Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ
ಮನೆ ಮೇಲೆ ಉರುಳಿ ಬಿದ್ದ ಮೊಬೈಲ್ ಟವರ್.. ಎಮ್ಮೆ ಸಾವು, ನೆಲಕ್ಕುರುಳಿದ ವಿದ್ಯುತ್ ಕಂಬಗಳು
Team Udayavani, Apr 22, 2024, 11:56 PM IST
ವಿಜಯಪುರ : ಸೋಮವಾರ ಸಂಜೆ ಸಿಡಿಲ ಅಬ್ಬರಕ್ಕೆ ಎಮ್ಮೆ ಬಲಿಯಾಗಿದ್ದು, ಬಿರುಗಾಳಿಗೆ ಮೊಬೈಲ್ ಟಾವರ್ ಮನೆಗಳ ಮೇಲೆ ಮುರಿದು ಬಿದ್ದಿದ್ದರೆ,ಮರವೊಂದಕ್ಕೆ ಬೆಂಕಿ ಹೊತ್ತಿಕೊಂಡಿದೆ. ಬಿರುಗಾಳಿಗೆ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.
ಮುಂಗಾರು ಆರಂಭಕ್ಕೂ ಮುನ್ನವೇ ಬಿರುಗಾಳಿ, ಸಿಡಿಲ ಅಬ್ಬರ ಸಹಿತ ಮಳೆ ಆರಂಭಗೊಂಡಿದೆ. ಸೋಮವಾರ ಸಂಜೆ ನಿಡಗುಂದಿ ತಾಲೂಕಿನ ಆಲಮಟ್ಟಿ ರಾಕ್ ಗಾರ್ಡನ್ ಪರಿಸರದಲ್ಲಿ ಸಿಡಿಲಿನಿಂದ ಮರವೊಂದಕ್ಕೆ ಬೆಂಕಿ ಹೊತ್ತಿಕೊಂಡಿದ್ದರೆ, ಇಂಡಿ ತಾಲೂಕಿನ ತಡವಲಗಾ ಗ್ರಾಮದಲ್ಲಿ ಎಮ್ಮೆ ಬಲಿಯಾಗಿದೆ.
ಬಿರುಗಾಳಿಗೆ ಚಡಚಣ ಗ್ರಾಮೀಣ ಭಾಗದ ಡೋಣಿ ಐಪಿ ಪ್ರದೇಶದಲ್ಲಿ ಹಾಗೂ ತೊರವಿ ಬಳಿ 11 ಕೆ.ವಿ. ವಿದ್ಯುತ್ ಕಂಬಗಳು ನೆಲಕ್ಕುರುಳಿ ಈ ಮಾರ್ಗದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಚಡಚಣ ತಾಲೂಕಿನ ರೇವತಗಾಂವ ಗ್ರಾಮದಲ್ಲಿ ಬಿರುಗಾಳಿಗೆ ಮನೆಗಳ ಮೆರಲೆ ಮೊಬೈಲ್ ಟವರ್ ಮುರಿದು ಬಿದ್ದಿದೆ.ಘಟನೆಯಿಂದ ಐದಾರು ಮನೆಗಳಿಗೆ ಹಾನಿಯಾದರೂ ಸುದೈವಶಾತ್ ಯಾವುದೇ ಜೀವಹಾನಿ, ಅಪಾಯ ಸಂಭವಿಸಿಲ್ಲ. ಮಳೆ ಸುರಿಯುವುದಕ್ಕಿಂತ ಸಿಡಿಲು ಹಾಗೂ ಬಿರುಗಾಳಿಯ ಅಬ್ಬರವೇ ಜೋರಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ
Muddebihal: ನಿಂತಿದ್ದ ಕ್ಯಾಂಟರ್ ಗೆ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು
ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.