![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 23, 2021, 11:43 AM IST
ಆಲಮೇಲ: ಕೋವಿಡ್ ಸಂಕಸ್ಟದಲ್ಲಿರುವ ಜನರಿಗೆ 1480 ಕೋಟಿ ಸಹಾಯಧನ ನೀಡಿದ ದೇಶದಲ್ಲಿಯೆ ಮೊದಲ ಮುಖ್ಯಮಂತ್ರಿ ಯಡಿಯೂರಪ್ಪ. ಯಡಿಯೂರಪ್ಪನವರ ಯೋಜನೆಗಳು ಮುಂದುವರಿಸಿಕೊಂಡು ಉತ್ತಮ ಆಡಳಿತ ನೀಡುತ್ತಿರುವ ಮುಖ್ಯಮಂತ್ರಿ ಬೊಮ್ಮಾಯಿ ಸರ್ಕಾರಕ್ಕೆ ಸಿಂದಗಿ ಕ್ಷೇತ್ರದ ಜನ ಬಿಜೆಪಿ ಅಭ್ಯರ್ಥಿ ಗೆಲ್ಲಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಿ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಹೇಳಿದರು.
ಸಿಂದಗಿ ಉಪ ಚುನಾವಣೆ ನಿಮಿತ್ತ ಶುಕ್ರವಾರ ಆಲಮೇಲ ಪಟ್ಟಣದಲ್ಲಿ ಬಿಜೆಪಿ ಅಭ್ಯಾರ್ಥಿ ರಮೇಶ ಭೂಸನೂರ ಪರ ರೋಡ್ ಶೋ ಮೂಲಕ ಮತಯಾಚನೆ ಮಾಡಿ ಅವರು ಮಾತನಾಡಿದರು.
ಕೋವಿಡ್ ಸಂಕಸ್ಟದ ಸಮಯದಲ್ಲಿ ದೇಶದ ಯಾವ ರಾಜ್ಯದ ಮುಖ್ಯಮಂತ್ರಿಗಳು ನೀಡದ ಸಹಾಯಧನ ಅಂದಿನ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೀಡಿದ್ದಾರೆ. ಕೋವಿಡ್ ಸಂಕಸ್ಟದಲ್ಲಿರುವ ಎಲ್ಲ ಸಮುಧಾಯಕ್ಕೂ ಸಮಾನ ಅವಕಾಶ ನೀಡಿದ್ದಾರೆ. ಅವರ ಹಾಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತಮ ಆಡಳಿತ ನೀಡುತ್ತಿದ್ದಾರೆ ಎಂದು ಹೇಳಿದರು.
ರೈತರ ಅಭಿವೃದ್ಧಿಗೆ ಶೂನ್ಯ ಬಡ್ಡಿಯಲ್ಲಿ ಸಾಲ ನೀಡಿದ ದೇಶದಲ್ಲಿಯೆ ಮೊದಲ ಮುಖ್ಯಮಂತ್ರಿ ಯಡಿಯೂರಪ್ಪ. ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ, ಭಾಗ್ಯಲಕ್ಷ್ಮೀ ಯೋಜನೆ, ಆರೋಗ್ಯಕ್ಕೆ ತುರ್ತು ಸೇವೆ ನೀಡಲು ಆಂಬುಲೆನ್ಸ್ ವ್ಯವಸ್ಥೆ ಹೀಗೆ ಅನೇಕ ಅಭಿವೃದ್ಧಿ ಮಾಡಿದ್ದಾರೆ. ದೇಶದ ಚಿತ್ರಣವೆ ಬದಲಿಸಿ ಜಗತ್ತಿನಲ್ಲಿ ಬಲಿಷ್ಠ ದೇಶ ಮಾಡಲು ಹೊರಟಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ನರೇಂದ್ರ ಮೋದಿ, ಯಡಿಯೂರಪ್ಪ ನೇತೃತ್ವದಲ್ಲಿ ದೇಶದ ಎಲ್ಲೆಡೆ ಬಿಜೆಪಿ ಬಲಿಷ್ಠವಾಗಿ ಬೆಳೆಯುತ್ತಿದ್ದು ಅದನ್ನು ತಡೆಯಲು ಯಾರಿಂದಲೂ ಸಾಧ್ಯವವಿಲ್ಲ ಎಂದರು.
ಚಿಂಚೋಳಿ ಶಾಸಕ ಶರಣು ಸಲಗರ, ಜೇವರ್ಗಿ ಮಾಜಿ ಶಾಸಕ ದೊಡ್ಡಪಗೌಡ ಪಾಟೀಲ, ಶಂಭುಲಿಂಗ ಕಕ್ಕಳಮೇಲಿ, ಬಸವರಾಜ ಹೂಗಾರ, ಅಶೋಕ ವಾರದ, ವೀರಭದ್ರ ಕತ್ತಿ, ಸಿದ್ದರಾಮ ಪಾಟೀಲ, ವಿಶ್ವನಾಥ ಹಿರೇಮಠ, ವಿಶ್ವನಾಥ ಅಮರಗೊಂಡ, ಶ್ರೀಶೈಲ ಭೋವಿ, ಕಮಲಾಕರ ಪತ್ತಾರ, ಅಪ್ಪು ಶೆಟ್ಟಿ, ರಾಹುಲ್ ಎಂಟಮಾನ, ಅಂಬರಿಶ ಸಾಲಕ್ಕಿ, ಶರಣು ಗುರಕಾರ, ಮಾಣಿಕ ಕಲಕುಟಗೇರ, ಮಂಗಲಾಗುಡಿಮಠ, ಗಂಗುಬಾಯಿ ಅಮಲಝರಿ, ಸಾವಿತ್ರಿ ಹಿಕ್ಕನಗುತ್ತಿ, ಮಹಾದೇವಿ ವಡ್ಡರ, ಶೈಲಾ ಹೊಸಮನಿ ಇದ್ದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.