![2](https://www.udayavani.com/wp-content/uploads/2024/06/2-21-415x249.jpg)
Bandipur: ವಿದ್ಯುತ್ ಸ್ಪರ್ಶದಿಂದ ಹೆಣ್ಣು ಚಿರತೆ ಸಾವು
Team Udayavani, Jun 22, 2024, 6:03 PM IST
![Bandipur: ವಿದ್ಯುತ್ ಸ್ಪರ್ಶದಿಂದ ಹೆಣ್ಣು ಚಿರತೆ ಸಾವು](https://www.udayavani.com/wp-content/uploads/2024/06/Bandipur-620x397.jpg)
ಗುಂಡ್ಲುಪೇಟೆ(ಚಾಮರಾಜನಗರ): ವಿದ್ಯುತ್ ಸ್ಪರ್ಶದಿಂದ ಸುಮಾರು 2ರಿಂದ 3 ವರ್ಷದ ಹೆಣ್ಣು ಚಿರತೆಯೊಂದು ಮೃತಪಟ್ಟಿರುವ ಘಟನೆ ಬಂಡೀಪುರ ಅಭಯಾರಣ್ಯದ ಗುಂಡ್ಲುಪೇಟೆ ಬಫರ್ ಜೋನ್ ವ್ಯಾಪ್ತಿಯ ತಾಲೂಕಿನ ನೇನೆಕಟ್ಟೆ ಗ್ರಾಮದಲ್ಲಿ ಶನಿವಾರ ನಡೆದಿದೆ.
ತಾಲೂಕಿನ ನೇನೆಕಟ್ಟೆ ಗ್ರಾಮದ ರೈತರೊಬ್ಬರ ಜಮೀನಿನ ಬೇವಿನ ಮರದ ಮೇಲೆ ಚಿರತೆ ಏರಿದೆ. ನಂತರ ಕೆಳಗೆ ಇಳಿಯುವ ಬರದಲ್ಲಿ ಪಂಪ್ ಸೆಟ್ ಗೆ ಸಂಪರ್ಕ ಕಲ್ಪಿಸಿದ್ದ ವಿದ್ಯುತ್ ಲೈನ್ ಮೇಲೆ ಜಿಗಿದಿದೆ. ತಂತಿಯು ಮರದ ಮಧ್ಯಭಾಗದಲ್ಲಿ ಹಾದು ಹೋಗಿದ್ದ ಕಾರಣ ವಿದ್ಯುತ್ ಪ್ರವಹಿಸಿ ಚಿರತೆ ಸಾವನ್ನಪ್ಪಿದೆ ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಚಿರತೆ ಸಾವನ್ನಪ್ಪಿರುವ ಮಾಹಿತಿಯನ್ನು ಸ್ಥಳೀಯ ರೈತರು ಅರಣ್ಯಾಧಿಕಾರಿಗಳಿಗೆ ತಿಳಿಸಿದ ಕೂಡಲೇ ಉಪ ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಚಿರತೆ ಮೃತಪಟ್ಟಿರುವುದನ್ನು ಖಚಿತಪಡಿಸಿಕೊಂಡಿದ್ದಾರೆ.
ನಂತರ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ನಿರ್ದೇಶನದ ಮೇರೆಗೆ ಇಲಾಖೆ ಪಶು ವೈದ್ಯಾಧಿಕಾರಿ ಡಾ.ಮಿರ್ಜಾ ವಾಸೀಂ ಮರಣೋತ್ತರ ಶವ ಪರೀಕ್ಷೆ ನಡೆಸಿ, ಚಿರತೆ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವುದಾಗಿ ಖಚಿತ ಪಡಿಸಿದ್ದಾರೆ.
ತದ ನಂತರ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ನವದೆಹಲಿ ನೀಡಿರುವ ಮಾರ್ಗಸೂಚಿಗಳನ್ವಯ ಚಿರತೆಯ ಕಳೇಬರಹವನ್ನು ನಿಯಮಾನುಸಾರ ಅರಣ್ಯ ಪ್ರದೇಶದಲ್ಲಿ ಸುಡಲಾಗಿಯಿತು ಎಂದು ಬಂಡೀಪುರ ಹುಲಿ ಅರಣ್ಯಾಧಿಕಾರಿ ಎಸ್. ಪ್ರಭಾಕರನ್ ತಿಳಿಸಿದರು.
ಈ ಸಂದರ್ಭದಲ್ಲಿ ಗುಂಡ್ಲುಪೇಟೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ರವೀಂದ್ರ, ವಲಯ ಅರಣ್ಯಾಧಿಕಾರಿ ಮಲ್ಲೇಶ್, ವನ್ಯಜೀವಿ ಪರಿಪಾಲಕ ನಂಜುಂಡ ರಾಜೇಅರಸ್, ಉಪ ವಲಯ ಅರಣ್ಯಾಧಿಕಾರಿ ಜಿ.ಪಿ.ಭರತ್, ಗಸ್ತು ವನಪಾಲಕ ಪರಸಪ್ಪ ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಟಾಪ್ ನ್ಯೂಸ್
![2](https://www.udayavani.com/wp-content/uploads/2024/06/2-21-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![suicide (2)](https://www.udayavani.com/wp-content/uploads/2024/06/suicide-2-2-150x81.jpg)
kollegala; ಬೈಕ್ ಗೆ ಅಡ್ಡ ಬಂದ ನವಿಲು: ಸವಾರ ಸ್ಥಳದಲ್ಲೇ ಸಾವು
![1-wqeqwe](https://www.udayavani.com/wp-content/uploads/2024/06/1-wqeqwe-150x109.jpg)
Gundlupete: ಜನಸ್ಪಂದನಾ ಕಾರ್ಯಕ್ರಮ ಮುಗಿಸಿ ಬರುವಾಗ ಅಪಘಾತ: ಆಹಾರ ನಿರೀಕ್ಷಕ ಸಾವು
![Bandipur: ರಿಲ್ಯಾಕ್ಸ್ ಮೂಡ್ನಲ್ಲಿದ್ದ ವ್ಯಾಘ್ರನನ್ನೇ ಅಟ್ಟಾಡಿಸಿದ ಗಜರಾಜ…](https://www.udayavani.com/wp-content/uploads/2024/06/tiger-1-150x92.jpg)
Bandipur: ರಿಲ್ಯಾಕ್ಸ್ ಮೂಡ್ನಲ್ಲಿದ್ದ ವ್ಯಾಘ್ರನನ್ನೇ ಅಟ್ಟಾಡಿಸಿದ ಗಜರಾಜ…
![Road mishap: ಖಾಸಗಿ ಬಸ್ – ಗೂಡ್ಸ್ ವಾಹನದ ನಡುವೆ ಅಪಘಾತ: ಇಬ್ಬರಿಗೆ ಸಣ್ಣಪುಟ್ಟ ಗಾಯ](https://www.udayavani.com/wp-content/uploads/2024/06/bus-goods-150x89.jpg)
Road mishap: ಖಾಸಗಿ ಬಸ್ – ಗೂಡ್ಸ್ ವಾಹನದ ನಡುವೆ ಅಪಘಾತ: ಇಬ್ಬರಿಗೆ ಸಣ್ಣಪುಟ್ಟ ಗಾಯ
![Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಪೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ](https://www.udayavani.com/wp-content/uploads/2024/06/GUNDLUPET-150x100.jpg)
Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಫೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.