ಬಬಲೇಶ್ವರ ಕ್ಷೇತ್ರದಿಂದ ಬಸನಗೌಡ ಯತ್ನಾಳ ಸ್ಪರ್ಧಿಸಲು ಆಗ್ರಹ


Team Udayavani, Apr 4, 2023, 3:01 PM IST

Yatnal should contest from Babaleshwar Constituency: demand

ವಿಜಯಪುರ: ಹಿಂದು ಹುಲಿ ಎಂದು ಬಣ್ಣಿಸಿಕೊಳ್ಳುವ ಬಿಜೆಪಿ ಹಿರಿಯ ನಾಯಕರಾದ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ರಾಜ್ಯದ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಗೆಲ್ಲುವ ಶಕ್ತಿ ಇದೆ. ಹೀಗಾಗಿ ವಿಧಾನಸಭೆ ಚುನಾವಣೆಯಲ್ಲಿ ಹಿಂದಿನ ನಾಲ್ಕು ಅವಧಿಯಲ್ಲಿ ಬಿಜೆಪಿ ಗೆಲ್ಲಲಾಗದ ಬಬಲೇಶ್ವರ ಕ್ಷೇತ್ರದಿಂದ ಸ್ಪರ್ಧೆಗೆ ಅವಕಾಶ ನೀಡಬೇಕು ಎಂದು ಮುಖಂಡರು ಆಗ್ರಹಿಸಿದರು.

ಮಂಗಳವಾರ ನಗರದಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಗರಸಭೆ ಮಾಜಿ ಸದಸ್ಯ ರವೀಂದ್ರ ಬಗಲಿ, ರಾಜು ಬಿರಾದಾರ, ವಿಜಯಪುರ ನಗರ ಕ್ಷೇತ್ರದಿಂದ ಎರಡು ಬಾರಿ ಗೆದ್ದಿರುವ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶಟ್ಟಿ ಅವರು ಕಳೆದ ಬಾರಿ ಯತ್ನಾಳ ಅವರಿಗೆ ಕ್ಷೇತ್ರವನ್ನು ತ್ಯಾಗ ಮಾಡಿದ್ದು, ಈ ಬಾರಿ ಪಟ್ಟಣಶಟ್ಟಿ ಅವರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿದರು.

ಹಾಲಿ ಶಾಸಕರಾದ ಬಸನಗೌಡ ಪಾಟೀಲ ಅವರು ತಮ್ಮನ್ನು ತಾವು ಪ್ರಭಾವಿ ನಾಯಕರೆಂದು, ಹಿಂದು ಹುಲಿ ಎಂದು ಬಣ್ಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಕಳೆದ 4 ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಸಾಧ್ಯವಾಗಿಲ್ಲದ ಬಬಲೇಶ್ವರ ಕ್ಷೇತ್ರದಲ್ಲಿ ಟಿಕೆಟ್ ನೀಡಿದರೆ, ಬಸನಗೌಡ ಅವರ ಹುಟ್ಟೂರು ಯತ್ನಾಳ ಕೂಡ ಬಬಲೇಶ್ವರ ಕ್ಷೇತ್ರದಲ್ಲಿರುವ ಕಾರಣ ಅವರ ಗೆಲುವು ಸುಲಭವಾಗಲಿದೆ ಎಂದು ಆಗ್ರಹಿಸಿದರು.

ಬಬಲೇಶ್ವರ ಕ್ಷೇತ್ರಕ್ಕೆ ಯತ್ನಾಳ ಅವರಿಗೆ ಟಿಕೆಟ್ ನೀಡಿದರೆ ಗೆಲ್ಲಿಸಲು ನಾವೂ ಪರಿಶ್ರಮ ಪಡುತ್ತೇವೆ. ಯತ್ನಾಳ ಅವರು ಬಬಲೇಶ್ವರ ಕ್ಷೇತ್ರದಿಂದ ಸ್ಪರ್ಧಿಸುವುದರಿಂದ ಜಿಲ್ಲೆಯ 8 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲು ಸಹಕಾರಿ ಆಗಲಿದೆ ಎಂದರು.

ಎಲ್ಲ ಜಾತಿ, ಸಮುದಾಯಗಳೊಂದಿಗೆ ಆತ್ಮೀತೆಯಿಂದ ವರ್ತಿಸುವ ಅಪ್ಪು ಪಟ್ಟನಶಟ್ಟಿ ಅವರು ಕಳೆದ ಅವಧಿಯಲ್ಲಿ ಟಿಕೆಟ್ ತಪ್ಪಿದರೂ ಪಕ್ಷದ ವಿರುದ್ಧ, ನಾಯಕರ ವಿರುದ್ಧ ಚಕಾರ ಎತ್ತದೇ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದಾರೆ. ಆದರೆ ಯತ್ನಾಳ ಅವರು ತಮಗೆ ಟಿಕೆಟ್ ಕೈತಪ್ಪಿದಾಗ ಪಕ್ಷದ ವರಿಷ್ಠರ ವಿರುದ್ಧವೇ ಹಗುರವಾಗಿ ಮಾತನಾಡುವ ಪ್ರವೃತ್ತಿ ಹಾಗೂ ಪಕ್ಷ ವಿರೋಧಿ ಚಟುವಟಿಕೆಯಿಂದ ಎರಡು ಬಾರಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದಾರೆ ಎಂದು ದೂರಿದರು.

ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷನಿಷ್ಟ ಕಾರ್ಯಕರ್ತರನ್ನು ಕಡೆಗಣಿಸಿದ್ದಲ್ಲದೇ, ಬಂಡಾಯವೆದ್ದು ಸ್ಪರ್ಧಿಸಿದ ಪಕ್ಷದ ಅತೃಪ್ತ ಸ್ಪರ್ಧಿಗಳನ್ನು ಕರೆಸಿ ಮಾತನಾಡುವ ಸೌಜನ್ಯ ತೋರಿಲ್ಲ. ಪಕ್ಷದ ಪದಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿದ ನಮ್ಮ ವಿರುದ್ಧ ಜಿಲ್ಲಾಧ್ಯಕ್ಷರನ್ನು ಬಳಸಿಕೊಂಡು ನಮ್ಮನ್ನು ಪಕ್ಷದಿಂದ ಉಚ್ಛಾಟಿಸುವ ಮೂಲಕ ಸೇಡಿನ ರಾಜಕೀಯ ಮಾಡಿದರು ಎಂದು ಹರಿಹಾಯ್ದರು.

ಯತ್ನಾಳ ಅವರಿಗೆ ವಿಜಯಪುರ ನಗರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಿದರೆ ಪಕ್ಷದ ಮೂಲ ಕಾರ್ಯಕರ್ತರು ನಿರ್ಲಕ್ಷಕ್ಕೆ ಗುರಿಯಾಗಲಿದ್ದಾರೆ. ಪಕ್ಷದ ಕಾರ್ಯಕರ್ತರ ಪರಿಶ್ರಮದ ಬಗ್ಗೆ ಹಗುರವಾಗಿ ಮಾತನಾಡುವ ಹಾಗೂ ಜಾತಿಗಳ ಮಧ್ಯೆ ಸಂಘರ್ಷ ತಂದೊಡ್ಡು ಯತ್ನಾಳ ಅವರಿಗೆ ನಗರ ಕ್ಷೇತ್ರದಿಂದ ಟಿಕೆಟ್ ನೀಡಿದರೆ ಬಿಜೆಪಿ ಮೂಲ ಕಾರ್ಯಕರ್ತರು ತಟಸ್ಥರಾಗಿ ಉಳಿಯಲಿದ್ದೇವೆ ಎಂದು ಎಚ್ಚರಿಸಿದರು.

ಪಕ್ಷದ ವರಿಷ್ಠರು ಸ್ಥಳೀಯವಾಗಿ ಪರಿಸ್ಥಿತಿಯನ್ನು ಅರಿತು ಸ್ಪರ್ಧೆಗೆ ಅವಕಾಶ ಕಲ್ಪಿಸಬೇಕು.ಅವಕಾಶ ತಪ್ಪಿದರೂ ಪಕ್ಷನಿಷ್ಟೆ ಬಿಡದ ಅಪ್ಪು ಪಟ್ಟಣಶಟ್ಟಿ ಅವರಿಗೆ ನೀಡಬೇಕು ಎಂದು ಆಗ್ರಹಿಸಿದರು.

ಪಕ್ಷ ನಿಷ್ಟೆ ಇಲ್ಲದ ಯತ್ನಾಳ ಅವರು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸಿ, ತಮ್ಮ ಹಿಂಬಾಲಕರಿಗೆ ಟಿಕೆಟ್ ನೀಡುತ್ತ ಬಂದಿದ್ದಾರೆ. ತಮ್ಮನ್ನು ತಾವು ಶುದ್ಧಹಸ್ತರೆಂದು ಕರೆದುಕೊಳ್ಳುವ ಯತ್ನಾಳ ಅವರು, ತಮ್ಮ ಆಪ್ತ ಸಹಾಯಕರ ಮೂಲಕ ನಡೆಸುವ ಅವ್ಯವಹಾರಗಳ ಕುರಿತು ಶೀಘ್ರವೇ ಸಾರ್ವಜನಿಕವಾಗಿ ಬಹಿರಂಗ ಮಾಡುವುದಾಗಿ ಹೇಳಿದರು.

ತಮ್ಮನ್ನು ತಾವು ಒಂದೆ ಹಿಂದು ಹುಲಿ ಎಂದು ಕರೆದುಕೊಳ್ಳುವ ಯತ್ನಾಳ, ಪಂಚಮಸಾಲಿ ಮೀಸಲು ಹೋರಾಟದ ಮುಂಚೂಣಿ ನಾಯಕರ ವಿರುದ್ಧವೇ ಷಡ್ಯಂತ್ರ ಮಾಡಿದರು. ಸಮಾಜಕ್ಕೆ 2-ಎ ಮೀಸಲಾತಿಗಾಗಿ ಹೋರಾಡಿದ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಶ್ರೀಗಳನ್ನೇ ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಬಲಿಪಶು ಮಾಡಿದರು ಎಂದು ವಾಗ್ದಾಳಿ ನಡೆಸಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.