BJP: ಹಾಸನದಲ್ಲಿ ಆಶ್ಲೀಲ ಪೆನ್‍ಡ್ರೈವ್ ಹಂಚಿಸಿದ್ದೇ ವಿಜಯೇಂದ್ರ‌; ಯತ್ನಾಳ ಗಂಭೀರ ಆರೋಪ

ಹೈಕಮಾಂಡ್ ಬೇಕಾದರೆ ನನ್ನನ್ನು ಉಚ್ಛಾಟಿಸಲಿ: ಯತ್ನಾಳ ಸವಾಲು

Team Udayavani, Aug 3, 2024, 6:47 PM IST

ಹಾಸನದಲ್ಲಿ ಆಶ್ಲೀಲ ಪೆನ್‍ಡ್ರೈವ್ ಹಂಚಿಸಿದ್ದೇ ವಿಜಯೇಂದ್ರ‌; ಯತ್ನಾಳ ಗಂಭೀರ ಆರೋಪ

ವಿಜಯಪುರ: ಭ್ರಷ್ಟ ವಿಜಯೇಂದ್ರನನ್ನು ಬಿಜೆಪಿ ರಾಜ್ಯಾಧ್ಯಕ್ಷನೆಂದು ಒಪ್ಪಿಕೊಳ್ಳಲು ನಾವು ಸಿದ್ಧರಿಲ್ಲ. ವಿಜಯೇಂದ್ರನ ನಾಲ್ಕಾರು ಚೇಲಾ ಶಾಸಕರ ಹೊರತಾಗಿ 55ಕ್ಕೂ ಹೆಚ್ಚು ಶಾಸಕರ ವಿರೋಧವಿದ್ದು, ಈ ಬಗ್ಗೆ ಹೈಕಮಾಂಡ್ ನಾಯಕರನ್ನು ನಾವು ಪ್ರಶ್ನಿಸುತ್ತೇವೆ. ಪಕ್ಷದಲ್ಲಿ ಹೈಕಮಾಂಡ್ ಭ್ರಷ್ಟ ವಿಜಯೇಂದ್ರನನ್ನು ವಿರುದ್ಧ ಕ್ರಮ ಕೈಗೊಳ್ಳಲಿ, ತಪಿದ್ದರೆ ನಮ್ಮ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸವಾಲು ಹಾಕಿದ್ದಾರೆ.

ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಿರುವ ನನ್ನನ್ನು ಹೊರ ಹಾಕಲಿ ಎಂದು ರಾಜ್ಯದ ಜನರಿಗೆ ಹೇಳುತ್ತೇನೆ. ಪಕ್ಷದ ಹೈಕಮಾಂಡ ಯತ್ನಾಳ‌ ಪಕ್ಷ ವಿರೋಧ ಚಟುವಟಿಕೆ ಮಾಡುತ್ತಿದ್ದಾರೆ ಎಂದು ನನ್ನನ್ನು ಹೊರಹಾಕಲಿ. ನನ್ನ ಭ್ರಷ್ಟಾಚಾರ ಇದ್ದರೆ ಹೊರ ಹಾಕಲಿ, ತನಿಖೆ ಮಾಡಿಸಲಿ ಎಂದು ಸವಾಲು ಹಾಕಿದರು.

ವಿಜಯೇಂದ್ರಗೆ ಆಗಿರುವ ಸೆಟ್‍ಬ್ಯಾಕ್ ಏನೇಂದರೆ ನಿಂತು ಸಹಿ ಮಾಡಿಸಿಕೊಂಡಿದ್ದು, ಈ ಮನುಷ್ಯ ವಿಜಯೇಂದ್ರ ಅಡ್ಜಸ್ಟಮೆಂಟ್ ಇದ್ದಾನೆ. ನಾನು ಹೈಕಮಾಂಡನ್ನು ಇದೇ ಕೇಳುತ್ತೇನೆ, ವಿಜಯೇಂದ್ರನ ಕೃಪೆಯಿಂದ ಉಮೇಶ ಕಾಂಟ್ರಾಕ್ಟರ್ ಮನೆಯಲ್ಲಿ ಸಿಕ್ಕ ಸಾವಿರ ಕೋಟಿ ರೂ ಮೌಲ್ಯದ ದಾಖಲೆಗಳು, ಕೌಂಟಿಂಗ್ ಮಾಡುವ ನಾಲ್ಕು ಮಸೀನ್ ಸಿಕ್ಕವಲ್ಲ ಅವೆಲ್ಲ ಎಲ್ಲಿ ಹೋದವು ಎಂದು ಪ್ರಶ್ನಿಸಿದರು.

ವಿಜಯೇಂದ್ರ, ಯಡಿಯೂರಪ್ಪ ಕುಟುಂಬವೇ ಬೇಕು ಎಂದಾದರೆ ಯತ್ನಾಳ ವಿರುದ್ಧ ಕ್ರಮ ಕೈಗೊಳ್ಳಲಿದೆ. ಪಕ್ಷದಲ್ಲಿ ವಿಜಯೇಂದ್ರ ವಿರುದ್ಧ ಅಸಮಾಧಾನ ಹೆಚ್ಚಿದೆ. ಪಕ್ಷದಲ್ಲಿ ಅವರ ವಿರುದ್ಧ ಧ್ವನಿ ಎತ್ತಲು ಸಾಧ್ಯವಿಲ್ಲದ ಬಹುತೇಕ ಶಾಸಕರೊಂದಿಗೆ ಯವ ರೀತಿ ಮಾತನಾಡಬೇಕು ಎಂಬ ಅರಿವಿಲ್ಲದ ವಿಜಯೇಂದ್ರ ದುರಹಂಕಾರಿ ವರ್ತನೆ ತೋರುತ್ತಿರುವುದಾಗಿ ಎಂದು ಹೇಳುತ್ತಿದ್ದಾರೆ ಎಂದರು.

ಪೆನ್‌ ಡ್ರೈವ್‌ ಹಂಚಿದ್ದೇ ವಿಜಯೇಂದ್ರ

ಹಾಸನದಲ್ಲಿ ಪ್ರಜ್ವಲ ಅಶ್ಲೀಲ ಪ್ರಕರಣದಲ್ಲಿ ತಮ್ಮ ಚೇಲಾಗಳಿಂದ ಪೇಪರ್‌ ಗಳಲ್ಲಿ ಇಟ್ಟು ಪೆನ್‌ ಡ್ರೈವ್‌ ಹಂಚಿಸಿದ್ದೆ ವಿಜಯೇಂದ್ರ ಎಂದು ಗಂಭೀರ ಆರೋಪ ಮಾಡಿದ ಯತ್ನಾಳ್, ಪಕ್ಷದಲ್ಲಿ ಈಗ ಪದಾಧಿಕಾರಿಗಳಾಗಿ ಇರುವ ಶೇ.50 ರಷ್ಟು ಸಿ.ಡಿ, ಕಂಪನಿಯೇ ಇದೆ ಎಂದು ವಾಗ್ದಾಳಿ ನಡೆಸಿದರು.

ಹಾಸನದಲ್ಲೊಬ್ಬ ಕಡಿಮೆ ಅಂತರದಿಂದ ಶಾಸಕನಾಗಿ ಆಯ್ಕೆಯಾದರೆ ರಾಜೀನಾಮೆ ನೀಡುವುದಾಗಿ ಅಹಂಕಾರ ತೋರಿದ ಪುಣ್ಯಾತ್ಮನನ್ನು ಜನರು ಸೋಲಿಸಿದರು. ಕುಮಾರಸ್ವಾಮಿ ಕುಟುಂಬದ ಮಾನ-ಮರ್ಯಾದೆ ಕಳೆದದ್ದೇ ವಿಜಯೇಂದ್ರ. ಆತನ ನಿರ್ದೇಶನದಿಂದಲೇ ಪೆನ್‍ಡ್ರೈವ್ ಹಂಚಿದ್ದು, ತಾಕತ್ತಿದ್ದರೆ ನನ್ನನ್ನು ಕೇಳಲಿ, ಬಿಜೆಪಿಯ ಪಕ್ಷ ಎಷ್ಟು ಎಂಎಲ್‍ಎಗಳನ್ನು ಬ್ಲಾಕ್ ಮೇಲ್ ಮಾಡುತ್ತೀರಿ ಎಂದು ಟೀಕಾ ಪ್ರಹಾರ ನಡೆಸಿದರು.

ಪಕ್ಷದಲ್ಲಿ ಹಿರಿಯರ ಬಗ್ಗೆ ವಿಜಯೇಂದ್ರಗೆ ಗೌರವೇ ಇಲ್ಲ. ಪಾದಯಾತ್ರೆ ಮಾಡುವ ಕುರಿತು ಪಕ್ಷದ ಹಿರಿಯ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡಿಲ್ಲ. ಅವರಪ್ಪ ಹೇಳಿದ, ಬಾಡಿಗೆ ಜನರನ್ನು ತಂದು ಪಾದಯಾತ್ರೆ ಹೋರಾಟ ಮಾಡು, ನೀನು ಹೀರೋ ಆಗುತ್ತಿಯಾ ಎಂದು ಹೇಳಿದ, ವಿಜಯೇಂದ್ರ ತಾನೇ ಏಕಪಕ್ಷೀಯ ನಿರ್ಧಾರ ಕೈಗೊಂಡ ಎಂದು ವಾಗ್ದಾಳಿ ನಡೆಸಿದರು.

ಇಡೀ ರಾಜ್ಯ ನಮ್ಮ ಹಿಂದಿದೆ, ನಾವೇ ಲಿಂಗಾಯತ ಲೀಡರ್, ಯಡಿಯೂರಪ್ಪ ಕುಟುಂಬಕ್ಕೆ ಏನಾದರೂ ಮಾಡಿದರೆ ರಾಜ್ಯದಲ್ಲಿ ಬಿಜೆಪಿಗೆ ಹಿನ್ನೆಡೆ ಆಗಲಿದೆ ಎಂದು ಬಿಂಬಿಸಿ ಹೈಕಮಾಂಡನ್ನೇ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ರಮೇಶ ಜಾರಕಿಹೊಳಿಯೇ ಹೇಳಿದ್ದಾರೆ ಎಂದರು.

ನಾವಂತೂ ಅಂಜುವುದಿಲ್ಲ, ಇಂಥ ಭ್ರಷ್ಟರ ಕುಟುಂಬವನ್ನು ಮುಂದುವರೆಸುವಿರೋ, ನಮ್ಮಂಥ ಪ್ರಾಮಾಣಿಕರನ್ನು ಉಚ್ಛಾಟನೆ ಮಾಡುತ್ತೀರೋ ಎಂದು ಕೇಳುತ್ತೇವೆ. ಹೈಕಮಾಂಡ ಎದುರು ಈಗ ಇವೆರಡೇ ಆಯ್ಕೆ ಇವೆ ಎಂದರು.

ಬಿಜೆಪಿ ಸರ್ಕಾರದಲ್ಲಿ ಎರಡು ಪಟ್ಟು ಖರೀದಿ ಮಾಡುವಷ್ಟು ಸಾಮಗ್ರಿ ವೆಚ್ಚದಷ್ಟು ಬಾಡಿಗೆ ಹಣ ನೀಡಿ ವಿಜಯೇಂದ್ರ ಹಗರಣ ನಡೆಸಿದ. ಬೆಡ್, ಮಾಸ್ಕ್ ಖರೀದಿ ಸೇರಿದಂತೆ ಕೋವಿಡ್ ಖರೀದಿ ಹಗರಣದ ಕುರಿತು ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಸದನದಲ್ಲಿ ಎರಡು ದಿನ ಮಾತನಾಡಿದ್ದರು. ಈಗ ತಾವೇ ಮುಖ್ಯಮಂತ್ರಿಯಾಗಿ 14 ತಿಂಗಳಾಯ್ತು, ಕತ್ತೆ ಕಾಯುತ್ತಿದ್ದಾರೆಯೇ? ಕೋವಿಡ್ ಖರೀದಿ ಹಗರಣ ತನಿಖೆ ಮಾಡದೆ ಈಗ ತನಿಖೆ ಮಾಡುವ ಮಾತನಾಡುತ್ತಿದ್ದಾರೆ ಎಂದು ಗುಡುಗಿದರು.

ಈಗ ತಮ್ಮ ವಿರುದ್ಧ ಪ್ರತಿಭಟನೆ ಮಾಡಲು ಮುಂದಾದಾಗ ಬಿಜೆಪಿ ಹಗರಣಗಳನ್ನು ತನಿಖೆ ಮಾಡುವುದಾಗಿ ಹೇಳುತ್ತಿದ್ದಾರೆ. ಇದೇ ಎಚ್.ಕೆ.ಪಾಟೀಲ ಸದನ ಸಮಿತಿ ಮುಂದೆ ಏನೇನು ಮಾತನಾಡಿದ್ದಾರೆ. ಚೇರ್ಮನ್ ಆಗಿದ್ದಾಗ ರಾಮಲಿಂಗಾರೆಡ್ಡಿ ಮಾಡಿದ ಆಕ್ಷೇಪವೇನು, ಏನೇನು ಮಾತನಾಡಿದ್ದರು. ಈಗ ತನಿಖೆ ಮಾಡಲು ತಯಾರಿದ್ದಾರೆಯೇ ಎಂದು ಪ್ರಶ್ನಿಸಿ ಯತ್ನಾಳ, ಈ ಹಗರಣದಲ್ಲಿ ಕಾಂಗ್ರೆಸ್ ಪಕ್ಷದವರು ಕೈಜೋಡಿಸಿದ್ದರಿಂದಲೇ ತನಿಖೆ ಮಾಡಿಸುತ್ತಿಲ್ಲ ಎಂದು ಆರೋಪಿಸಿದರು.

ವಿಜಯೇಂದ್ರ ಹಗರಣದ ಬಗ್ಗೆ ಈವರೆಗಗೂ ಮಾತನಾಡದ ಡಿ.ಕೆ.ಶಿವಕುಮಾರ್, ಈಗ ತಮ್ಮ ಪಕ್ಷದ ಬುಡಕ್ಕೆ ಬರುತ್ತಲೇ ದೇವರಾಜ ಅರಸು ಟ್ರಕ್ ಟರ್ಮಿನಲ್ ಹಗರಣ, ಭೋವಿ ನಿಗಮದ ಹಗರಣ ಎಂದೆಲ್ಲ ಮಾತನಾಡುತ್ತಿದ್ದಾರೆ. ನಿಮ್ಮ ವಿರುದ್ಧ ಬಂತೆಂದು ಶಿವಕುಮಾರ ಜಿಗಿದು ಮಾತನಾಡುತ್ತಿದ್ದಾರೆ, ತಾಕತ್ತಿದ್ದರೆ ತನಿಖೆ ಮಾಡಿಸಿ ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.