ಬಬಲೇಶ್ವರ ಕ್ಷೇತ್ರದಿಂದ ಬಸನಗೌಡ ಯತ್ನಾಳ ಸ್ಪರ್ಧಿಸಲು ಆಗ್ರಹ


Team Udayavani, Apr 4, 2023, 3:01 PM IST

Yatnal should contest from Babaleshwar Constituency: demand

ವಿಜಯಪುರ: ಹಿಂದು ಹುಲಿ ಎಂದು ಬಣ್ಣಿಸಿಕೊಳ್ಳುವ ಬಿಜೆಪಿ ಹಿರಿಯ ನಾಯಕರಾದ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ರಾಜ್ಯದ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಗೆಲ್ಲುವ ಶಕ್ತಿ ಇದೆ. ಹೀಗಾಗಿ ವಿಧಾನಸಭೆ ಚುನಾವಣೆಯಲ್ಲಿ ಹಿಂದಿನ ನಾಲ್ಕು ಅವಧಿಯಲ್ಲಿ ಬಿಜೆಪಿ ಗೆಲ್ಲಲಾಗದ ಬಬಲೇಶ್ವರ ಕ್ಷೇತ್ರದಿಂದ ಸ್ಪರ್ಧೆಗೆ ಅವಕಾಶ ನೀಡಬೇಕು ಎಂದು ಮುಖಂಡರು ಆಗ್ರಹಿಸಿದರು.

ಮಂಗಳವಾರ ನಗರದಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಗರಸಭೆ ಮಾಜಿ ಸದಸ್ಯ ರವೀಂದ್ರ ಬಗಲಿ, ರಾಜು ಬಿರಾದಾರ, ವಿಜಯಪುರ ನಗರ ಕ್ಷೇತ್ರದಿಂದ ಎರಡು ಬಾರಿ ಗೆದ್ದಿರುವ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶಟ್ಟಿ ಅವರು ಕಳೆದ ಬಾರಿ ಯತ್ನಾಳ ಅವರಿಗೆ ಕ್ಷೇತ್ರವನ್ನು ತ್ಯಾಗ ಮಾಡಿದ್ದು, ಈ ಬಾರಿ ಪಟ್ಟಣಶಟ್ಟಿ ಅವರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿದರು.

ಹಾಲಿ ಶಾಸಕರಾದ ಬಸನಗೌಡ ಪಾಟೀಲ ಅವರು ತಮ್ಮನ್ನು ತಾವು ಪ್ರಭಾವಿ ನಾಯಕರೆಂದು, ಹಿಂದು ಹುಲಿ ಎಂದು ಬಣ್ಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಕಳೆದ 4 ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಸಾಧ್ಯವಾಗಿಲ್ಲದ ಬಬಲೇಶ್ವರ ಕ್ಷೇತ್ರದಲ್ಲಿ ಟಿಕೆಟ್ ನೀಡಿದರೆ, ಬಸನಗೌಡ ಅವರ ಹುಟ್ಟೂರು ಯತ್ನಾಳ ಕೂಡ ಬಬಲೇಶ್ವರ ಕ್ಷೇತ್ರದಲ್ಲಿರುವ ಕಾರಣ ಅವರ ಗೆಲುವು ಸುಲಭವಾಗಲಿದೆ ಎಂದು ಆಗ್ರಹಿಸಿದರು.

ಬಬಲೇಶ್ವರ ಕ್ಷೇತ್ರಕ್ಕೆ ಯತ್ನಾಳ ಅವರಿಗೆ ಟಿಕೆಟ್ ನೀಡಿದರೆ ಗೆಲ್ಲಿಸಲು ನಾವೂ ಪರಿಶ್ರಮ ಪಡುತ್ತೇವೆ. ಯತ್ನಾಳ ಅವರು ಬಬಲೇಶ್ವರ ಕ್ಷೇತ್ರದಿಂದ ಸ್ಪರ್ಧಿಸುವುದರಿಂದ ಜಿಲ್ಲೆಯ 8 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲು ಸಹಕಾರಿ ಆಗಲಿದೆ ಎಂದರು.

ಎಲ್ಲ ಜಾತಿ, ಸಮುದಾಯಗಳೊಂದಿಗೆ ಆತ್ಮೀತೆಯಿಂದ ವರ್ತಿಸುವ ಅಪ್ಪು ಪಟ್ಟನಶಟ್ಟಿ ಅವರು ಕಳೆದ ಅವಧಿಯಲ್ಲಿ ಟಿಕೆಟ್ ತಪ್ಪಿದರೂ ಪಕ್ಷದ ವಿರುದ್ಧ, ನಾಯಕರ ವಿರುದ್ಧ ಚಕಾರ ಎತ್ತದೇ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದಾರೆ. ಆದರೆ ಯತ್ನಾಳ ಅವರು ತಮಗೆ ಟಿಕೆಟ್ ಕೈತಪ್ಪಿದಾಗ ಪಕ್ಷದ ವರಿಷ್ಠರ ವಿರುದ್ಧವೇ ಹಗುರವಾಗಿ ಮಾತನಾಡುವ ಪ್ರವೃತ್ತಿ ಹಾಗೂ ಪಕ್ಷ ವಿರೋಧಿ ಚಟುವಟಿಕೆಯಿಂದ ಎರಡು ಬಾರಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದಾರೆ ಎಂದು ದೂರಿದರು.

ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷನಿಷ್ಟ ಕಾರ್ಯಕರ್ತರನ್ನು ಕಡೆಗಣಿಸಿದ್ದಲ್ಲದೇ, ಬಂಡಾಯವೆದ್ದು ಸ್ಪರ್ಧಿಸಿದ ಪಕ್ಷದ ಅತೃಪ್ತ ಸ್ಪರ್ಧಿಗಳನ್ನು ಕರೆಸಿ ಮಾತನಾಡುವ ಸೌಜನ್ಯ ತೋರಿಲ್ಲ. ಪಕ್ಷದ ಪದಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿದ ನಮ್ಮ ವಿರುದ್ಧ ಜಿಲ್ಲಾಧ್ಯಕ್ಷರನ್ನು ಬಳಸಿಕೊಂಡು ನಮ್ಮನ್ನು ಪಕ್ಷದಿಂದ ಉಚ್ಛಾಟಿಸುವ ಮೂಲಕ ಸೇಡಿನ ರಾಜಕೀಯ ಮಾಡಿದರು ಎಂದು ಹರಿಹಾಯ್ದರು.

ಯತ್ನಾಳ ಅವರಿಗೆ ವಿಜಯಪುರ ನಗರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಿದರೆ ಪಕ್ಷದ ಮೂಲ ಕಾರ್ಯಕರ್ತರು ನಿರ್ಲಕ್ಷಕ್ಕೆ ಗುರಿಯಾಗಲಿದ್ದಾರೆ. ಪಕ್ಷದ ಕಾರ್ಯಕರ್ತರ ಪರಿಶ್ರಮದ ಬಗ್ಗೆ ಹಗುರವಾಗಿ ಮಾತನಾಡುವ ಹಾಗೂ ಜಾತಿಗಳ ಮಧ್ಯೆ ಸಂಘರ್ಷ ತಂದೊಡ್ಡು ಯತ್ನಾಳ ಅವರಿಗೆ ನಗರ ಕ್ಷೇತ್ರದಿಂದ ಟಿಕೆಟ್ ನೀಡಿದರೆ ಬಿಜೆಪಿ ಮೂಲ ಕಾರ್ಯಕರ್ತರು ತಟಸ್ಥರಾಗಿ ಉಳಿಯಲಿದ್ದೇವೆ ಎಂದು ಎಚ್ಚರಿಸಿದರು.

ಪಕ್ಷದ ವರಿಷ್ಠರು ಸ್ಥಳೀಯವಾಗಿ ಪರಿಸ್ಥಿತಿಯನ್ನು ಅರಿತು ಸ್ಪರ್ಧೆಗೆ ಅವಕಾಶ ಕಲ್ಪಿಸಬೇಕು.ಅವಕಾಶ ತಪ್ಪಿದರೂ ಪಕ್ಷನಿಷ್ಟೆ ಬಿಡದ ಅಪ್ಪು ಪಟ್ಟಣಶಟ್ಟಿ ಅವರಿಗೆ ನೀಡಬೇಕು ಎಂದು ಆಗ್ರಹಿಸಿದರು.

ಪಕ್ಷ ನಿಷ್ಟೆ ಇಲ್ಲದ ಯತ್ನಾಳ ಅವರು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸಿ, ತಮ್ಮ ಹಿಂಬಾಲಕರಿಗೆ ಟಿಕೆಟ್ ನೀಡುತ್ತ ಬಂದಿದ್ದಾರೆ. ತಮ್ಮನ್ನು ತಾವು ಶುದ್ಧಹಸ್ತರೆಂದು ಕರೆದುಕೊಳ್ಳುವ ಯತ್ನಾಳ ಅವರು, ತಮ್ಮ ಆಪ್ತ ಸಹಾಯಕರ ಮೂಲಕ ನಡೆಸುವ ಅವ್ಯವಹಾರಗಳ ಕುರಿತು ಶೀಘ್ರವೇ ಸಾರ್ವಜನಿಕವಾಗಿ ಬಹಿರಂಗ ಮಾಡುವುದಾಗಿ ಹೇಳಿದರು.

ತಮ್ಮನ್ನು ತಾವು ಒಂದೆ ಹಿಂದು ಹುಲಿ ಎಂದು ಕರೆದುಕೊಳ್ಳುವ ಯತ್ನಾಳ, ಪಂಚಮಸಾಲಿ ಮೀಸಲು ಹೋರಾಟದ ಮುಂಚೂಣಿ ನಾಯಕರ ವಿರುದ್ಧವೇ ಷಡ್ಯಂತ್ರ ಮಾಡಿದರು. ಸಮಾಜಕ್ಕೆ 2-ಎ ಮೀಸಲಾತಿಗಾಗಿ ಹೋರಾಡಿದ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಶ್ರೀಗಳನ್ನೇ ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಬಲಿಪಶು ಮಾಡಿದರು ಎಂದು ವಾಗ್ದಾಳಿ ನಡೆಸಿದರು.

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿಪಾಲಾದ ಯುವತಿ: ಶವಕ್ಕಾಗಿ ಶೋಧ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Congress: Make 100 laws, I am Anjala: MLA Basan Gowda Patil Yatnal

Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.