![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Jan 22, 2024, 9:18 AM IST
ವಿಜಯಪುರ: ಪರಸ್ಪರ ಸಂಬಂಧಿಗಳಾಗಿದ್ದರೂ ಧ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಗುಂಡಿನ ದಾಳಿ ನಡೆಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿರುವ ಘಟನೆ ಕೊಲ್ಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೊಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದಲ್ಲಿ ರಾಜು ನ್ಯಾಮಗೊಂಡ ಎಂಬಾತನ ಮೇಲೆ ಶಿವು ಜಗದಾಳೆ ಎಂಬಾತ ಗುಂಡು ಹಾರಿಸಿದ್ದಾನೆ.
ಶಿವು ಜಗದಾಳೆ ಮೂರು ಸುತ್ತು ಗುಂಡು ಹಾರಿಸಿದ ಮಾಹಿತಿ ಲಭ್ಯವಾಗಿದೆ. ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ರಾಜು ನ್ಯಾಮಗೊಂಡ ಎಂಬಾತನನ್ನು ವಿಜಯಪುರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಗುಂಡಿನ ದಾಳಿ ನಡೆಸಿದ ಬಳಿಕ ಆರೋಪಿ ಶಿವು ಜಗದಾಳೆ ಪರಾರಿಯಾಗಿದ್ದಾನೆ.
ಶಿವು ಜಗದಾಳೆ ಹಾಗೂ ರಾಜು ನ್ಯಾಮಗೊಂಡ ಇಬ್ವರೂ ಪರಸ್ಪರ ಸಂಬಂಧಿಗಳೇ ಆಗಿದ್ದರೂ ಕಾರಣಾಂತರದಿಂದ ಉಂಟಾದ ಮನಸ್ತಾಪದಿಂದ ಧ್ಷೇಷ ಬೆಳೆಸಿಕೊಂಡಿದ್ದರು.
ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿರುವ ಕೊಲ್ಹಾರ ಠಾಣೆ ಪೊಲೀಸರು, ರೋಣಿಹಾಳ ಗ್ರಾಮದಲ್ಲಿ ಬೀಡು ಬಿಟ್ಟಿದ್ದಾರೆ.
ಇದನ್ನೂ ಓದಿ: Tragedy: ಹೋರಿ ತಿವಿದು ವ್ಯಕ್ತಿ ಮೃತ್ಯು… ಹೋರಿ ಬೆದರಿಸುವ ಸ್ಪರ್ಧೆಯ ವೇಳೆ ಘಟನೆ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ
You seem to have an Ad Blocker on.
To continue reading, please turn it off or whitelist Udayavani.