Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Team Udayavani, Apr 19, 2024, 1:10 PM IST
ವಿಜಯಪುರ : ಜಿಲ್ಲೆಯ ಬಬಲೇಶ್ವರ ತಾಲೂಕಿನಲ್ಲಿ ಸಿಡಿಲಿನ ಹೊಡೆತಕ್ಕೆ ಓರ್ವ ವ್ಯಕ್ತಿ ಗಾಯಗೊಂಡು, ಎರಡು ಎಮ್ಮೆ, ಒಂದು ಆಕಳು ಸೇರಿದಂತೆ ಮೂವರು ಜಾನುವಾರು ಮೃತಪಟ್ಟಿವೆ.
ಬಬಲೇಶ್ವರ ತಹಶೀಲ್ದಾರರು ಶುಕ್ರವಾರ ಜಿಲ್ಲಾಡಳಿತಕ್ಕೆ ನೀಡಿರುವ ವರದಿಯ ಪ್ರಕಾರ ತಾಲೂಕಿನ ಸಂಗಾಪುರ ಎಸ್.ಎಚ್. ಗ್ರಾಮದ ಲೋಕೇಶ ಜಾನೋಜಿ ಎಂಬ 18 ವರ್ಷದ ಯುವಕ ಗಾಯಗೊಂಡಿದ್ದಾನೆ.
ಗುರುವಾರ ಸಂಜೆ 6-30ಕ್ಕೆ ಸಿಡಿಲು ಬಡಿದು ಗಾಯಗೊಂಡಿದ್ದ ಲೋಕೇಶನನ್ನು ಚಿಕಿತ್ಸೆಗಾಗಿ ವಿಜಯಪುರದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುರುವಾರ ರಾತ್ರಿ 10 ಗಂಟೆ ಸುಮಾರಿಗೆ ಸಿಡಿಲು ಬಡಿದು ಇದೇ ತಾಲೂಕಿನ ಶೇಗುಣಸಿ ಗ್ರಾಮದ ರೈತ ಚನ್ನಪ್ಪ ಕಟಗೇರಿ ಇವರಿಗೆ ಸೇರಿದ ಎಮ್ಮೆ ಹಾಗೂ ಮಮದಾಪೂರ ಹೋಬಳಿ ವ್ಯಾಪ್ತಿಯ ಮಂಗಳೂರು ಗ್ರಾಮದಲ್ಲಿ ಪ್ರಕಾಶ ಹಾದಿಮನಿ ಇವರಿಗೆ ಸೇರಿದ ಆಕಳು ಮೃತಪಟ್ಟಿವೆ.
ತಿಕೋಟಾ ತಾಲೂಕಿನ ಬಾಬಾನಗರ ಗ್ರಾಮದಲ್ಲಿ ಸಿಡಿಲಿಗೆ ಎಮ್ಮೆ ಬಲಿಯಾಗಿದ್ದರೆ, ಇದೇ ತಾಲೂಕಿನ ಬರಟಗಿ ತಾಂಡಾ-2 ರಲ್ಲಿ ಮನೆಗಳ ಮೇಲ್ಛಾವಣಿಗೆ ಹೊದಿಸಿದ್ದ ತಗಡು ಹಾರಿಹೋಗಿದ್ದು, ಜನರಿಗೆ ಸಮಸ್ಯೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.