ಜನರು ದೂರು ನೀಡಿದರೆ ಬಾರ್‌ ಸ್ಥಳಾಂತರ: ಮಹೇಶ್‌


Team Udayavani, Feb 17, 2021, 2:03 PM IST

ಜನರು ದೂರು ನೀಡಿದರೆ ಬಾರ್‌ ಸ್ಥಳಾಂತರ: ಮಹೇಶ್‌

ಯಳಂದೂರು: ಪಟ್ಟಣದ ಬಳೇಪೇಟೆಯಲ್ಲಿರುವ ಬಾರ್‌ಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು ಸಾರ್ವಜನಿಕರು ದೂರು ನೀಡಿದರೆ ತೆರವುಗೊಳಿಸಲು ಕ್ರಮ ವಹಿಸಲಾಗುವುದು ಎಂದು ಶಾಸಕ ಎನ್‌. ಮಹೇಶ್‌ ತಿಳಿಸಿದರು.

ಪಟ್ಟಣದ 10 ನೇ ವಾರ್ಡ್‌ನಲ್ಲಿ ಜಾಂಡಿಸ್‌ ಹಾಗೂ ಟೈಫಾಯ್ಡ ಜ್ವರದಿಂದ ಮಕ್ಕಳು ಬಳಲುತ್ತಿರುವ ಹಿ‌ನ್ನೆಲೆಯಲ್ಲಿ ಇಲ್ಲಿಗೆ ಭೇಟಿ ನೀಡಿ ಸಾರ್ವಜನಿಕರ ದೂರು ಸ್ವೀಕರಿಸಿ ಮಾತನಾಡಿದರು.

ಬಳೇಪೇಟೆಯಲ್ಲಿ ಅಕ್ಕಪಕ್ಕದಲ್ಲೇ 2 ಬಾರ್‌ಗಳಿಗೆ ಇಲ್ಲಿ ರಾತ್ರಿ ವೇಳೆಯಲ್ಲಿ ಕುಡುಕರ ಹಾವಳಿ ಹೆಚ್ಚಾಗಿರುತ್ತದೆ. ಇಲ್ಲೇ ಮಲಮೂತ್ರ ವಿಸರ್ಜನೆ ಮಾಡುತ್ತಾರೆ. ಇದರಿಂದ ಅಕ್ಕಪಕ್ಕದಲ್ಲಿರುವಮನೆಗಳ ಹೆಂಗಸರು, ಮಕ್ಕಳಿಗೆ ಮುಜುಗರವಾಗುವುದರ ಜೊತೆಗೆ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ. ಹಾಗಾಗಿ ಇಲ್ಲಿರುವ ಬಾರ್‌ಗಳನ್ನು ಬೇರೆಡೆ ಸ್ಥಳಾಂತರಗೊಳಿಸಲು ಸಾರ್ವಜನಿಕರು ದೂರು ನೀಡಿದರೆ ಕ್ರಮ ವಹಿಸುತ್ತೇನೆ. ಅಲ್ಲಿಯವರೆಗೆ ಇಲ್ಲಿ ನಿತ್ಯ ಪೊಲೀಸ್‌ ಸಿಬ್ಬಂದಿ ನಿಯೋಜಿಸಿ ಕುಡುಕರ ಕಿರಿಕಿರಿಯನ್ನು ತಪ್ಪಿಸಬೇಕು ಎಂದು ಪೊಲೀಸರಿಗೆ ತಾಕೀತು ಮಾಡಿದರು.

ಪಟ್ಟಣದ ಹಳ್ಳದ ಬೀದಿಗೆ ರಸ್ತೆಯೇ ಇಲ್ಲ. ಇಲ್ಲಿಗೆ ಇದ್ದ ರಸ್ತೆಯನ್ನು ಒತ್ತುವರಿ ಮಾಡಲಾಗಿದೆ.ಇದನ್ನು ಪಟ್ಟಣ ಪಂಚಾಯಿತಿಯ ಈ ಹಿಂದಿನಅಧಿಕಾರಿಗಳು ಖಾತೆಯನ್ನು ಮಾಡಿಕೊಟ್ಟಿದ್ದಾರೆ. ನಮಗೆ ಇಲ್ಲಿ ಒಂದು ಆಟೋ ಬರಲೂ ಸಾಧ್ಯವಿಲ್ಲ. ಹಾಗಾಗಿ ಇಲ್ಲಿನ ರಸ್ತೆಯ ಜಾಗವನ್ನು ತೆರವುಗೊಳಿಸಿಕೊಡಬೇಕು. ಚರಂಡಿ ಹಾಗೂ ರಸ್ತೆನಿರ್ಮಿಸಿಕೊಡಬೇಕು. ಈ ಹಿಂದೆ ನೀವು ಇಲ್ಲಿಗೆಭೇಟಿ ನೀಡಿದ್ದ ಸಂದರ್ಭದಲ್ಲೂ ನಿಮಗೆ ಮನವರಿಕೆ ಮಾಡಿಕೊಡಲಾಗಿದ್ದು ಇದಕ್ಕೆ ಪರಿಹಾರಸಿಕ್ಕಿಲ್ಲ ಎಂದು ಇಲ್ಲಿನ ನಿವಾಸಿಗಳು ದೂರಿದರು.

ಇಲ್ಲಿನ ಮುಸ್ಲಿಂ ಬೀದಿ, ಜನತಾ ಕಾಲೋನಿ, ಪರಿಶಿಷ್ಟ ಜಾತಿಯ ಬೀದಿಗಳಿಗೆ ಶಾಸಕ ಭೇಟಿನೀಡಿದ್ದರು. ಈ ಸಂದರ್ಭದಲ್ಲಿ ಮುಖ್ಯಾಧಿಕಾರಿ ಎಂ.ಸಿ. ನಾಗರತ್ನ, ಇಲ್ಲಿನ ಕೆಲ ಭಾಗದಲ್ಲಿಕುಡಿಯುವ ನೀರಿನ ಪೈಪ್‌ ಒಡೆದಿತ್ತು. ಇದನ್ನುಫೆ.11ರಂದು ದುರಸ್ತಿ ಮಾಡಲಾಗಿದೆ. ಕುಡಿಯುವನೀರಿನ ಸ್ಯಾಂಪಲ್‌ಗ‌ಳನ್ನು ಲ್ಯಾಬ್‌ಗ ಕಳುಹಿಸಿದ್ದುಇದರ ವರದಿಯೂ ಕೂಡ ಪಾಸಿಟಿವ್‌ ಬಂದಿದೆ. ಹಾಗಾಗಿ ಈ ಸಮಸ್ಯೆ ನೀಗಿದೆ. ಇದರಿಂದ ಯಾವುದೇ ತೊಂದರೆಯಾಗಿಲ್ಲ ಎಂದರು.ಇಲ್ಲಿಗೆ ಸೆಸ್ಕ್ ಕಚೇರಿಯ ಮುಂಭಾಗದಲ್ಲಿನ ಶೌಚಗೃಹಗಳು ನಿರುಪಯುಕ್ತವಾಗಿದೆ. ಇದರ ಬಳಕೆಗೆ ಸಾರ್ವಜನಿಕರು ಮುಂದಾಗುತ್ತಿಲ್ಲ. ಅಲ್ಲದೆ ಇಲ್ಲಿರುವ ಪಟ್ಟಣ ಪಂಚಾಯ್ತಿಯ ಸ್ಥಳವನ್ನು ಮಾಂಸದ ಅಂಗಡಿಗಳನ್ನು ನಿರ್ಮಾಣ ಮಾಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ನಂತರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಜಾಂಡಿಸ್‌ನಿಂದ ಬಳಲುತ್ತಿದ್ದ ರೋಗಿಗಳ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಆರೊಗ್ಯಾಧಿಕಾರಿ ಮಹೇಶ್‌ಕುಮಾರ್‌, ಜೆಇ ನಾಗೇಂದ್ರ, ರಜಸ್ವ ನಿರೀಕ್ಷಕ ನಂಜುಂಡಶೆಟ್ಟಿ, ಪಿಎಸ್‌ಐ ಕರಿಬಸಪ್ಪ, ಪಪಂ ಸದಸ್ಯ ಬಿ. ರವಿ ಮುಖಂಡರಾದ ನಿಂಗರಾಜು, ಮಲ್ಲು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.