ಉನ್ನತೀಕರಿಸಿದ ಟೆಕ್ನಾಲಜಿ ಹಬ್‌ ಲೋಕಾರ್ಪಣೆ

6 ಹೊಸ ಕೋರ್ಸ್‌ಗಳನ್ನು ಮಂಜೂರು ಮಾಡಲಾಗಿದೆ

Team Udayavani, Jun 21, 2022, 6:23 PM IST

ಉನ್ನತೀಕರಿಸಿದ ಟೆಕ್ನಾಲಜಿ ಹಬ್‌ ಲೋಕಾರ್ಪಣೆ

ಚಾಮರಾಜನಗರ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಕರ್ನಾಟಕ ಸರ್ಕಾರದ ವಿನೂತನ ಉದ್ಯೋಗ ಯೋಜನೆಯಡಿ ಜಾಗತಿಕ ಕೈಗಾರಿಕೆ ಹಾಗೂ ಅಸೆಂಬ್ಲಿ ಲೈನುಗಳಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸಿ ಯುವಜನತೆಗೆ ಅತ್ಯಾಧುನಿಕ ತಂತ್ರಜ್ಞಾನಗಳ ತರಬೇತಿ ನೀಡುವ ಸಲುವಾಗಿ ತಾಂತ್ರಿಕ ಕೇಂದ್ರವನ್ನಾಗಿ ಉನ್ನತೀಕರಿಸಲಾಗಿರುವ ಟೆಕ್ನಾಲಜಿ ಹಬ್‌ಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿನ ಬೇಸ್‌ ಕ್ಯಾಂಪ್‌ನಲ್ಲಿ ವರ್ಚುವಲ್‌ಕಾರ್ಯಕ್ರಮದ ಮೂಲಕ ಲೋಕಾರ್ಪಣೆ ಮಾಡಿದರು.

ನಗರ ಸಮೀಪ ಕಾಳನಹುಂಡಿ ರಸ್ತೆಯಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ)ಯಲ್ಲಿ 33 ಕೋಟಿ ರೂ.ಗಳ ವೆಚ್ಚದಲ್ಲಿ ಉನ್ನತೀಕರಿಸಲಾಗಿರುವ
ಟೆಕ್ನಾಲಜಿ ಹಬ್‌ ಹಾಗೂ ನಿರ್ಮಿತಿ ಕೇಂದ್ರದ ವತಿಯಿಂದ 83.29 ಲಕ್ಷ ರೂ.ಗಳ ವೆಚ್ಚದಲ್ಲಿ ಐಟಿಐ ವರ್ಕ್‌ಶಾಪ್‌ ಮತ್ತು 41.40 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿರುವ ಐಟಿಐ ಟೆಕ್‌ಲ್ಯಾಬ್‌ ಅನ್ನು ಶಾಸಕ ಸಿ. ಪುಟ್ಟರಂಗಶೆಟ್ಟಿ ಉದ್ಘಾಟಿಸಿದರು.

ಇದೇ ವೇಳೆ ಮಾತನಾಡಿದ ಶಾಸಕ ಸಿ. ಪುಟ್ಟರಂಗಶೆಟ್ಟಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಟಾಟಾ ಟೆಕ್ನಾಲಜೀಸ್‌ ಸಹಯೋಗದೊಂದಿಗೆ ರಾಜ್ಯದ 150 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಟೆಕ್ನಾಲಜಿ ಹಬ್‌ಗಳನ್ನಾಗಿ ಉನ್ನತೀಕರಿಸಲಾ ಗಿದ್ದು, ಜಿಲ್ಲೆಯ ಬೇಗೂರು, ಚಾಮರಾಜ ನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ಹಾಗೂ ಹನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳು ಈ ಯೋಜನೆಗೆ ಆಯ್ಕೆಗೊಂಡಿವೆ. ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಉನ್ನತೀಕರಿಸಲಾಗಿರುವ ಟೆಕ್ನಾಲಜಿ ಹಬ್‌ ಗಳ ಅನುಕೂಲ ಪಡೆಯುವಂತೆ ತಿಳಿಸಿ ಶುಭ ಹಾರೈಸಿದರು.

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಭಾರ ಪ್ರಾಚಾರ್ಯ ಟಿ.ಎಂ. ರಂಗಸ್ವಾಮಿ ಮಾತನಾಡಿ, ಉನ್ನತೀಕರಿಸಲಾಗಿರುವ ಟೆಕ್ನಾಲಜಿ ಹಬ್‌ಗಳಿಗೆ ಅಡ್ವಾನ್ಸ್ ಡ್‌ ಸಿಎನ್‌ಸಿ ಮೆಷಿನಿಂಗ್‌ ಟೆಕ್ನಿಷಿಯನ್‌, ಆರಿrಸಿಯನ್‌ ಯೂಸಿಂಗ್‌ ಅಡ್ವಾನ್ಸ್‌ಡ್‌ ಟೂಲ್‌, ಬೇಸಿಕ್‌ ಡಿಸೈನರ್‌ ಆಂಡ್‌ ವರ್ಚುವೆಲ್‌ ವೆರಿಫೈಯರ್‌(ಮೆಕಾನಿಕಲ್‌), ಮೆಕಾನಿಕ್‌ ಎಲೆಕ್ಟ್ರಿಕಲ್‌ ವೆಹಿಕಲ್‌, ಮ್ಯಾನುಫ್ಯಾಕ್ಚರಿಂಗ್‌ ಪ್ರೋಸೇಸ್‌ ಕಂಟ್ರೋಲ್‌ ಆಂಡ್‌ ಆಟೋಮೇಷನ್‌ ಹಾಗೂ ಇಂಡಸ್ಟ್ರೀಯಲ್‌ ರೋಬೋಟಿಕ್ಸ್‌ ಆಂಡ್‌ ಟಿಜಿಟಲ್‌ ಮ್ಯಾನುಫ್ಯಾಕ್ಚರಿಂಗ್‌ ಟೆಕ್ನಿಷಿಯನ್‌ ಸೇರಿದಂತೆ ಒಟ್ಟಾರೆ 6 ಹೊಸ ಕೋರ್ಸ್‌ಗಳನ್ನು ಮಂಜೂರು ಮಾಡಲಾಗಿದೆ ಎಂದರು.

ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಎಸ್‌. ಸುರೇಂದ್ರ, ಎಂಜಿನಿಯರ್‌ ಎನ್‌. ಭೀಮಸಾಗರ್‌, ಟಾಟಾ ಟೆಕ್ನಾಲಜಿ ಸೆಬ್ಜೆಕ್ಟ್ ಸ್ಪೆಷಲಿಸ್ಟ್‌ ಸಿ. ಕುಮಾರ್‌, ಶಿವಪುರ ಗ್ರಾಮ ಪಂಚಾಯತಿ ಅಧ್ಯಕ್ಷೆ ಎಂ.ಸಿ. ಮಹದೇವಮ್ಮ ಹಾಜರಿದ್ದರು. ಬಳಿಕ ಶಾಸಕ ಸಿ. ಪುಟ್ಟರಂಗಶೆಟ್ಟಿ , ಉನ್ನತೀಕರಿಸಲಾಗಿರುವ ಟೆಕ್ನಾಲಜಿ ಹಬ್‌ಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ವರ್ಚುವಲ್‌ ಮೂಲಕ ಲೋಕಾರ್ಪಣೆಗೊಳಿಸಿದ ಕಾರ್ಯಕ್ರಮವನ್ನು ವೀಕ್ಷಿಸಿದರು.

ಐಟಿಐ ತಾಂತ್ರಿಕ ಕೇಂದ್ರಕ್ಕೆ ಶಾಸಕ ಚಾಲನೆ
ಹನೂರು: ಐಟಿಐ ಕಾಲೇಜನ್ನು ತಾಂತ್ರಿಕ ಕೇಂದ್ರವನ್ನಾಗಿ ಉನ್ನತೀಕರಣಗೊಳಿಸಿರುವುದು ಹಳ್ಳಿಭಾಗದ ವಿದ್ಯಾರ್ಥಿ ಗಳಿಗೆ ವರದಾನವಾಗಿದೆ ಎಂದು ಶಾಸಕ ಆರ್‌.ನರೇಂದ್ರ ಹೇಳಿದರು. ಪಟ್ಟಣದ ಹೊರವಲಯದ ಹುಲುಸುಗುಡ್ಡೆ ಸಮೀಪ 1.46 ಕೋಟಿ ವೆಚ್ಚದಲ್ಲಿ ಉನ್ನತೀಕರಣಗೊಳಿಸಿರುವ ತಾಂತ್ರಿಕ ಕೇಂದ್ರವನ್ನು ಲೋಕಾರ್ಪ ಣೆಗೊಳಿಸಿ ಮಾತನಾಡಿ, ರಾಜ್ಯದಲ್ಲಿನ 100 ಐಟಿಐ ಕಾಲೇಜನ್ನು ತಾಂತ್ರಿಕ ಕೇಂದ್ರವನ್ನಾಗಿ ಉನ್ನತೀಕರಿಸಲಾಗುತ್ತಿದ್ದು ನರೇಂದ್ರ ಮೋದಿಯವರು ಲೋಕಾರ್ಪಣೆಗೊಳಿಸುತ್ತಿದ್ದಾರೆ ಎಂದರು.

ಈ ಯೋಜನೆ ಒಂದು ಉತ್ತಮ ಯೋಜನೆಯಾಗಿದ್ದು ತಾಂತ್ರಿಕ ಯುಗದಲ್ಲಿ ಹಳ್ಳಿಗಾಡಿನ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಇಂದಿನ ಸ್ಫರ್ಧಾತ್ಮಕ ಯುಗದಲ್ಲಿ ಪದವಿಗಿಂತ ಹೆಚ್ಚಿನ ಬೇಡಿಕೆ ತಾಂತ್ರಿಕ ಕೋರ್ಸು ಗಳಿಗಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಂಡು ಉನ್ನತ ಹುದ್ದೆಗಳಿಗೆ ತೆರಳಬೇಕು ಎಂದು ಸಲಹೆ ಹೇಳಿದರು. ಕಾಲೇಜು ಪ್ರಾಂಶುಪಾಲರು ಸುತ್ತುಗೋಡೆ ನಿರ್ಮಾಣ ಮಾಡಿ ಕೊಡುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಶಾಸಕರು ಅಂದಾಜುಪಟ್ಟಿ ಸಲ್ಲಿಸಿಕೊಟ್ಟಲ್ಲಿ ಸಂಬಮಧಪಟ್ಟ ಸಚಿವರ ಜೊತೆ ಮಾರುನಾಡುವುದಾಗಿ ತಿಳಿಸಿ, ಅಂದಾಜುಪಟ್ಟಿ ತಯಾರಿಸಲು ಅಭಿಯಂತರ
ರಮೇಶ್‌ಗೆ ಸೂಚನೆ ನೀಡಿ ದರು. ಪಪಂ ಉಪಾಧ್ಯಕ್ಷ ಗಿರೀಶ್‌, ಸದಸ್ಯ ಹರೀಶ್‌ ಕುಮಾ ರ್‌, ಗ್ರಾ.ಪಂ ಅಧ್ಯಕ್ಷ ಕನಕರಾಜು, ಮುಖಂಡರಾದ ಮಂಗಲ ಪ್ರಕಾಶ್‌, ನಿರ್ಮಿತಿ ಕೇಂದ್ರದ ಅಭಿಯಂತರ ರಮೇಶ್‌ ಇದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.