Vijayapura: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗೆ 5 ವರ್ಷ ಜೈಲು, 1 ಲಕ್ಷ ದಂಡ
Team Udayavani, Sep 4, 2024, 7:46 PM IST
ವಿಜಯಪುರ: 2019ರಲ್ಲಿ ಶ್ರೀಗಂಧದ ಮರವನ್ನು ಕಡಿದು ಸಾಗಿಸಿದ ಆರೋಪಿಯೋರ್ವನಿಗೆ ಐದು ವರ್ಷ ಜೈಲು ಮತ್ತು ಒಂದು ಲಕ್ಷ ರೂಪಾಯಿ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದ ರವಿ ರಾಠೋಡ ಶಿಕ್ಷೆಗೆ ಗುರಿಯಾದ ಅಪರಾಧಿ.
ಇಂಡಿ ತಾಲೂಕಿನ ಸಾತಲಗಾಂವ ಕ್ರಾಸ್ ಸಮೀಪ ಮಿರಗಿ ಗ್ರಾಮದ ಜಮದಗ್ನಿ ಭೀಮರಾಯ ಹಳ್ಳಿ ಎಂಬುವರು ತಮ್ಮ ಜಮೀನಿನ ದಂಡೆಗೆ ಶ್ರೀಗಂಧದ ಗಿಡಗಳನ್ನು ಬೆಳೆದಿದ್ದರು. ಆರೋಪಿ ರವಿ ಕಳ್ಳತನದಿಂದ ಈ ಗಿಡಗಳನ್ನು ಕಡಿದು ತುಂಡು ಮಾಡಿ ಒಂದು ಚೀಲದಲ್ಲಿ ಹಾಕಿಕೊಂಡು ಬೈಕ್ನಲ್ಲಿ ಸಾಗುತ್ತಿದ್ದಾಗ ಆಗಿನ ಇಂಡಿ ಗ್ರಾಮೀಣ ಠಾಣೆಯ ಪಿಎಸ್ಐ ಎಸ್.ಶಿರಗುಪ್ಪಿ ಮತ್ತು ಸಿಬ್ಬಂದಿ ಕೈಗೆ ಸಿಕ್ಕಿ ಬಿದ್ದಿದ್ದ. ನಂತರದಲ್ಲಿ ಎಎಸ್ಐ ಡಿ.ಎನ್.ತಳವಾರ ಅವರು ಕರ್ನಾಟಕ ಅರಣ್ಯ ಕಾಯ್ದೆಯ ಕಲಂ 86, 87 ಮತ್ತು ಐಪಿಸಿ ಸೆಕ್ಷನ್ 379ರಡಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಧೀಶ ಶಿವಾಜಿ ಅನಂತ ನಾಲವಾಡೆ ಅವರು ಆರೋಪಿ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಂಗಳವಾರ ಈ ತೀಪು ನೀಡಿದ್ದಾರೆ. ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕ ಎಸ್.ಹೆಚ್.ಹಕೀಮ ವಾದ ಮಂಡಿಸಿದ್ದರು.
ಇದನ್ನೂ ಓದಿ: Belagavi: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Democracy Day ವಿಶ್ವದಾಖಲೆಯ ಪುಟ ಸೇರಿದ ಬೃಹತ್ ಮಾನವ ಸರಪಳಿ
CM Siddaramaiah ವಿಚ್ಛಿದ್ರಕಾರಿ ಶಕ್ತಿಗಳ ನಾಶಕ್ಕೆ ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಿ
U.T. Khader; ಭಾರತದಲ್ಲಿ ಸಮಸ್ಯೆ ಆಧಾರಿತ ಚರ್ಚೆಗಳಾಗಲಿ
Yadagiri ಶಾಸಕರನ್ನೇಕೆ ಇನ್ನೂ ಬಂಧಿಸಿಲ್ಲ ? ಎನ್. ರವಿಕುಮಾರ್
CM ಸಿದ್ದರಾಮಯ್ಯ ಅವರಿದ್ದ ವೇದಿಕೆಗೆ ನುಗ್ಗಿದ ಯುವಕ:ಎಳೆದೊಯ್ದ ಭದ್ರತಾ ಸಿಬಂದಿ
MUST WATCH
ಹೊಸ ಸೇರ್ಪಡೆ
Trainee doctor ಹ*ತ್ಯೆ ಕೇಸು: ಮಾಜಿ ಪ್ರಿನ್ಸಿ ಸಂದೀಪ್ 17ರ ವರೆಗೆ ಸಿಬಿಐ ವಶಕ್ಕೆ
International Democracy Day: ಉಡುಪಿ ಜಿಲ್ಲೆಯಲ್ಲಿ 1 ಲಕ್ಷಕ್ಕೂ ಮಿಕ್ಕಿ ಮಂದಿ ಭಾಗಿ
India ಜತೆ ಸಂಬಂಧ ಈಗ ಸುಧಾರಿಸಿದೆ: ಮಾಲ್ದೀವ್ಸ್
J&K ನಾಡಿದ್ದು ಕಾಶ್ಮೀರ ಚುನಾವಣೆ: ಇಂದು ಪ್ರಚಾರ ಅಂತ್ಯ
Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.