ಬಿಳಿಗಿರಿ ರಂಗನಾಥನ ದರ್ಶನಕ್ಕೆ ಭಕ್ತ ಸಾಗರ


Team Udayavani, Feb 6, 2022, 12:37 PM IST

ಬಿಳಿಗಿರಿ ರಂಗನಾಥನ ದರ್ಶನಕ್ಕೆ ಭಕ್ತ ಸಾಗರ

ಯಳಂದೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಸ್ಥಳವಾಗಿರುವ ಯಳಂದೂರು ತಾಲೂಕಿನ ಬಿಳಿಗಿರಿರಂಗಬೆಟ್ಟದ ಬಿಳಿಗಿರಿ ರಂಗನಾಥಸ್ವಾಮಿದೇಗುಲದಲ್ಲಿ ಫೆ.1ರಿಂದ ಪೂಜಾ ಕೈಂಕರ್ಯಗಳು ಮತ್ತೆ ಆರಂಭಗೊಂಡಿದೆ. ಇದಕ್ಕಾಗಿ ಚಾತಕಪಕ್ಷಿಗಳಂತೆ ಕಾದಿದ್ದ ಭಕ್ತರ ಸಂತಸ ಇಮ್ಮಡಿಗೊಂಡಿದೆ. ಶನಿವಾರ ವಾರದ ದಿನವಾಗಿದ್ದು ಭಕ್ತ ಸಾಗರವೇ ಹರಿದು ಬಂದಿದೆ.

ನೂರಾರು ವರ್ಷಗಳ ಇತಿಹಾಸ ಹೊಂದಿರುವ ದೇವಸ್ಥಾನ ಶಿಥಿಲಗೊಂಡಿರುವ ಕಾರಣ 2017ರ ಮಾರ್ಚ್‌ನಲ್ಲಿ ಪುರಾತತ್ವ ಇಲಾಖೆಯಿಂದ 2.40 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ಧಾರ ಕಾಮಗಾರಿ ಆರಂಭಿಸಲಾಗಿತ್ತು. ದೇಗುಲದ ಸಮೀಪದಲ್ಲಿ ಬಾಲಾಲಯ ಸ್ಥಾಪಿಸಿ ದರ್ಶನಕ್ಕೆ ಮಾತ್ರ ಸಿಮೀತಗೊಂಡಿತ್ತು. 20 ತಿಂಗಳ ಒಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂಬಷರತ್ತು ವಿಧಿಸಲಾಗಿತ್ತು. ಆದರೆ, ಕಾಮಗಾರಿ ಆಮೆಗತಿಯಲ್ಲಿ ಸಾಗಿ ಸುಮಾರು 4 ವರ್ಷ ಬಳಿಕ ಪೂರ್ಣಗೊಂಡಿತ್ತು. 2021ರ ಮಾ.29 ರಿಂದ ಏ.1ರ ವರೆಗಿನ, ಸತತ 5 ದಿನಗಳ ಕಾಲ ನಡೆದ ಈಧಾರ್ಮಿಕ ಕಾರ್ಯದಲ್ಲಿ ಹೋಮ, ಹವನ ಯಜ್ಞ ಯಾಗಾದಿಗಳು ನಡೆಯಿತು. ನಂತರ ಕೋವಿಡ್‌ 2ನೇ ಅಲೆ ಪ್ರಾರಂಭವಾಗಿ ಮುಗಿದ ನಂತರ ದೇಗುಲದಲ್ಲಿ ಮತ್ತೆ ದರ್ಶನಕ್ಕೆ ಮಾತ್ರ ಅವಕಾಶವನ್ನು ಕಲ್ಪಿಸಲಾಗಿತ್ತು. ದೇವಾಲಯ ಬಾಗಿಲು ತೆರೆದು ಹಲವು ತಿಂಗಳು ಕಳೆದಿದ್ದರೂ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ಮುಡಿಸೇವೆ, ಪ್ರಸಾದ, ನಾಮಕರಣ,

ಕುಂಕುಮಾರ್ಚನೆ, ತುಲಾಭಾರ, ಗರುಡೋತ್ಸವ, ಕಲ್ಯಾಣೋತ್ಸವ ಸೇರಿದಂತೆ ಇತರೆ ಸೇವೆಗಳು ಹರಕೆ ದೊರೆಯುತ್ತಿಲ್ಲ, ಇದರಿಂದ ದೂರದ ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ ಸೇರಿದಂತೆ ಹೊರ ರಾಜ್ಯಗಳಲ್ಲೂ ಇರುವ ರಂಗಪ್ಪನ ಭಕ್ತರಿಗೆ ನಿರಾಸೆಗೊಂಡಿದ್ದರು. ನಂತರ ಜಿಲ್ಲಾಧಿಕಾರಿಆದೇಶದ ಹಿನ್ನೆಲೆಯಲ್ಲಿ ನವೆಂಬರ್‌ನಿಂದ ಭಕ್ತಾರಿಗೆ ಪೂಜಾ ಕೈಂಕರ್ಯಗಳ ಸೇವೆಗಳಿಗೆ ಅನುಮತಿ ನೀಡಲಾಗಿತ್ತು. ಈ ನಡುವೆ ಮತ್ತೆ ಕೋವಿಡ್‌ 3ನೇ ಅಲೆ ಬಂದ ಹಿನ್ನೆಲೆಯಲ್ಲಿ ಕೇವಲ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಈಗ ಮತ್ತೆ ಫೆ.1 ರಿಂದ ಎಲ್ಲಾ ಸೇವೆಗಳು ಆರಂಭಗೊಂಡಿದ್ದು, ದಾಸೋಹವೂ ತೆರೆದಿದ್ದು ನಿತ್ಯ ಪ್ರಸಾದ ವಿನಿಯೋಗಕ್ಕೆ ವ್ಯವಸ್ಥೆ ಮಾಡಲಾಗಿದೆ.

ಯಾವ ಸೇವೆಗಳು ಆರಂಭ: ದೊಡ್ಡ ಗರುಡೋತ್ಸವ, ಬೆಳ್ಳಿ ಗರುಡೋತ್ಸವ, ಕೈ ಗರುಡೋತ್ಸವ, ತುಳಸಿ ಕುಂಕುಮ ಸಹಸ್ರನಾಮ, ಅಷ್ಟೋತ್ತರ, ಗಜಲಕ್ಷ್ಮೀ ಅಮ್ಮನವರ ಉತ್ಸವ, ಆನೆವಾಹನ, ರಂಗ ಮಂಟಪೋತ್ಸವ, ರಾಸ ಕ್ರಿಡೋತ್ಸವ, ಬೃಂದಾವನೋತ್ಸವ, ಸಿಂಹವಾಹನ, ಹಂಸ ವಾಹನ, ಕುದುರೆ ವಾಹನ, ಶೇಷಾ ವಾಹನ,ಸೂರ್ಯ ಮಂಟಪೋತ್ಸವ, ಕನಕ ಪಲ್ಲಿಕ್ಕಿ ಉತ್ಸವ, ಹನುಮಂತ ವಾಹನ, ಕಲ್ಯಾಣೋತ್ಸವ,ಪಂಚಾಮೃತ ಅಭಿಷೇಕ, ಸೇರಿದಂತೆ ಇತರೇ ಸೇವೆ ಕಾರ್ಯಗಳ ಪ್ರಾರಂಭವಾಗಿದೆ.

ಕೋವಿಡ್‌ 3ನೇ ಅಲೆ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಪೂಜಾ ಕೈಂಕರ್ಯ ಗಳು ಫೆ.1ರಿಂದ ಮತ್ತೆ ಆರಂಭಗೊಂಡಿದೆ. ಕೋವಿಡ್‌ ನಿಯಮಗಳ ಪ್ರಕಾರ ವಿವಿಧಸೇವೆಗಳನ್ನು ಮತ್ತೆ ಆರಂಭಿಸಲಾಗಿದ್ದು, ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಮೋಹನ್‌ ಕುಮಾರ್‌, ದೇಗುಲ ಕಾರ್ಯನಿರ್ವಾಹಕ ಅಧಿಕಾರಿ

 

ಫೈರೋಜ್‌ ಖಾನ್‌

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asasa

KSRTC; ಸ್ಟೇರಿಂಗ್ ರಾಡ್ ತುಂಡಾಗಿ ಹಳ್ಳಕ್ಕೆ ನುಗ್ಗಿದ ಬಸ್: ಹಲವರಿಗೆ ಗಾಯ

2-gundlupete

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Chamarajanagar: DRFO arrested by Lokayukta while taking bribe

Chamarajanagara: ಲಂಚ ಪಡೆಯುತ್ತಿದ್ದ ಡಿಆರ್‌ಎಫ್‌ಒ ಲೋಕಾಯುಕ್ತ ಬಲೆಗೆ

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.