ಕಾಂಗ್ರೆಸ್ ಕಛೇರಿಗೆ ಸಾವರ್ಕರ್ ಫೋಟೋ : ಬಸವನಾಡಲ್ಲೂ ಹಬ್ಬಿದ ಸಾವರ್ಕರ್ ಕಿಡಿ
Team Udayavani, Aug 22, 2022, 8:12 AM IST
ವಿಜಯಪುರ: ಜಿಲ್ಲೆಗೂ ಸಾವರ್ಕರ್ ವಿವಾದದ ಕಿಡಿ ಹರಡಿದೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ನಡೆದ ನಗರದ ಗಜಾನನ ಮಹಾಮಂಡಳದ ಸಭೆಯ ವೇದಿಕೆಗೆ ಸಾವರ್ಕರ್ ಎಂದು ಹೆಸರು ಇರಿಸಿದ್ದರೆ, ಇದರ ಬೆನ್ನಲ್ಲೇ ಕಾಂಗ್ರೆಸ್ ಕಛೇರಿಗೆ ಅಪರಿಚಿತ ವ್ಯಕ್ತಿ ಸಾವರ್ಕರ್ ಫೋಟೋ ಅಂಟಿಸುವ ಮೂಲಕ ಜಿಲ್ಲೆಯಲ್ಲೂ ವಿವಾದ ತಾರಕಕ್ಕೆ ಏರುವಂತೆ ಮಾಡಿದ್ದಾರೆ.
ನಗರದ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿನ ಡಾ.ಫ.ಗು. ಹಳಕಟ್ಟಿ ಭವನದಲ್ಲಿ ನಗರ ಶಾಸಕ ಯತ್ನಾಳ ನೇತೃತ್ವದಲ್ಲಿ ನಡೆದ ಶ್ರೀ ಗಜಾನನ ಮಹಾಮಂಡಳ ಸಭೆಯ ವೇದಿಕೆಗೆ ವೀರಸಾವರ್ಕರ್ ಹೆಸರಿಡಲಾಗಿದೆ.
ನಗರದಲ್ಲಿ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಕುರಿತು ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದ ಸಭೆ ಇದಾಗಿತ್ತು. ಇದರ ಬೆನ್ನಲ್ಲೇ ನಗರದ ಜಲನಗರ ಪರಿಸರದಲ್ಲಿ ಇರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ವೀರಸಾವರ್ಕರ್ ಫೋಟೋ ಅಂಟಿಸಲಾಗಿದೆ.
ಅಪರಿಚಿತ ವ್ಯಕ್ತಿಗಳು ಭಾನುವಾರ ತಡರಾತ್ರಿ ಕಾಂಗ್ರೆಸ್ ಕಚೇರಿಯ ಪ್ರವೇಶ ದ್ವಾರ, ಕಿಟಕಿ ಹಾಗೂ ಗೋಡೆ ಸೇರಿದಂತೆ ವಿವಿಧ ಕಡೆಗಳ ಸಾವರ್ಕರ್ ಫೋಟೋ ಅಂಟಿಸಿದ್ದಾರೆ. ವಿಷಯ ತಿಳಿಯುತ್ತಲೇ ಕಾಂಗ್ರೆಸ್ ಕಚೇರಿಗೆ ಆಗಮಿಸಿರುವ ಜಲನಗರ ಪೊಲೀಸರು, ಸಾವರ್ಕರ್ ಫೋಟೋ ತೆರವು ಮಾಡಿದ್ದಾರೆ.
ಮತ್ತೊಂದೆಡೆ ಸಾವರ್ಕರ್ ಕುರಿತು ಟೀಕಾತ್ಮಕ ಹೇಳಿಕೆ ನೀಡಿದ್ದಾರೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ, ನಗರದ ಮಹಾತ್ಮಾ ಗಾಂಧೀಜಿ ವೃತ್ತದಲ್ಲಿ ಸೋಮವಾರ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ.
ಮತ್ತೊಂದೆಡೆ ಇದೇ ಸಮಯದಲ್ಲಿ ಬಿಜೆಪಿ ಜಿಲ್ಲಾ ಘಟಕವೂ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ ಪ್ರತಿಭಟನೆ ಹಮ್ಮಿಕೊಂಡಿದೆ.
ಹೀಗಾಗಿ ನಗರದಲ್ಲಿ ಸೋಮವಾರ ವೀರಸಾವರ್ಕರ್ ವಿಷಯ ಕಾಂಗ್ರೆಸ್-ಬಿಜೆಪಿ ಮಧ್ಯೆ ಹೋರಾಟವನ್ನು ತಾರಕಕ್ಕೆ ಕೊಂಡೊಯ್ಯುವ ಸಾಧ್ಯತೆ ಇದೆ.
ಇದನ್ನೂ ಓದಿ : ಕೋಲ್ಕತಾ: ತಲೆಎತ್ತುತ್ತಿದೆ ಭಾಷಾ ಮ್ಯೂಸಿಯಂ; ಮುಂದಿನ ವರ್ಷಾರಂಭದಲ್ಲೇ ಲೋಕಾರ್ಪಣೆ ಸಾಧ್ಯತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನತ್ತ..
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.