Vijayapura: ಸಿಡಿಲು ಬಡಿದು ಕುರಿಗಾಯಿ ಬಾಲಕ ಮೃತ್ಯು… ಕುಟುಂಬಕ್ಕೆ ಆಸರೆಯಾಗಿದ್ದ
Team Udayavani, Apr 11, 2024, 6:07 PM IST
ಇಂಡಿ (ವಿಜಯಪುರ): ಗುರುವಾರ ಸಂಜೆ ಬಿರುಗಾಳಿ ಸಹಿತ ಸಿಡಿಲು ಅಪ್ಪಳಿಸಿ ಕುರಿಗಾಯಿ ಬಾಲಕ ಬಲಿಯಾಗಿರುವ ದುರ್ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ನಡೆದಿದೆ.
ಕುರಿ ಮೇಯಿಸುವಾಗ ಸಿಡಿಲಿಗೆ ಬಲಿಯಾದ ಬಾಲಕನನ್ನು ಬೀರಪ್ಪ ನಿಂಗಪ್ಪ ಅವರಾದಿ (15) ಎಂದು ಗುರುತಿಸಲಾಗಿದೆ.
ಇಂಡಿ ಪಟ್ಟಣದ ಹೊರವಲಯದಲ್ಲಿ ಬೀರಪುಪ ಕುರಿ ಮೇಯಿಸುವಾಗ ಜೋರಾಗಿ ಬಿರುಗಾಳಿ ತುಂತುರು ಮಳೆ ಸುರಿಯಲು ಆರಂಭಿಸಿದೆ. ಈ ವೇಳೆ ಮಳೆಯಿಂದ ರಕ್ಷಣೆ ಪಡೆಯಲು ಬೀರಪ್ಪ ಪಕ್ಕದಲ್ಲಿದ್ದ ಮರದ ಕೆಳಗೆ ಹೋಗಿದ್ದಾಗ ಸಿಡಿಲು ಅಪ್ಪಳಿಸಿದೆ.
ಸಿಡಿಲಿನ ಹೊಡೆತಕ್ಕೆ ಕುರಿಗಾಯಿ ಬಾಲಕ ಬೀರಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕುಟುಂಬಕ್ಕೆ ಆಸರೆಯಾಗಿದ್ದ ಮಗನನ್ನು ಕಳೆದುಕೊಂಡ ತಂದೆ-ತಾಯಿ ಸಂಬಂಧಿಕರು ಗೋಳಾಡುತ್ತಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಲೇ ಇಂಡಿ ಶಹರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಇದನ್ನೂ ಓದಿ: ನಾನು ಹಿಟ್ಲರ್ ಆಗಿದ್ದರೆ…: ವಿನಯ್ ಕುಲಕರ್ಣಿ ಹೇಳಿಕೆಗೆ ತಿರುಗೇಟು ನೀಡಿದ ಪ್ರಹ್ಲಾದ್ ಜೋಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
INDvsNZ: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ದಾಖಲೆ ಬರೆದ ರವಿ ಅಶ್ವಿನ್
Arrested: ನಟ ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್
BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ
Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್ದೇವ್
Female CFO: ಭಾರತದ ಪಾಮ್ ಕೌರ್ಗೆ ಎಚ್ಎಸ್ಬಿಸಿ ಸಿಎಫ್ಒ ಹುದ್ದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.