Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್
Team Udayavani, Apr 30, 2024, 8:14 PM IST
ವಿಜಯಪುರ: ಲೋಕಸಭೆ ಚುನಾವಣೆ ಕರ್ತವ್ಯಕ್ಕೆ ನಿಯೋಜಿತರಾದರೂ ಆದೇಶ ಪಡೆಯದೆ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಇಬ್ಬರು ಶಿಕ್ಷಕರನ್ನು ಸರ್ಕಾರಿ ಸೇವೆಯಿಂದ ಅಮಾನತು ಮಾಡಿ ಜಿಲ್ಲಾ ಚುನಾಣಾಧಿಕಾರಿ ಆದೇಶಿಸಿದ್ದಾರೆ.
ಈ ಇಬ್ಬರು ಶಿಕ್ಷಕರನ್ನು ಸಸ್ಪೆಂಡ್ ಮಾಡಿ ಮಂಗಳವಾರ ಪ್ರತ್ಯೇಕ ಆದೇಶ ಹೊರಡಿಸಿರುವ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಭೂಬಾಲನ್, ಚುನಾವಣೆಯಂಥ ಮಹತ್ವದ ಕರ್ತವ್ಯವಾಗಿದ್ದರೂ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಸಸ್ಪೆಂಡ್ ಮಾಡಿದ್ದಾಗಿ ಆದೇಶದಲ್ಲಿ ವಿವರಿಸಿದ್ದಾರೆ.
ಬಸವನಬಾಗೇವಾಡಿ ತಾಲೂಕಿನ ಅಬ್ಬಿಹಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಭರತ ಭೀಮಪ್ಪ ಗಡೇದ ಎಂಬ ಶಿಕ್ಷಕರೇ ಸಸ್ಪೆಂಡ್ ಆದವರು. ತಮ್ಮ ಶಾಲೆಯ ಮುಖ್ಯೋಪಾದ್ಯರು ಚುನಾವಣೆ ಕರ್ತವ್ಯಕ್ಕೆ ನಿಯೋಜಿತ ಆದೇಶ ಪಡೆಯುವಂತೆ ಸೂಚಿಸಿದರೂ ಭರತ ನಿರಾಕರಿಸಿದ್ದಾರೆ.
ಅಲ್ಲದೇ ಮೇಲಾಧಿಕಾರಿಗಳ ಅನುಮತಿ ಇಲ್ಲದೇ ಕೇಂದ್ರ ಸ್ಥಾನ ಬಿಟ್ಟಿರುವ ಶಿಕ್ಷಕ ಭರತ, ಮೊಬೈಲ್ ಕರೆ ಮಾಡಿ ತಿಳಿಸಿದರೂ ತಾನು ಮಹಾರಾಷ್ಟ್ರದ ಪುಣೆಯಲ್ಲಿರುವುದಾಗಿ ಹೇಳಿ ಮೊಬೈಲ್ ಸ್ವೀಪ್ ಆಫ್ ಮಾಡಿದ್ದಾರೆ.
ಚುನಾವಣೆಯಂಥ ಕರ್ತವ್ಯದ ವಿಷಯದಲ್ಲಿ ನಿರ್ಲಕ್ಷ ತೋರಿದ ಕುರಿತು ಸಹಾಯಕ ಚುನಾವಣಾಧಿಕಾರಿ ನೀಡಿರುವ ವರದಿ ಆಧರಿಸಿ ಶಿಕ್ಷಕ ಭರತ ಅವರನ್ನು ಜಿಲ್ಲಾಧಿಕಾರಿ ಸಸ್ಪೆಂಡ್ ಮಾಡಿದ್ದಾರೆ. ಕೂಡಲೇ ಭರತ್ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡುವಂತೆ ಆದೇಶಿಸಿದ್ದಾರೆ.
ಇನ್ನು ತಾಳಿಕೋಟೆ ತಾಲೂಕಿನ ಹಾಲಗೋಡಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಆರ್.ಐ.ಮುಲ್ಲಾ ಏ.1 ರಂದು ಶಾಲೆಗೆ ಗೈರು ಹಾಜರಾಗಿದ್ದಲ್ಲದೇ, ಚುನಾವಣೆ ಆದೇಶದ ಪ್ರತಿ ಪಡೆಯುವಂತೆ ಸಿಆರ್ಪಿ ಐ.ಎಲ್.ಆಲಮೇಲ್ ಅವರು ನೀಡಿದ ಸೂಚನೆಯನ್ನೂ ನಿರ್ಲಕ್ಷಿಸಿದ್ದಾರೆ.
ಅಲ್ಲದೇ ಮೊಬೈಲ್ ಸ್ವಿಚ್ ಆಫ್ ಮಾಡಿದ್ದು, ಚುನಾವಣೆಯಂಥ ಮಹತ್ವದ ಕರ್ತವ್ಯದ ವಿಷಯದಲ್ಲಿ ನಿರ್ಲಕ್ಷ ತೋರಿದ್ದರಿಂದ ಮುದ್ಧೇಬಿಹಾಳ ತಹಸೀಲ್ದಾರರ ವರದಿ ಆಧರಿಸಿ ಸೇವೆಯಿಂದ ಸಸ್ಪೆಂಡ್ ಮಾಡಿದ್ದಾಗಿ ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ. ಕೂಡಲೇ ಆರ್.ಐ.ಮುಲ್ಳಾ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡುವಂತೆ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ
Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ
Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ
Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ
Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.