದು ಅಪಘಾತದಿಂದ ಆಗಿರುವ ಸಾವಲ್ಲ, ಬೆಚ್ಚಿಬೀಳುವಂತ ಸಂಚು ರೂಪಿಸಿ ಹತ್ಯೆ ಎಂದು ಲಭ್ಯವಾದ ಸುಳಿವು ಆಧರಿಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ತುಳಸಿರಾಮ ಹರಿಜನ, ಅಲೆಕ್ಸ್ ಗೊಲ್ಲರ, ಷಣ್ಮುಖ ನಡುವಿನಕೇರಿ, ಪ್ರಕಾಶ ಗೊಲ್ಲರ, ಮುರುಗೇಶ ಉಳ್ಳಾಗಡ್ಡಿ ಎಂಧು ಗುರುತಿಸಲಾಗಿದೆ. ಬಂಧಿತರೆಲ್ಲರೂ ದಿನಗೂಲಿ ಕಾರ್ಮಿಕರಾಗಿದ್ದು, ಎಲ್ಲರೂ ಅಪರಾಧ ಪ್ರಕರಣಗಳ ಹಿನ್ನೆಲೆ ಹೊಂದಿದ್ದಾರೆ. ಎಲ್ಲರ ಮೇಲೂ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಹತ್ಯೆ, ಹತ್ಯೆ ಯತ್ನ, ದರೋಡೆ, ಜೀವ ಬೆದರಿಕೆಯಂಥ ಪ್ರಕರಣ ದಾಖಲಾಗಿವೆ.

ಬಂಧಿತ ಆರೋಪಿಗಳು ಇತರರೊಂದಿಗೆ ಸೇರಿ ವಕೀಲ ರವಿ ಕೋರ್ಟ್‌ ನಿಂದ ಮನೆಗೆ ಹೊರಟಿದ್ದಾಗ ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ವಾಹನದಲ್ಲಿ ಬಂದು ಡಿಕ್ಕಿ ಹೊಡೆದಿದ್ದರು. ಡಿಕ್ಕಿಯ ಬಳಿಕ ಸುಮಾರು ಎರಡೂವರೆ ಕಿ.ಮೀ. ವರೆಗೆ ರವಿಯನ್ನು ರಸ್ತೆಯಲ್ಲೇ ಎಳೆದೊಯ್ದ ಕಾರಣ ರವಿ ಸ್ಥಳದಲ್ಲೇ ಮೃತಪಟ್ಟಿದ್ದ.

ವಕೀಲ ರವಿ ತನ್ನ ಸಹೋದರರ ಜೊತೆ ಸೇರಿ ಸುಮಾರು 4-5 ತಿಂಗಳ ಹಿಂದೆ ತುಳಸಿರಾಮ ಹರಿಜನ ಎಂಬವನ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಇದಲ್ಲದೇ ಸುಮಾರು 20 ದಿನಗಳ ಹಿಂದೆ ಇದೇ ಅಲೆಕ್ಸ್ ಗೊಲ್ಲರ ಎಂಬವನನ್ನು ಅಪಹರಿಸಿ, ಹತ್ಯೆ ಮಾಡುವ ಬೆದರಿಕೆ ಹಾಕಿದ್ದ.

ಇದರಿಂದ ದ್ವೇಷ ಸಾಧಿಸುತ್ತಿದ್ದ ಈ ಹತ್ಯಾ ಸಂಚಿನ ಸೂತ್ರಧಾರ ತುಳಸಿರಾಮ, ತನ್ನ ಸ್ನೇಹಿತರಾದ ಪ್ರಕರಣದ ಬಂಧಿತ ಆರೋಪಿಗಳೊಂದಿಗೆ ಸೇರಿ ಅಪಘಾತ ಎಂಬಂತೆ ಬಿಂಬಿಸಲು ವ್ಯವಸ್ಥಿತವಾಗಿ ಸಂಚು ರೂಪಿಸಿ ಹತ್ಯೆ ಮಾಡಿದ್ದಾರೆ ಎಂದು ಎಸ್ಪಿ ವಿವರಿಸಿದರು.

ಹತ್ಯೆ ಬಳಸಿರುವ ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರು ಕೂಡ ಜೂಜಾಟದಲ್ಲಿ 1 ಲಕ್ಷ ರೂ.ಗೆ ಸಚಿನ್ ಎಂಬವನಿಂದ ಆರೋಪಿಗಳು ಕಿತ್ತುಕೊಂಡಿದ್ದ ಕಾರು ಎಂಬುದು ಪತ್ತೆಯಾಗಿದೆ. ಇದಲ್ಲದೇ ವಕೀಲ ರವಿ ಕೋರ್ಟ್‍ನಿಂದ ಮನೆಗೆ ಮರಳುವ ಕುರಿತು ನಿಗಾ ಇರಿಸಿ ಮಾಹಿತಿ ನೀಡಲು ಇಬ್ಬರು ಬೈಕ್‍ನಲ್ಲಿ ತಿರುಗುತ್ತಿದ್ದರು ಎಂಬುದು ಪೊಲೀಸರ ತನಿಖೆಯಲ್ಲಿ ಹೊರ ಬಿದ್ದಿದೆ.

ಪ್ರಾಥಮಿಕ ಹಂತದದ ತನಿಖೆಯಲ್ಲಿ ಇಡೀ ಪ್ರಕರಣದಲ್ಲಿ ಇನ್ನೂ ಕೆಲವರು ಈ ಸಂಚಿನಲ್ಲಿ ಪಾಲ್ಗೊಂಡಿರುವ ಮಾಹಿತಿ ಇದೆ, ಅವರೆಲ್ಲ ತಲೆ ಮರೆಸಿಕೊಂಡಿದ್ದಾರೆ. ಇಡೀ ಪ್ರಕರಣವನ್ನು ತ್ವರಿತವಾಗಿ ಪತ್ತೆ ಮಾಡಿ, ಆರೋಪಿಗಳನ್ನು ಬಂಧಿಸುವಲ್ಲಿ ತನಿಖಾ ತಂಡ ಯಶಸ್ವಿಯಾಗಿದೆ.

ಹೀಗಾಗಿ ಡಿಎಸ್ಪಿ ಬಸವರಾಜ ಎಲಿಗಾರ ನೇತೃತ್ವದಲ್ಲಿದ್ದ ಗೋಲಗುಂಬಜ ಸಿಪಿಐ ಮಹಾಂತೇಶ ಮಠಪತಿ, ಗಾಂಧಿಚೌಕ ಠಾಣೆ ಸಿಪಿಐ ಪ್ರದೀಪ ತಳಕೇರಿ ಹಾಗೂ ತಂಡದ ಪೊಲೀಸರ ಕಾರ್ಯಕ್ಕೆ ಬಹುಮಾನ ಘೋಷಿಸಲಾಗಿದೆ. ಸ್ವಾತಂತ್ರ್ಯೋತ್ಸವ ದಿನದಂದು ನಡೆಯುವ ಪರೇಡ್ ಸಮಾರಂಭದಲ್ಲಿ ಬಹುಮಾನ ವಿತರಿಸುವುದಾಗಿ ಹೇಳಿದರು.

ಎಎಸ್ಪಿ ಶಂಕರ ಮಾರಿಹಾಳ, ಡಿಎಸ್ಪಿ ಬಸವರಾಜ ಎಲಿಗಾರ ಸಿಪಿಐ ಪ್ರದೀಪ ತಳಕೇರಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿಪಾಲಾದ ಯುವತಿ: ಶವಕ್ಕಾಗಿ ಶೋಧ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Congress: Make 100 laws, I am Anjala: MLA Basan Gowda Patil Yatnal

Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.