ಅಂಬೇಡ್ಕರ್‌ ಶೋಷಿತ ವರ್ಗದವರ ಆಶಾಕಿರಣ; ಜಿಲ್ಲಾಧಿಕಾರಿ ಚಾರುಲತಾ

ಇಡೀ ಬದುಕನ್ನು ಅಧ್ಯಯನಕ್ಕೆ ಮೀಸಲಿಟ್ಟು ದೇಶಕ್ಕೆ ಸಾಮಾಜಿಕ ಪ್ರಜ್ಞೆ ಎಚ್ಚರ ಮೂಡಿಸಿದವರು ಅಂಬೇಡ್ಕರ್‌

Team Udayavani, Apr 14, 2022, 4:33 PM IST

ಅಂಬೇಡ್ಕರ್‌ ಶೋಷಿತ ವರ್ಗದವರ ಆಶಾಕಿರಣ; ಜಿಲ್ಲಾಧಿಕಾರಿ ಚಾರುಲತಾ

ಚಾಮರಾಜನಗರ: ಡಾ. ಬಿ.ಆರ್‌.ಅಂಬೇಡ್ಕರ್‌ ರವರು ದೇಶದಲ್ಲಿದ್ದ ಜಾತೀಯತೆ, ಅಸಮಾನತೆ, ಅನಕ್ಷರತೆ ಹಾಗೂ ಶೋಷಣೆಗಳ ನಿರ್ಮೂಲನೆಗೆ ಸಂವಿಧಾನದ ಮೂಲಕ ಸೂಕ್ತ ಚಿಕಿತ್ಸೆ ಪರಿಹಾರ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್‌ ಹೇಳಿದರು.

ಬುಧವಾರ, ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್‌.ಪಟೇಲ್‌ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಬಾಬಾಸಾಹೇಬ್‌ ಡಾ.ಬಿ.ಆರ್‌. ಅಂಬೇಡ್ಕರ್‌ರವರ 131ನೇ ಜನ್ಮ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ವಿಚಾರ ಸಂಕಿರಣದಲ್ಲಿ ಮಾತನಾಡಿದರು.

ಡಾ.ಬಿ.ಆರ್‌.ಅಂಬೇಡ್ಕರ್‌ ರವರು ಮಹಾನ್‌ ಮಾನವತಾವಾದಿಯಾಗಿದ್ದು ಶೋಷಿತ ವರ್ಗದವರ ಆಶಾಕಿರಣ ಹಾಗೂ ಮಹಿಳೆಯರ ಪಾಲಿಗೆ ಸಮಾನತೆಯ ನಂದಾದೀಪವಾಗಿದ್ದಾರೆ. ಸೂರ್ಯ ಭೂಮಿಗೆ ಎಷ್ಟು ಮುಖ್ಯವೋ ಹಾಗೇ ಡಾ. ಬಿ.ಆರ್‌ ಅಂಬೇಡ್ಕರ್‌ ರವರು ಭಾರತಕ್ಕೆ ಅಷ್ಟೇ ಮುಖ್ಯವಾಗಿದ್ದಾರೆ. ಸಾವಿರಾರು ವರ್ಷಗಳ ಕಾಲದಿಂದಲೂ ಇದ್ದ ಜಾತೀಯತೆ, ಅಸಮಾನತೆ, ಅನ್ಯಾಯ, ಶೋಷಣೆಗಳಿಗೆ ಸಂವಿಧಾನದಲ್ಲಿ ಕಾನೂನು ರೂಪಿಸುವ ಮೂಲಕ ಚಿಕಿತ್ಸೆ ನೀಡಿದ್ದಾರೆ ಎಂದರು.

ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಸರ್ವಕಾಲಿಕ ಚಿಂತನೆಗಳ ಕುರಿತು ವಿಚಾರ ಮಂಡಿಸಿದ ಲೇಖಕ ಡಾ. ಜಗದೀಶ್‌ ಕೊಪ್ಪ ಮಾತನಾಡಿ ಜಗತ್ತಿನಲ್ಲಿ ಮನುಕುಲದ ಬಗ್ಗೆ ಅತ್ಯಂತ ಗಂಭೀರವಾಗಿ ಆಲೋಚಿಸಿದ ಇಬ್ಬರು ಮಹನಿಯರೆಂದರೆ ಡಾ. ಬಿ.ಆರ್‌. ಅಂಬೇಡ್ಕರ್‌ ಮತ್ತು ಅಬ್ರಹಾಂ ಲಿಂಕನ್‌. ಇಡೀ ಬದುಕನ್ನು ಅಧ್ಯಯನಕ್ಕೆ ಮೀಸಲಿಟ್ಟು ದೇಶಕ್ಕೆ ಸಾಮಾಜಿಕ ಪ್ರಜ್ಞೆ ಎಚ್ಚರ ಮೂಡಿಸಿದವರು ಅಂಬೇಡ್ಕರ್‌ ಎಂದರು.

ಮೈಸೂರಿನ ವಿಶ್ವಮೈತ್ರಿ ಬುದ್ಧ ವಿಹಾರದ ಶ್ರೀ ಕಲ್ಯಾಣಸಿರಿ ಬಂತೇಜಿ ಸಾನ್ನಿಧ್ಯ ವಹಿಸಿದ್ದರು. ನಗರದ ವಿರಕ್ತ ಮಠದ ಶ್ರೀ ಚೆನ್ನಬಸವಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿದರು. ಇದೇ ವೇಳೆ ಅಂತರ್ಜಾತಿ ವಿವಾಹವಾಗಿರುವ ದಂಪತಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರೋತ್ಸಾಹ ಧನ ವಿತರಿಸಲಾಯಿತು.

ಎಸ್ಪಿ ಟಿ.ಪಿ. ಶಿವಕುಮಾರ್‌, ಜಿಪಂ ಸಿಇಒ ಕೆ.ಎಂ. ಗಾಯತ್ರಿ, ಎಡೀಸಿ ಎಸ್‌. ಕಾತ್ಯಾಯಿನಿದೇವಿ, ಎಎಸ್‌ಪಿ ಕೆ.ಎಸ್‌. ಸುಂದರ್‌ ರಾಜ್‌, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೆಶಕಿ ಭಾಗೀರಥಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೂ ಮೊದಲು ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಪ್ರತಿಮೆಗೆ ಗಣ್ಯರು ಮಾಲಾರ್ಪಣೆ ಮಾಡಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.