Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್


Team Udayavani, Sep 21, 2024, 3:48 PM IST

ವಿಜಯಪುರ: ತಿರುಪತಿ ತಿಮ್ಮಪ್ಪನ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು. ಹಿಂದೂ ದೇವಸ್ಥಾನಗಳ ಆಡಳಿತ ಮಂಡಳಿಗಳಲ್ಲಿ ಹಿಂದೂಗಳು ಮಾತ್ರ ಇರಬೇಕು. ಸನಾತನ ಧರ್ಮ ರಕ್ಷಣಾ ಬೋರ್ಡ್ ರಚನೆ ಮಾಡಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಒತ್ತಾಯಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಸನಾತನ ಹಿಂದೂ ಧರ್ಮದ ಪಾವಿತ್ರ‍್ಯತೆ ಹಾಳು ಮಾಡುವ ಕೆಲಸವಾಗುತ್ತಿದೆ. ಕಾಂಗ್ರೆಸ್, ವೈಎಸ್‌ಆರ್ ಕಾಂಗ್ರೆಸ್ ಸೇರಿದಂತೆ ಅನೇಕರು ಈ ಕೆಲಸ ಮಾಡುತ್ತಿದ್ದಾರೆ. ಮಾಜಿ ಸಿಎಂ ಜಗನ್ ಕ್ರಿಶ್ಚಿಯನ್. ಅವರ ಚಿಕ್ಕಪ್ಪ ತಿರುಪತಿ ದೇವಸ್ಥಾನದ ಮಂಡಳಿಯಲ್ಲಿ ಅಧ್ಯಕ್ಷರಾಗಿದ್ದ. ಅವನೂ ಕ್ರಿಶ್ಚಿಯನ್. ಹಿಂದೂ ಹೆಸರಲ್ಲಿ ಇವರೆಲ್ಲ ಇದನ್ನು ಮಾಡಿದ್ದಾರೆ. ಹೀಗಾಗಿ ಹಿಂದೂ ದೇವಸ್ಥಾನಗಳ ಆಡಳಿತ ಮಂಡಳಿಗಳಿಗೆ ಹಿಂದೂಗಳೇ ಅಧ್ಯಕ್ಷರಿರಬೇಕು. ಹಿಂದೂಯೇತರರನ್ನು ತೆಗೆದು ಹಾಕಬೇಕು ಎಂದು ಆಗ್ರಹಿಸಿದರು.

ಅಲ್ಲದೇ, ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು ಮಿಶ್ರಣ ಮಾಡಿದ್ದು ಹಿಂದೂ ಸಮಾಜಕ್ಕೆ ಆಘಾತ ಆಗಿದೆ. ಕೋಟ್ಯಾಂತರ ಹಿಂದೂಗಳ ಬಾಯಲ್ಲಿ ಹಂದಿ ಮತ್ತು ದನದ ಕೊಬ್ಬು ಬಿದ್ದಿದೆ. ಇದನ್ನು ಇಷ್ಟಕ್ಕೆ ಬಿಡಬಾರದು. ತಪ್ಪಿತಸ್ಥರನ್ನು ಗಲ್ಲಿಗೇರಿಸಬೇಕು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಇದನ್ನು ರಾಜಕೀಯಕ್ಕೆ ಬಳಕೆ ಮಾಡದೆ, ನಿಜವಾದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು. ಎಷ್ಟು ದಿನಗಳಿಂದ ಕೊಬ್ಬು ಮಿಶ್ರಣ ಆಗುತ್ತಿದೆ ಮತ್ತು ಅಪವಿತ್ರ ಕಾರ್ಯ ನಡೆಯುತ್ತಿತ್ತು ಎಂಬುವರ ಬಗ್ಗೆ ತನಿಖೆಯಾಗಬೇಕು. ಮುಂದೆ ಯಾರೇ ಸಿಎಂ, ಪ್ರಧಾನಿಯಾಗಲಿ ಇಂತಹ ಕಾರ್ಯವನ್ನು ಮಾಡುವಂತ ಧೈರ್ಯಯನ್ನು ಯಾರೂ ತೋರುವಂತಾಗಬಾರದು ಎಂದು ಹೇಳಿದರು.

ಟಿಪ್ಪು, ಔರಂಗಜೇಬ್ ಕುರಿತ ಹೇಳಿಕೆಗೆ ವಿಷಾದವಿಲ್ಲ: ಯತ್ನಾಳ್

ಬಾಗಲಕೋಟೆ ಜಿಲ್ಲೆ ಮುಧೋಳ ಪಟ್ಟಣದಲ್ಲಿ ಟಿಪ್ಪು ಸುಲ್ತಾನ್ ಮತ್ತು ಔರಂಗಜೇಬ್ ಕುರಿತ ನನ್ನ ಹೇಳಿಕೆಗೆ ನಾನು ಬದ್ಧ. ಇದಕ್ಕೆಲ್ಲ ವಿಷಾದ ವ್ಯಕ್ತಪಡಿಸುವುದಿಲ್ಲ. ಕ್ಷಮೆಯನ್ನೂ ಕೇಳುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತಿಳಿಸಿದರು.

ಮುಸ್ಲಿಂ ಮತ್ತು ಅಹಿಂದ ನಾಯಕರು ತಮ್ಮ ಹೇಳಿಕೆಯನ್ನು ಖಂಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಯತ್ನಾಳ್, ಅಂಬೇಡ್ಕರ್ ಅವರ ಬಗ್ಗೆ ಸರಿಯಾಗಿ ಓದಿದ್ದರೆ, ಸ್ವಾಭಿಮಾನ ಅಂಬೇಡ್ಕರ್ ಬಗ್ಗೆ ಗೌರವವಿದ್ದರೆ, ಇವರು ಟಿಪ್ಪು ಮತ್ತು ಆತನ ಜೀವನದ ಬೆನ್ನು ಹತ್ತಲ್ಲ. ಈ-ಹಿಂದ, ಅ-ಹಿಂದ ನಾಯಕರ ಕೆಲಸ ಏನಿದೆ?. ಟಿಪ್ಪು ಸುಲ್ತಾನ್, ಔರಂಗಜೇಬ್ ಬಗ್ಗೆ ನಾನು ಎಷ್ಟೇ ಬೈಯ್ದರೂ, ಅದಕ್ಕೆ ನಾನು ಕ್ಷಮೆ ಬೇಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನಾನು ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ. ಆದರೆ, ಪಾಪ ಪೊಲೀಸರ ಮೇಲೆ ಒತ್ತಡ ಹಾಕಿದ ಕಾರಣಕ್ಕೆ ಅವರು ನನ್ನ ಮೇಲೆ ಸುಮೋಟೋ ಕೇಸ್ ಹಾಕಿದ್ದಾರೆ. ಅದು ಪೊಲೀಸರ ತಪ್ಪಲ್ಲ. ತಪ್ಪೇನಿದ್ದರೂ ಅಲ್ಲಿಯ ಸಚಿವರದ್ದು. ಇಲ್ಲೊಬ್ಬ ಸಚಿವ ಕಳೆದ ಲೋಕಸಭಾ ಚುನಾವಣೆಯಲ್ಲಿ ತನ್ನ ಮಗಳನ್ನು ಅಲ್ಲಿ ನಿಲ್ಲಿಸಿದ್ದ. ಅಲ್ಲಿ ಅವಮಾನಕಾರಿಯಾಗಿ ಸೋಲುಂಡ ಕಾರಣ ಒತ್ತಡದಿಂದ ನನ್ನ ಮೇಲೆ ಪೊಲೀಸರ ಮೂಲಕ ಕೇಸ್ ಹಾಕಿಸಿದ್ದಾರೆ ಎಂದು ದೂರಿದರು.

ಟಾಪ್ ನ್ಯೂಸ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.