![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jul 26, 2023, 12:57 PM IST
ವಿಜಯಪುರ: ಹೊಟ್ಟೆಪಾಡಿಗೆ ದುಡಿಯಲು ಬಂದಿದ್ದ ಕುಟುಂಬದ 12 ವರ್ಷದ ಬಾಲೆಯ ಮೇಲೆ ಅತ್ಯಾಚಾರ ಎಸಗಿದ 60 ರ ವೃದ್ಧನಿಗೆ ವಿಶೇಷ ಪೋಕ್ಸೋ ನ್ಯಾಯಾಲಯ 20 ಜೀವಾವಧಿ ಶಿಕ್ಷೆ ನೀಡಿದೆ. ಜೊತೆಗೆ 20 ಸಾವಿರ ರೂ. ದಂಡವನ್ನೂ ವಿಧಿಸಿ ಆದೇಶಿಸಿದೆ.
ಗದಗ ಜಿಲ್ಲೆಯ ನರಗುಂದ ತಾಲೂಕಿನ ಬೆನಕೊಪ್ಪ ಮೂಲದ ಕುಟುಂಬವೊಂದು ಹೊಟ್ಟೆ ಪಾಡಿಗೆ ಜೀವನ ನಿರ್ಹಣೆಗಾಗಿ ವಿಜಯಪುರ ಜಿಲ್ಲೆಗೆ ಬಂದಿತ್ತು. ಜಿಲ್ಲೆಯ ಕೊಲ್ಹಾರ ತಾಲೂಕಿನ ನಾಗರದಿನ್ನಿ ಗ್ರಾಮದ ಹತ್ತಿರದ ಸಂಬಂಧಿಯೊಬ್ಬರ ಜಮೀನಿನಲ್ಲಿ ವಾವಿದ್ದು, ಕೃಷಿ ಮಾಡಿಕೊಂಡಿತ್ತು.
2022 ಮಾರ್ಚ 20 ರಂದು ಸಂತ್ರಸ್ತ ಬಾಲೆಯ ತಂದೆ-ತಾಯಿ ಅನಾರೋಗ್ಯದ ಕಾರಣ ಬಾಗಲಕೋಟೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸುಳಿವು ಅರಿತ ನಾಗರದಿನ್ನಿ ನಿವಾಸಿಯಾದ 60 ವರ್ಷದ ವೃದ್ಧ ಸಂಗಪ್ಪ ದುಂಡಪ್ಪ ಹಡಪದ ಸಂತ್ರಸ್ತೆಯ ಮನೆಗೆ ಬಂದಿದ್ದ. ಕುಡಿಯುವ ನೀರು ಕೇಳುವ ನೆಪ ಮಾಡಿಕೊಂಡು ಮನೆಗೆ ಬಂದ ಸಂಗಪ್ಪ, ಅಪ್ರಾಪ್ತೆ ಒಬ್ಬಳೇ ಮನೆಯಲ್ಲಿ ಇರುವುದನ್ನು ಗಮನಿಸಿ ಅತ್ಯಾಚಾರ ನಡೆಸಿದ್ದ.
ಅಲ್ಲದೇ ಸದರಿ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕಾಲುವೆಗೆ ಎಸೆದು ಕೊಲೆ ಮಾಡುವ ಬೆದರಿಕೆ ಹಾಕಿದ್ದ. ಆಸ್ಪತ್ರೆಯಿಂದ ಮನೆಗೆ ಬಂದ ಪಾಲಕರು ಕೊಲ್ಹಾರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಸಂಗಪ್ಪ ಹಡಪದ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ವರದಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಹಾಗೂ ಸತ್ರ ವಿಶೇಷ ಪೋಕ್ಸೋ ನ್ಯಾಯಾಲಯದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ರಾಮ ನಾಯಿಕ ಅತ್ಯಾಚಾರಿ ವೃದ್ಧ ಸಂಗಪ್ಪ ಹಡಪದಗೆ 20 ವರ್ಷ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಅಲ್ಲದೇ 20 ಸಾವಿರ ರೂ. ದಂಡವನ್ನೂ ಭರಿಸುವಂತೆ ಆದೇಶಿಸಿದ್ದಾರೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ವಿ.ಜಿ.ಹಗರಗುಂಡ ಸಮರ್ಥವಾಗಿ ವಾದ ಮಂಡಿಸಿದ್ದರು.
ಇದನ್ನೂ ಓದಿ: ಐದು ವರ್ಷ ರಾಜ್ಯ ಸರ್ಕಾರವನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ: ಸಚಿವ ಬಿ. ನಾಗೇಂದ್ರ
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.