Vijayapura: ಸಿಎಂ ಕುರ್ಚಿಯಲ್ಲಿ ಟಗರು ಕುಂತವ್ರೆ, ಅಲ್ಲಾಡಿಸಲು ಅಷ್ಟು ಸುಲಭನಾ..? ಜಮೀರ್
Team Udayavani, Oct 8, 2024, 3:38 PM IST
ವಿಜಯಪುರ: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಸಿಎಂ ಕುರ್ಚಿಯಲ್ಲಿ ಟಗರು (ಸಿದ್ದರಾಮಯ್ಯ) ಕುಂತವ್ರೆ. ಆ ಟಗರಿಗೆ ಅಲ್ಲಾಡಿಸಲು ಅಷ್ಟು ಸುಲಭನಾ?, ಅದು ಸಾಧ್ಯನಾ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಪ್ರಶ್ನಿಸಿದರು.
ದಲಿತ ಸಿಎಂ ವಿಚಾರವಾಗಿ ಮಂಗಳವಾರ ನಗರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸದ್ಯ ಸಿಎಂ ಕುರ್ಚಿ ಖಾಲಿ ಇಲ್ಲ. ಕುರ್ಚಿ ಖಾಲಿ ಇದ್ದರೆ ತಾನೆ ಮುಂದಿನ ಮಾತು. ಐದು ವರ್ಷ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆಂದು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಖರ್ಗೆ ಅವರೇ ಹೇಳಿದ್ದಾರೆ ಎಂದು ಪುನರುಚ್ಚರಿಸಿದರು.
ಸಿಎಂ ಅಧಿಕಾರ ತಲಾ ಎರಡೂವರೆ ವರ್ಷ ಹಂಚಿಕೆಯಾಗಿದೆ ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಜಮೀರ್, ಇದು ಗೊತ್ತಿಲ್ಲ. ನಿಮಗೆ ಯಾರು ಹೇಳಿದ್ದು?. ಇದೆಲ್ಲ ಮಾಧ್ಯಮದವರ ಸೃಷ್ಟಿ. ಇದೇ ವಿಚಾರ ಕುರಿತು ಡಿ.ಕೆ.ಸುರೇಶ್ ಸಹ 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಹೇಳಿದ್ದಾರಲ್ಲ ಎಂದರು.
ಸಚಿವ ಸತೀಶ್ ಜಾರಕಿಹೊಳಿ ಅವರಿಂದ ಹಿರಿಯ ನಾಯಕರು ಮತ್ತು ಮೈಸೂರು ಭೇಟಿ ಬಗ್ಗೆ ಮಾತನಾಡಿ ಅವರು, ಅಲ್ಲಿ ಹೋಗಿ ಭೇಟಿ ಮಾಡಿದ್ರಿ, ಇಲ್ಲಿ ಹೋಗಿ ಭೇಟಿ ಮಾಡಿದ್ರು.
ಯಾರನ್ನು ಭೇಟಿಯಾಗಬಾರದಾ?
ಜಾರಕಿಹೊಳಿ ಅವರು ಮೈಸೂರಿಗೂ, ಹೋಗುತ್ತಾರೆ, ಬೆಳಗಾವಿಗೂ ಹೋಗುತ್ತಾರೆ. ನಾನು ವಿಜಯಪುರಕ್ಕೆ ಬಂದಿದ್ದೇನೆ. ಮುಖಂಡರನ್ನು ಭೇಟಿ ಮಾಡುವುದು ತಪ್ಪಾ?. ಸಚಿವ ಶಿವಾನಂದ ಪಾಟೀಲ್ ಭೇಟಿಯಾಗಿದ್ದರು. ನಾವು ಜತೆಗೆ ಊಟ ಮಾಡಿದ್ದೇವೆ. ಅದು ಕೂಡ ಸುದ್ದಿ ಮಾಡೋಕಾಗುತ್ತಾ ಎಂದು ಬೇಸರ ವ್ಯಕ್ತಪಡಿಸಿದರು.
ಉಪಚುನಾವಣೆಯಲ್ಲಿ ಕುಮಾರಸ್ವಾಮಿಗೆ ಚನ್ನಪಟ್ಟಣ ಮತದಾರರು ತಕ್ಕಪಾಠ ಕಲಿಸುತ್ತಾರೆ:
ವಿಜಯಪುರ: ಈ ಬಾರಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಮತದಾರರು ಜೆಡಿಎಸ್ ನಾಯಕ, ಕೇಂದ್ರ ಸಚಿವ ಹೆಚ್. ಡಿ.ಕುಮಾರಸ್ವಾಮಿ ಅವರಿಗೆ ತಕ್ಕಪಾಠ ಕಲಿಸುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
ಮುಂಬರುವ ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ ನಾಯಕ ಸಿ.ಪಿ. ಯೋಗೇಶ್ವರ್ ಅವರಿಗೆ ಬಿಜೆಪಿ- ಜೆಡಿಎಸ್ ಮೈತ್ರಿ ಟಿಕೆಟ್ ಕೊಟ್ಟರೆ ನಮ್ಮ ಪಕ್ಷ ಉಳಿಯುತ್ತಾ ಎಂಬ ಕುಮಾರಸ್ವಾಮಿ ಹೇಳಿಕೆಗೆ ಮಂಗಳವಾರ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಆ ಪಕ್ಷ (ಜೆಡಿಎಸ್) ಎಲ್ಲಿದೆ ಉಳಿಯೋಕೆ?, ಜನ ಎಷ್ಟು ಅಂತಾ ಸಹಿಸಿಕೊಳ್ಳುತ್ತಾರೆ. ರಾಮನಗರ ಇತ್ತು, ರಾಮನಗರಕ್ಕೆ ರಾಜಿನಾಮೆ ಕೊಟ್ಟರು. ಈಗ ಸೋತು ಸುಣ್ಣರಾಗಿದ್ದಾರೆ. ಚನ್ನಪಟ್ಟಣಕ್ಕೆ ಜನ ಆಯ್ಕೆ ಮಾಡಿದ್ದರು. ಚನ್ನಪಟ್ಟಣ ಜನರನ್ನ ಕೇಳಿ ಮಂಡ್ಯ ಲೋಕಸಭಾ ಚುನಾವಣೆಗೆ ನಿಂತರಾ ಎಂದು ಪ್ರಶ್ನಿಸಿದರು.
ಅಲ್ಲದೇ, ಮಂಡ್ಯ ಲೋಕಸಭೆ ಚುನಾವಣೆಯಲ್ಲೂ ಚನ್ನಪಟ್ಟಣದಲ್ಲಿ ಜನ ಗೆಲ್ಲಿಸಿಕೊಂಡು ಬಂದಿದ್ದರು. ಆದರೆ, ಮಂಡ್ಯಕ್ಕೆ ಹೋಗುವ ಮುನ್ನ ಒಂದು ಮಾತು ಚನ್ನಪಟ್ಟಣ ಜನರನ್ನು ಕೇಳಿದ್ದರಾ?, ಚನ್ನಪಟ್ಟಣ ಮತದಾರರ ಅನುಮತಿ ತೆಗೆದುಕೊಂಡಿದ್ದಾರಾ?, ಏನೇನೂ ಕೇಳಿಲ್ಲ, ತಮ್ಮ ಮನಸ್ಸಿಗೆ ಬಂದಂಗೆ ಮಾಡಿದ್ದಾರೆ. ಹೀಗಾಗಿ ಜನ ಎಷ್ಟು ಅಂತಾ ಸಹಿಸಿಕೊಳ್ಳುತ್ತಾರೆ ಎಂದು ಕುಮಾರಸ್ವಾಮಿ ಅವರಿಗೆ ಜಮೀರ್ ಕುಟುಕಿದರು.
ಇದನ್ನೂ ಓದಿ: Jammu Kashmir Result: ಜಮ್ಮು-ಕಾಶ್ಮೀರದ ನೂತನ ಸಿಎಂ ಹೆಸರು ಘೋಷಿಸಿದ ಫಾರೂಕ್ ಅಬ್ದುಲ್ಲಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Result: ಚುನಾವಣೋತ್ತರ ಸಮೀಕ್ಷೆ ಬಗ್ಗೆ ನಂಬಿಕೆಯಿಲ್ಲ…: ಡಿಕೆ ಶಿವಕುಮಾರ್
Belagavi: ಮುಖ್ಯಮಂತ್ರಿ ಬದಲಾವಣೆ ಎಂಬುದು ಕೇವಲ ಊಹೆ ಮಾತ್ರ: ಸಚಿವ ಕೃಷ್ಣ ಭೈರೇಗೌಡ
ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು
Ballari: ಮಧ್ಯಾರಾತ್ರಿ ಆರ್ ಟಿಓ ಚೆಕ್ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ
Dandeli: ಭರತನಾಟ್ಯ ಕ್ಷೇತ್ರದಲ್ಲಿ ಅನುಪಮ ಸಾಧನೆಗೈದ ಕೃಷ್ಣ ಭಾಗವತ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bangladesh Cricket: ಭಾರತ ಸರಣಿಯ ನಡುವೆ ವಿದಾಯ ಘೋಷಿಸಿದ ಮತ್ತೊಬ್ಬ ಹಿರಿಯ ಆಟಗಾರ
Maski; ಚಿರತೆಗೆ ಹೊಲುವ ಕಾಡು ಬೆಕ್ಕು ಪ್ರತ್ಯಕ್ಷ; ಗ್ರಾಮಸ್ಥರ ಆತಂಕ
Election Result: ಚುನಾವಣೋತ್ತರ ಸಮೀಕ್ಷೆ ಬಗ್ಗೆ ನಂಬಿಕೆಯಿಲ್ಲ…: ಡಿಕೆ ಶಿವಕುಮಾರ್
Dharwad: ಕಪ್ಪತ್ತಗುಡ್ಡದ ರಕ್ಷಣೆಗೆ ಹೋರಾಟ ನಿರಂತರ: ನಂದಿವೇರಿ ಸ್ವಾಮೀಜಿ
Jammu Kashmir Poll:ವಿಶೇಷ ಸ್ಥಾನಮಾನ ರದ್ದು ನಿರ್ಧಾರ ಜನರು ಒಪ್ಪಿಲ್ಲ: ಫಾರೂಖ್ ಅಬ್ದುಲ್ಲಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.