![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 9, 2021, 2:31 PM IST
ವಿಜಯಪುರ: ಜಿಲ್ಲೆಯ ಪೊಲೀಸರು ಕಳ್ಳತನ ಆರೋಪದಲ್ಲಿ ಏಳು ಅಂತಾರಾಜ್ಯ ಆರೋಪಿಗಳನ್ನು ಬಂಧಿಸಿದ್ದು, 16.10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ಬಂಧಿತ ಏಳು ಆರೋಪಿಗಳಲ್ಲಿ ವಿಜಯಪುರ ಜಿಲ್ಲೆಯ ಐವರು ಹಾಗೂ ಮಹಾರಾಷ್ಟ್ರ ರಾಜ್ಯದ ಅಕ್ಕಲಕೋಟೆ ಮೂಲದ ಇಬ್ಬರು ಸೇರಿದ್ದಾರೆ.
ಏಳು ಜನರ ಈ ತಂಡ ವಿಜಯಪುರ ಜಿಲ್ಲೆಯಲ್ಲಿ ಏಳು, ಬಾಗಲಕೋಟೆ ಜಿಲ್ಲೆಯ ಎರಡು, ಬೆಳಗಾವಿ ಜಿಲ್ಲೆಯ ಒಂದು ಕಳ್ಳತನ ಸೇರಿ 11 ಪ್ರಕರಣದಲ್ಲಿ ಭಾಗಿಯಾಗಿದ್ದಾಗಿ ಒಪ್ಪಿಕೊಂಡಿದ್ದಾರೆ. ಇದಲ್ಲದೇ ಮಹಾರಾಷ್ಟ್ರ ರಾಜ್ಯದ ಕೆಲವೆಡೆ ಈ ತಂಡ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವ ಕುರಿತೂ ಅಲ್ಲಿನ ಪೊಲೀಸರೊಂದಿಗೆ ಮಾಹಿತಿ ವಿನಿಮಯ ಮಾಡಿಕೊಳ್ಳಲಾಗುತ್ತಿದೆ ಎಂದು ಎಸ್ ಪಿ ಆನಂದ ಕುಮಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಇದನ್ನೂ ಓದಿ:ನಾಲ್ಕುಸಾವಿರ ಪೊಲೀಸರ ನೇಮಕಾತಿ: ಆರಗ ಜ್ಞಾನೇಂದ್ರ
ಬಂಧಿತರಿಂದ 16.10 ಲಕ್ಷ ರೂ. ಮೌಲ್ಯದ 356 ಗ್ರಾಂ ಚಿನ್ನಾಭರಣ, 200 ಗ್ರಾಂ ಬೆಳ್ಳಿ ಆಭರಣ, ಒಂದು ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ ಬೊಲೆರೋ ಪಿಕಪ್ ವಾಹನ ವಶಕ್ಕೆ ಪಡೆಯಲಾಗಿದೆ ಎಂದು ವಿವರ ನೀಡಿದರು.
ಸದರಿ ಪ್ರಕರಣಗಳನ್ನು ಬೇಧಿಸಿ, ಆರೋಪಗಳನ್ನು ಬಂಧಿಸಿ, ಕಳ್ಳತನ ಆಗಿದ್ದ ವಸ್ತುಗಳನ್ನು ವಶಕ್ಕೆ ಪಡೆದ ಡಿಎಸ್ಪಿ ಲಕ್ಷ್ಮೀನಾರಾಯಣ, ಗಾಂಧಿ ಚೌಕ್ ಸಿಪಿಐ ರವೀಂದ್ರ ನಾಯ್ಕೋಡಿ, ಗೋಲಗುಂಬಜ ವೃತ್ತದ ಸಿಪಿಐ ರಮೇಶ ಅವಜಿ, ಎಸೈಗಳಾದ ಎಸ್.ಎಂ.ಶಿರಗುಪ್ಪಿ, ಸೋಮೇಶ ಗೆಜ್ಜಿ ಅವರಿದ್ದ ತನಿಖಾ ತಂಡಕ್ಕೆ ನಗದು ಬಹುಮಾನ ಘೋಷಿಸಿ, ವಿತರಣೆ ಮಾಡಿದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.