Vijayapura: ಕೃಷ್ಣಾ ನದಿ ತೆಪ್ಪ ದುರಂತ: ಮತ್ತೊಬ್ಬನ ಶವ ಪತ್ತೆ
ಮಹಿಬೂಬ್ ಶವ ಪತ್ತೆ, ರಫೀಕ್ ಗಾಗಿ ಮುಂದುವರೆದ ಶೋಧ ಕಾರ್ಯ
Team Udayavani, Jul 4, 2024, 7:52 AM IST
ವಿಜಯಪುರ: ಮಂಗಳವಾರ ಸಂಜೆ ಜಿಲ್ಲೆಯ ಕೃಷ್ಣಾ ನದಿಯಲ್ಲಿ ಸಂಭವಿಸಿದ್ದ ತೆಪ್ಪ ದುರಂತದಲ್ಲಿ ನಾಪತ್ತೆಯಾಗಿದ್ದ ಮತ್ತೊಬ್ಬನ ಶವ ಪತ್ತೆಯಾಗಿದೆ. ಇದರೊಂದಿಗೆ ನಾಲ್ವರ ಶವ ಪತ್ತೆಯಾದಂತಾಗಿದ್ದು, ಇನ್ನೊಬ್ಬನಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.
ಜುಲೈ 2 ರಂದು ಸಂಜೆ ತೆಪ್ಪ ಮುಳುಗಿ ಐವರು ನಾಪತ್ತೆ ಆಗಿದ್ದು, ಈವರೆಗೆ ಮೂವರ ಶವ ಪತ್ತೆಯಾಗಿದ್ದವು. ನಾಪತ್ತೆ ಆದವರಿಗಾಗಿ ಗುರುವಾರ ಬೆಳಿಗ್ಗೆ 6 ಗಂಟೆಯಿಂದ ಕೃಷ್ಣಾ ನದಿಯಲ್ಲಿ ಶೋಧ ಕಾರ್ಯ ಆರಂಭಿಸಿದಾಗ ನದಿ ತೀರದಲ್ಲಿ ಶವವೊಂದು ತೇಲಿಬಂದಿದೆ. ಪತ್ತೆ ಆಗಿರುವ ಶವ ಮಹಿಬೂಬ್ ವಾಲೀಕಾರ ಎಂದು ಗುರುತಿಸಲಾಗಿದೆ. ಇದರೊಂದಿಗೆ ಬಳೂತಿ ಕೃಷ್ಣಾ ನದಿ ತೆಪ್ಪ ದುರಂತದಲ್ಲಿ ನಾಪತ್ತೆ ಆಗಿದ್ದ ಐವರಲ್ಲಿ ನಾಲ್ವರು ಶವವಾಗಿ ಪತ್ತೆಯಾಗಿದ್ದಾರೆ.
ಶವವಾಗಿ ಪತ್ತೆಯಾದ ನಾಲ್ವರನ್ನು ಪುಂಡಲೀಕ ಯಂಕಂಚಿ, ತಯ್ಯಬ ಚೌಧರಿ, ದಶರಥ ಗೌಡರ, ಮಹಿಬೂಬ್ ವಾಲಿಕಾರ ಎಂದು ಗುರುತಿಸಲಾಗಿದೆ.
ತೆಪ್ಪ ದುರಂತದಲ್ಲಿ ನಾಪತ್ತೆ ಆಗಿರುವ ಇನ್ನೋರ್ವನಾದ ರಫೀಕ ಬಾಂಬೆ ಎಂಬಾತನಿಗಾಗಿ ನದಿಯಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.
ಬಳೂತಿ ಬಳಿ ಕೃಷ್ಣಾ ನದಿಯಲ್ಲಿ ಮಂಗಳವಾರ ಸಂಭವಿಸಿರುವ ತೆಪ್ಪ ದುರಂತದಲ್ಲಿ ನಾಪತ್ತೆ ಆದವರಿಗಾಗಿ ಅಗ್ನಿಶಾಮಕ ಸೇವೆ ಠಾಣೆಗಳ 30 ಸಿಬ್ಬಂದಿ ಯಾಂತ್ರೀಕೃತ 5 ಬೋಟ್ ಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದು, ನದಿಯಲ್ಲಿ ನಾಪತ್ತೆ ಆಗಿರುವ ಐದನೇ ವ್ಯಕ್ತಿಗಾಗಿ ಹುಡುಕಾಟ ಮುಂದುವರೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ
Hindu remark; ಅಂತವರನ್ನು ದೂರ ಇಡಬೇಕು..: ರಾಹುಲ್ ಹೇಳಿಕೆಗೆ ಪೇಜಾವರಶ್ರೀ ಕಿಡಿ
Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ
ತೆಪ್ಪದ ದುರಂತ: ಪೊಲೀಸರ ವರ್ತನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಸಚಿವ ಶಿವಾನಂದ
Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?
MUST WATCH
ಹೊಸ ಸೇರ್ಪಡೆ
MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ
Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್ “ಇಂಜೆಕ್ಷನ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.