Vijayapura; ಸುರಕ್ಷಿತವಾಗಿ ಬದುಕಿಬಂದ ಸಾತ್ವಿಕಗೆ ಸಿದ್ಧಲಿಂಗ ಮಹಾರಾಜ ತೊಟ್ಟಿಲಶಾಸ್ತ್ರ

ಕೊಳವೆಬಾವಿಯಿಂದ ಬದುಕಿ ಬಂದ ಸಾತ್ವಿಕಗಾಗಿ ಪುರಾಣದ ಹರಕೆ ತೀರಿಸಿದ ಸ್ವಾಮೀಜಿ

Team Udayavani, Apr 15, 2024, 11:39 AM IST

Vijayapura; ಸುರಕ್ಷಿತವಾಗಿ ಬದುಕಿಬಂದ ಸಾತ್ವಿಕಗೆ ಸಿದ್ಧಲಿಂಗ ಮಹಾರಾಜ ತೊಟ್ಟಿಲಶಾಸ್ತ್ರ

ವಿಜಯಪುರ: ಕೊಳವೆ ಬಾವಿಗೆ ಬಿದ್ದು ಸುರಕ್ಷಿತವಾಗಿ ರಕ್ಷಿಸಲ್ಪಟ್ಟ ಸಾತ್ವಿಕನಿಗಾಗಿ ಹರಕೆ ಹೊತ್ತಿದ್ದ ಸ್ವಾಮೀಜಿಯೊಬ್ಬರು ಹರಕೆ ತೀರಿಸಿದ್ದಾರೆ.

ಏ.3 ರಂದು ಸಂಜೆ ವೇಳೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಸಾತ್ವಿಕ್ ಮುಜಗೊಂಡ 14 ತಿಂಗಳ ಮಗು ಜಮೀನಿನಲ್ಲಿ ಕೊರೆಸಿದ್ದ ಕೊಳವೆ ಬಾವಿಗೆ ಬಿದ್ದಿದ್ದ. ಈ ಸಂದರ್ಭದಲ್ಲಿ ಹಲವರು ಸಾತ್ವಿಕ ಸುರಕ್ಷಿತವಾಗಿ ಕೊಳವೆ ಬಾವಿಯಿಂದ ಹೊರಬರಲಿ ಎಂದು ವಿವಿಧ ದೈವಗಳಿಗೆ ಹರಕೆ ಹೊತ್ತಿದ್ದರು.

ಅದೇ ರೀತಿ ಕೊಲ್ಹಾರ ಪಟ್ಟಣದ ದಿಗಂಬರೇಶ್ವರ ಮಠದ ಪೀಠಾಧಿಪತಿ ಕಲ್ಲಿನಾಥ ಶ್ರೀಗಳು ಸಾತ್ವಿಕ ಸುರಕ್ಷಿತವಾಗಿ ಹೊರಬಂದರೆ ತಮ್ಮ ಮಠದಲ್ಲಿ ಲಚ್ಯಾಣ ಸಿದ್ಧಲಿಂಗ ಮಹಾರಾಜರ ಪುರಾಣ ಆರಂಭಿಸುವುದಾಗಿ ಹರಕೆ ಹೊತ್ತಿದ್ದರು.

ಕೇವಲ 21 ಗಂಟೆಯಲ್ಲೇ ವಿವಿಧ ರಕ್ಷಣಾ ತಂಡಗಳು ಸಾತ್ವಿಕ್ ನನ್ನು ಸುರಕ್ಷಿತವಾಗಿ ಹೊರ ತೆಗೆದಿದ್ದವು.

ಹೀಗಾಗಿ ಕೊಲ್ಹಾರ ದಿಗಂಬರೇಶ್ವರ ಮಠಾಧೀಶ ಕಲ್ಲಿನಾಥ ಶ್ರೀಗಳು ತಮ್ಮ ಮಠದಲ್ಲಿ ಸಿದ್ಧಲಿಂಗ ಮಹಾರಾಜರ ಪುರಾಣ ಆರಂಭಿಸುವ ಮೂಲಕ ಹರಕೆ ತೀರಿಸಿದ್ದಾರೆ.

ಸಿದ್ಧಲಿಂಗ ಮಹಾರಾಜರ ಪುರಾಣದ ಸಂದರ್ಭದಲ್ಲಿ ಬಾಲ ಸಿದ್ಧಲಿಂಗನ ತೊಟ್ಟಿಲ ಶಾಸ್ತ್ರ ಸಂದರ್ಭದಲ್ಲಿ ಸಾತ್ವಿಕನ ತಾಯಿ ಪೂಜಾ ಮುಜಗೊಂಡ ಅವರಿಂದಲೇ ಸಾತ್ವಿಕನನ್ನೇ ತೊಟ್ಟಿಲಲ್ಲಿ ಹಾಕಿ ಶಾಸ್ತ್ರೋಕ್ತವಾಗಿ ಸಿದ್ಧಲಿಂಗ ಎಂದು ನಾಮಕರಣ ಮಾಡಿ ಹರಕೆ ತೀರಿಸಿದ್ದಾರೆ.

ಸಾಮಾನ್ಯವಾಗಿ ಪುರಾಣ ಕಾರ್ಯಕ್ರಮದಲ್ಲಿ ಶರಣರು, ಮಹಾತ್ಮರ ಜನನದ ಸನ್ನಿವೇಶದ ಸಂದರ್ಭದ ಬಂದಾಗ ತೊಟ್ಟಿಲಿಗೆ ಗೊಂಬೆಗಳನ್ನು ಹಾಕಿ ಶಾಸ್ತ್ರ ಮಾಡುತ್ತಾರೆ. ಆದರೆ ಕೊಲ್ಹಾರ ದಿಗಂಬರೇಶ್ವರ ಮಠಾಧೀಶರು ಮರುಜನ್ಮ ಪಡೆದ ಸಾತ್ವಿಕನನ್ನು ತಾಯಿ ಪೂಜಾ ಮೂಲಕ ತೊಟ್ಟಿಲಿಗೆ ಹಾಕಿಸಿ ಸಿದ್ಧಲಿಂಗ ಮಹಾರಾಜರ ತೊಟ್ಟಿಲ ಶಾಸ್ತ್ರ ಮಾಡಿ ಹರಕೆ ತೀರಿಸಿ ಗಮನ ಸೆಳೆದಿದ್ದಾರೆ.

ಮತ್ತೊಂದೆಡೆ ಸಾತ್ವಿಕ ಹೆತ್ತವರು ಕೂಡ ತಮ್ಮ ಮಗ ಕೊಳವೆ ಬಾವಿ ಗಂಡಾಂತರದಿಂದ ಪಾರಾಗಿ ಬಂದರೆ ಗ್ರಾಮದ ಆರಾಧ್ಯ ದೈವ ಲಚ್ಯಾಣ ಸಿದ್ಧಲಿಂಗ ಮಹಾರಾಜರ ಹೆಸರನ್ನೇ ಮರು ನಾಮಕರಣ ಮಾಡುವುದಾಗಿ ಹರಕೆ ಹೊತ್ತಿದ್ದಾರೆ.

ಏ.28 ರಂದು ಲಚ್ಯಾಣ ಸಿದ್ಧಲಿಂಗ ಮಹಾರಾಜರ ಜಾತ್ರೆ ಸಂದರ್ಭದಲ್ಲಿ ಸಾತ್ವಿಕಗೆ ಸಿದ್ಧಲಿಂಗ ಮಹಾರಾಜರ ಎಂದು ಮರು ನಾಮಕರಣ ಮಾಡುವ ಸಿದ್ಧತೆಯಲ್ಲಿದ್ದಾರೆ. ಅದಕ್ಕೂ ಮುನ್ನವೇ ಕೊಲ್ಹಾರ ದಿಗಂಬರೇಶ್ವರ ಮಠಾಧೀಶರು ಸಿದ್ಧಲಿಂಗ ಮಹಾರಾಜರ ಪುರಾಣದ ಸಂದರ್ಭದಲ್ಲಿ ಸಾತ್ವಿಕನನ್ನು ತೊಟ್ಟಿಲಿಗೆ ಹಾಕಿ ಶಾಸ್ತ್ರೋಕ್ತವಾಗಿ ಸಿದ್ಧಲಿಂಗ ಎಂದು ನಾಮಕರಣ ಮಾಡಿದ್ದಾರೆ.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

dw

Muddebihal: ಬೈಕ್ ವ್ಹೀಲಿಂಗ್ ನಾಲ್ವರು ಯುವಕರ ಬಲಿ

Yathanal

Ganesh Festival: ಪ್ರಸಾದಕ್ಕೆ ಪರವಾನಗಿ: ಹಿಂದೂ ಹಬ್ಬಗಳ ಹತ್ತಿಕ್ಕುವ ಪ್ರಯತ್ನ: ಯತ್ನಾಳ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.