Vijayapura; ವಿಜಯೇಂದ್ರ ಹಗರಣದ ತನಿಖೆಗೆ ಯತ್ನಾಳ ಪಾದಯಾತ್ರೆ ನಡೆಸಲಿ:ಎಂ.ಬಿ.ಪಾಟೀಲ ವ್ಯಂಗ್ಯ
Team Udayavani, Aug 11, 2024, 12:27 PM IST
ವಿಜಯಪುರ: ಬಿಜೆಪಿ ಪಕ್ಷದ ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಮತ್ತೊಂದು ಪಾದಯಾತ್ರೆ ನಡೆಸಲಿದ್ದಾರಂತೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನೀಡಿರುವ ಭ್ರಷ್ಟಾಚಾರದ ಪಟ್ಟಿ ಇರಿಸಿಕೊಂಡು ಯತ್ನಾಳ್ ಪಾದಯಾತ್ರೆ ನಡೆಸಲಿ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಕುಟುಕಿದ್ದಾರೆ.
ಭಾನುವಾರ (ಆ.11) ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿ ವಿಜಯೇಂದ್ರ, ಬಿಎಸ್ವೈ ಒಂದು ಬಣ, ಅಶೋಕ್ ಬಣ, ಅಶ್ವತ್ಥನಾರಾಯಣ ಬಣ, ರಮೇಶ ಜಾರಕಿಹೊಳಿ, ಯತ್ನಾಳ ಬಣ, ಬಿ.ಎಲ್. ಸಂತೋಷ ಬಣ ಅಂತೆಲ್ಲ ನನ್ನ ಪ್ರಕಾರ 15-20 ಬಣಗಳಿವೆ. ಎಲ್ಲ ಬಣಗಳೂ ಒಂದೊಂದು ಪಾದಯಾತ್ರೆ ನಡೆಸಲಿ ಎಂದು ವ್ಯಂಗ್ಯವಾಡಿದರು.
ಯತ್ನಾಳ ಅವರೇ ಹೇಳುವಂತೆ ಎಲ್ಲ ಪಕ್ಷಗಳೂ ಸ್ವಚ್ಛವಾಗಲಿ. ತಾವೇ ಹೇಳಿದಂತೆ ವಿಜಯೇಂದ್ರ ಅವರ ಕೋವಿಡ್ ಹಗರಣ, ಮಾರಿಷಸ್ ನಲ್ಲಿ ಇಟ್ಟಿರುವ ಅಕ್ರಮ ಹಣದ ವಿಷಯ ಮುಂದಿರಿಸಿಕೊಂಡು ಪಾದಯಾತ್ರೆ ನಡೆಸಲಿ ಎಂದು ಆಗ್ರಹಿಸಿದರು.
ವಾಲ್ಮೀಕಿ ಹಗರಣ ವಿಚಾರವಾಗಿ ಕೂಡಲಸಂಗಮದಿಂದ ಹೊಸಪೇಟೆವರೆಗೆ ವಿಜಯೇಂದ್ರ ವಿರೋಧಿ ಬಣದಿಂದ ಯೋಜಿಸುತ್ತಿದೆ ಎಂಬ ವಿಷಯವಾಗಿ ಮಾತನಾಡಿದ ಪಾಟೀಲ, ವಾಲ್ಮೀಕಿ ಹಗರಣ ಈಗಾಗಲೇ ಎಸ್ ಐಟಿ ತನಿಖೆ ನಡೆಯುತ್ತಿದೆ. ಸಚಿವರ ಪಾತ್ರ ಇದೆಯೋ ಇಲ್ಲವೋ ಗೊತ್ತಿಲ್ಲ, ರಾಜೀನಾಮೆ ಕೊಟ್ಟಿದ್ದಾರೆ, ತನಿಖೆ ನಡೆಯುತ್ತಿದೆ. ಇಡಿ ಕೂಡಾ ತನಿಖೆ ಮಾಡ್ತಿದೆ ಸತ್ಯಾಂಶ ಹೊರಗೆ ಬರುತ್ತದೆ ಎಂದರು.
89 ಕೋಟಿ ರೂ. ಹಣದಲ್ಲಿ ಈಗಾಗಲೇ 45 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ. ಅಕ್ರಮ ಆಗಿಲ್ಲ ಅಂತೇನಿಲ್ಲ, ಆಗಿದೆ, ಕ್ರಮ ಕೈಗೊಂಡಿದ್ದೇವೆ ಎಂದರು.
ಯತ್ನಾಳ್ ತಾವೇ ಹೇಳಿದಂತೆ ಕೋವಿಡ್ ನಲ್ಲಿ 2 ಸಾವಿರ ಕೋಟಿ ರೂ. ಹಗರಣ, ವಿಜಯೇಂದ್ರ ಮಾರಿಷಸ್ ನಲ್ಲಿ 10 ಸಾವಿರ ಕೋಟಿ ರೂ. ಇರಿಸಿದ್ದಾರೆ ಎಂದು ನಾನು ಹೇಳಲ್ಲ, ಯತ್ನಾಳ ಈ ವಿಷಯ ಮುಂದಿಟ್ಟುಕೊಂಡು ಹೋರಾಟ ಮಾಡಲಿ ಎಂದು ಕುಟುಕಿದರು.
ಭೋವಿ ನಿಗಮ, ತಾಂಡಾ ಅಭಿವೃದ್ಧಿ ನಿಗಮ, ದೇವರಾಜ ಅರಸು ನಿಗಮದಲ್ಲಿ ಅಕ್ರಮ ಆಗಿದೆ. ಈ ವಿಷಯ ಮುಂದಿಟ್ಟುಕೊಂಡು ಯತ್ನಾಳ ಪಾದಯಾತ್ರೆ ಮಾಡಲಿ ಎಂದು ವ್ಯಂಗ್ಯವಾಡಿದರು.
ವಾಲ್ಮೀಕಿ ಹಗರಣ ಒಂದು ಬಿಜೆಪಿ ಸರ್ಕಾರದ ಅವಧಿಯಲ್ಲಿ 20 ಹಗರಣಗಳಿವೆ ಎಲ್ಲವೂ ಸ್ವಚ್ಛ ಮಾಡಬೇಕು ಎನ್ನುವ ಯತ್ನಾಳ ಈ ವಿಷಯಗಳ ನೇತೃತ್ವದಲ್ಲಿ ಹೋರಾಟ ಮಾಡಲಿ ಎಂದರು.
ಯತ್ನಾಳ ಪಕ್ಷಾತೀತವಾಗಿ ಹಗರಣ ಹೊರಗೆ ಬರಲಿ ಎಂದಿದ್ದಾರೆ. ಸಿದ್ದರಾಮಯ್ಯ ಅವರು ಯಾವ ಯಾವ ಇಲಾಖೆಯಲ್ಲಿ ಹಗರಣ ಆಗಿದೆ ಎಂಬುದರ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಇವೆಲ್ಲವನ್ನೂ ಇಟ್ಟುಕೊಂಡು ಯತ್ನಾಳ ಪಾದಯಾತ್ರೆ ಮಾಡಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi ಕ್ಯಾಬಿನೆಟ್ ಅಂದರೆ ಹೋದ ಸಿದ್ದ, ಬಂದ ಸಿದ್ದ: ಅಶೋಕ್
Cabinet Meeting: ಬೀದರ್, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
Bellary; ಜೈಲಿನಲ್ಲಿ ದರ್ಶನ್ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್, ಹೇಮಂತ್
Kalaburagi: ಪಡಿತರದಲ್ಲಿ ತೊಗರಿ ಬೇಳೆ ವಿತರಣೆಗೆ ಯೋಚನೆ: ಸಚಿವ ಮುನಿಯಪ್ಪ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.