![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 1, 2021, 4:00 PM IST
ವಿಜಯಪುರ: ನಮ್ಮ ಸಹೋದರಿಯನ್ನು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಹೀಗಾಗಿ ಕೂಡಲೇ ನಮ್ಮ ಸಹೋದರಿಯನ್ನು ನಮ್ಮೊಂದಿಗೆ ಮಾತನಾಡಲು ಅವಕಾಶ ಮಾಡಿಕೊಡಿ ಎಂದು ಸಿ.ಡಿ ಪ್ರಕರಣದ ಯುವತಿಯ ಸಹೋದರರು ಆಗ್ರಹಿಸಿದ್ದಾರೆ.
ಗುರುವಾರ ಬೆಳಗಾವಿ ನಗರದಿಂದ ವಿಜಯಪುರ ಜಿಲ್ಲೆಯ ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಅಜ್ಜಿಯ ಮನೆಗೆ ಸ್ಥಳಾಂತರಗೊಂಡ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಡಿ ಲೇಡಿ ಸಹೋದರರು ಹಾಗೂ ಆಕೆಯ ತಂದೆ, ನಮ್ಮ ಮಗಳೊಂದಿಗೆ ಮಾತನಾಡಲು ಅವಕಾಶ ಮಾಡಿಕೊಡುವಂತೆ ಎಸ್ ಐಟಿ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಆದರೂ ಅವಕಾಶ ನೀಡಿಲ್ಲ ಎಂದಿದ್ದಾರೆ.
ಇದನ್ನೂ ಓದಿ:ಸಿಡಿಲೇಡಿ ಕುಟುಂಬ ವಿಜಯಪುರ ಜಿಲ್ಲೆಗೆ ಸ್ಥಳಾಂತರ
ಸದ್ಯ ಯಾರಿಂದಲೂ ನಮಗೆ ಭಯವಿಲ್ಲ, ಸೂಕ್ತ ಪೊಲೀಸ್ ಭದ್ರತೆ ಸಿಕ್ಕಿದೆ. ಪೊಲೀಸ್ ಭದ್ರತೆಯಲ್ಲೇ ಬೆಳಗಾವಿಯಿಂದ ಇಲ್ಲಿಗೆ ಬಂದಿದ್ದೇವೆ ಎಂದಿದ್ದಾರೆ.
ತಮ್ಮ ರಾಜಕೀಯ ಲಾಭಕ್ಕಾಗಿ ಡಿ.ಕೆ.ಶಿವಕುಮಾರ್ ನಮ್ಮ ಸಹೋದರಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ನಮ್ಮ ಬಳಿ ಅಗತ್ಯ ದಾಖಲೆಗಳಿವೆ. ಕೆಲವನ್ನು ಎಸ್ ಐಟಿ ತನಿಖಾ ತಂಡಕ್ಕೆ ನೀಡಿದ್ದೇವೆ. ನಮ್ಮಲ್ಲಿ ಇನ್ನೂ ಕೆಲ ದಾಖಲೆಗಳಿದ್ದು, ಸಮಯ ಬಂದಾಗ ಎಸ್ ಐಟಿ ತಂಡಕ್ಕೆ ನೀಡುತ್ತೇವೆ ಎಂದಿದ್ಧಾರೆ.
ನಮ್ಮ ಮಗಳನ್ನು ಮೊಬೈಲ್ ಮೂಲಕ ಸಂಪರ್ಕಿಸಲೂ ಆಕೆಯ ಈಗಿನ ನಂಬರ್ ನಮ್ಮ ಬಳಿ ಇಲ್ಲವಾಗಿದೆ. ಡಿ.ಕೆ.ಶಿವಕುಮಾರ್ ರಾಜಕೀಯ ಷಡ್ಯಂತ್ರದ ಪ್ರಭಾವಿತಳಾಗಿ ಒತ್ತಡದಲ್ಲಿ ಇರುವ ಆಕೆಗೆ ನಮ್ಮ ಸಾಂತ್ವನದ ಅಗತ್ಯವಿದೆ. ಹೀಗಾಗಿ ಮಗಳೊಂದಿಗೆ ಮಾತನಾಡಲು ಅವಕಾಶ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.