ಬಿಜೆಪಿ ಸರಕಾರದಿಂದ ಕೋಟ್ಯಂತರ ರೂ. ಹಗರಣ: ಪ್ರಿಯಾಂಕಾ

ಭ್ರಷ್ಟಾಚಾರ ಬಾಣ

Team Udayavani, Apr 26, 2023, 9:00 AM IST

Udayavani Kannada Newspaper

ಹನೂರು: ರಾಜ್ಯದಲ್ಲಿ ಚುನಾವಣೆ ಪ್ರಚಾರ ಆರಂಭಿಸಿರುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ, ರಾಜ್ಯ ಸರಕಾರದ ವಿರುದ್ಧ ಭ್ರಷ್ಟಾಚಾರದ ಬಾಣ ಪ್ರಯೋಗಿಸಿದ್ದಾರೆ.
ಚುನಾವಣೆ ಘೋಷಣೆ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದ ಅವರು ಚಾಮರಾಜನಗರದ ಹನೂರು ಮತ್ತು ಮೈಸೂರು ಜಿಲ್ಲೆಯ ಕೆ.ಆರ್‌. ನಗರದಲ್ಲಿ ಬಿರುಸಿನ ಪ್ರಚಾರ ನಡೆಸಿದರು.
ರಾಜ್ಯದ ಬಿಜೆಪಿ ಸರಕಾರ 40 ಪರ್ಸೆಂಟ್‌ ಭ್ರಷ್ಟಾಚಾರದಲ್ಲಿ ಮುಳುಗಿದ್ದು, 1.50 ಲಕ್ಷ ಕೋಟಿ ರೂ. ಮೌಲ್ಯದ ಭ್ರಷ್ಟಾಚಾರ ಎಸಗಿದೆ ಎಂದು ಗಂಭೀರ ಆರೋಪ ಮಾಡಿದರು.

ಬಿಜೆಪಿ ಸರಕಾರ ನಡೆಸಿದ 1.50 ಲಕ್ಷ ಕೋಟಿ ರೂ. ಮೊತ್ತದಿಂದ 100 ಏಮ್ಸ್‌ ಆಸ್ಪತ್ರೆಗಳು, 175 ಇಎಸ್‌ಐ ಆಸ್ಪತ್ರೆಗಳು, 30 ಸಾವಿರ ಸ್ಮಾರ್ಟ್‌ ಕ್ಲಾಸ್‌ಗಳು, 750 ಕಿ.ಮೀ. ಮೆಟ್ರೋ, 2, 250 ಕಿ.ಮೀ. ಹೆದ್ದಾರಿ ಮತ್ತು ಬಡವರಿಗೆ 30 ಲಕ್ಷ ಮನೆಗಳನ್ನು ನಿರ್ಮಾಣ ಮಾಡಿಕೊಡಬಹುದಿತ್ತು ಎಂದು ಟೀಕಿಸಿದರು. ಸರಕಾರದಲ್ಲಿ ಹಲವಾರು ಹುದ್ದೆಗಳು ಖಾಲಿಯಿದ್ದರೂ ನಿರುದ್ಯೋಗಿ ಯವಕರಿಗೆ ಆ ಉದ್ಯೋಗಗಳನ್ನು ನೀಡುವಲ್ಲಿ ಸರಕಾರ ಸಂಪೋರ್ಣವಾಗಿ ವಿಫ‌ಲವಾಗಿದೆ ಎಂದು ಆರೋಪಿಸಿದರು.

ದುರ್ಬಲಗೊಳಿಸಲು ಯತ್ನ
ನಂದಿನಿಯನ್ನು ದುರ್ಬಲಗೊಳಿಸಿ ಗುಜರಾತ್‌ನ ಅಮುಲ್‌ ಸಂಸ್ಥೆಯ ಮಾರಾಟವನ್ನು ಹೆಚ್ಚಳ ಮಾಡಿಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಕಾಂಗ್ರೆಸ್‌ ಸರಕಾರ ಅಧಿಕಾರದಲ್ಲಿದ್ದಾಗ ಹಾಲಿನ ಉತ್ಪಾದನೆ ಹೆಚ್ಚಾಗಿ ಅದನ್ನು ಸರಕಾರಿ ಶಾಲಾ ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆಯಡಿ ವಿತರಿಸಲಾಗುತಿತ್ತು. ಆದರೆ ಬಿಜೆಪಿ ಸರಕಾರ ನಂದಿನಿ ಹಾಲಿನ ಕೊರತೆಯಿದೆ ಎನ್ನುತ್ತಿದೆ. ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಉತ್ಪಾದನೆಯಾಗುತ್ತಿದ್ದ ಹಾಲು ಈಗ ಎಲ್ಲಿ ಹೋಗುತ್ತಿದೆ ಎಂದು ಕಿಡಿಕಾರಿದರು.

ರೈತರ ಆದಾಯ 27 ರೂ.
ಡಬಲ್‌ ಎಂಜಿನ್‌ ಸರಕಾರದಿಂದ ರೈತರ ಆದಾಯ ದ್ವಿಗುಣಗೊಳ್ಳಲಿದೆ ಎಂಬ ಭರವಸೆ ನೀಡಲಾಗಿತ್ತು. ಆದರೆ ಈ ಸರಕಾರ ಅಧಿಕಾರಕ್ಕೆ ಬಂದ ಬಳಿಕ ರೈತನ ಆದಾಯ ಕೇವಲ 27 ರೂ. ಆಗಿದೆ. ಆದರೆ ಪ್ರಧಾನಿಯ ಸ್ನೇಹಿತ ಅದಾನಿಯ ಒಂದು ದಿನದ ಆದಾಯ 16 ಲಕ್ಷ ಕೋ.ರೂ. ಇದೆ. ಈ ಸರಕಾರಗಳ ಬೆಲೆ ಏರಿಕೆ ನೀತಿಯಿಂದಾಗಿ ರೈತರು ಮತ್ತ ಬಡವರ ಬದುಕು ದುಸ್ತರವಾಗಿದೆ ಎಂದು ಕಿಡಿಕಾರಿದರು.

ಹಗುರವಾಗಿ ಪರಿಗಣಿಸಬೇಡಿ
ಈ ಚುನಾವಣೆಯನ್ನು ಯಾರೂ ಸುಲಭವಾಗಿ ಪರಿಗಣಿಸಬಾರದು ಎಂದು ಹೇಳಿದ ಪ್ರಿಯಾಂಕಾ, ಈ ಚುನಾವಣೆ ನಿಮ್ಮ ಮಕ್ಕಳ, ಈ ರಾಜ್ಯದ ಯುವಕರ ಭವಿಷ್ಯವನ್ನು ರೂಪಿಸಲಿದೆ. ಈ ಚುನಾವಣೆ ನಿಮ್ಮ ಆತ್ಮಾಭಿಮಾನ. ಕರ್ನಾಟಕದ ಆತ್ಮಾಭಿಮಾನ ಮತ್ತು ದೇಶದ ಭವಿಷ್ಯವನ್ನು ರೂಪಿಸುವ ಚುನಾವಣೆಯಾಗಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಿಸಿದರೆ ನಿಮ್ಮ ಕಷ್ಟವನ್ನು ಗುರುತಿಸುವ ಕೆಲಸ ಮಾಡಲಾಗುವುದು ಎಂದರು.

ಗಿರಿಜನರ ಜತೆಗೆ ಸಂವಾದ
ನಾವು ಅಧಿಕಾರಕ್ಕೆ ಬರಲಿ -ಬಿಡಲಿ, ನಿಮ್ಮ ಗ್ರಾಮದ ಎಲ್ಲ ಸಮಸ್ಯೆಗಳನ್ನು ಬಗೆಹರಿಸುತ್ತೇವೆ. ನಿಮ್ಮ ಹೆಸರು ಮತ್ತು ಊರಿನ ಹೆಸರು ಬರೆದುಕೊಡಿ… ಕೊಕ್ಕಬರೆ ಗ್ರಾಮದ ಮಹಿಳೆಯ ಬಳಿ ಪ್ರಿಯಾಂಕಾ ವಾದ್ರಾ ಮಾಹಿತಿ ಹೇಳಿದ್ದಿದು. ಗಿರಿಜನ ಮಹಿಳೆಯರೊಂದಿಗೆ ನಡೆಸಿದ ಸಂವಾದದ ವೇಳೆ ಅವರು ಈ ವಾಗ್ಧಾನ ಮಾಡಿದ್ದಾರೆ. ಕೊಕ್ಕಬರೆ ಗ್ರಾಮದ ಬೊಮ್ಮಮ್ಮ ತಮ್ಮ ಗ್ರಾಮದ ಸಂಕಷ್ಟ ಹೇಳಿಕೊಂಡರು. ಇದಕ್ಕೆ ಸ್ಪಂದಿಸಿದ ಪ್ರಿಯಾಂಕಾ ವಾದ್ರಾ ಕಷ್ಟ ಬಗೆಹರಿಸುವ ವಾಗ್ಧಾನ ಮಾಡಿದರು.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.