ಕಾಲೇಜು ಮೈದಾನದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಬ್ರೇಕ್‌


Team Udayavani, Oct 24, 2019, 3:00 AM IST

collej-maid

ಕೊಳ್ಳೇಗಾಲ: ಪಟ್ಟಣದ ಹೃದಯ ಭಾಗದಲ್ಲಿರುವ ಹೆಸರುವಾಸಿಯಾದ ಸರ್ಕಾರಿ ಎಂಜಿಎಸ್‌ವಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ವಿವಿಧ ಪ್ರಗತಿಪರ ಸಂಘಟನೆ ಅನೇಕ ಖಾಸಗಿ ಕಾರ್ಯಕ್ರಮಗಳ ಆಯೋಜನೆಯಿಂದಾಗಿ ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಕುಂಠಿತವಾಗುವ ಹಿನ್ನೆಲೆಯಲ್ಲಿ ಸರ್ಕಾರ ಕಾಲೇಜು ಮೈದಾನದಲ್ಲಿ ಯಾವುದೇ ತರಹದ ಖಾಸಗಿ ಕಾರ್ಯಕ್ರಮ ನಿರ್ಬಂಧ ಹೇರಿದ್ದು, ಎಲ್ಲಾ ಕಾರ್ಯಕ್ರಮಗಳಿಗೆ ಬ್ರೇಕ್‌ ಬಿದ್ದಿದೆ.

ಪಟ್ಟಣದ ಮುಡಿಗುಂಡ ಬಡಾವಣೆಯ ಮುಡಿಗುಂಡ ಸುಬ್ಬಪ್ಪ ವೀರಪ್ಪ ಗುರುಕಾರ್‌ರವರು ಸರ್ಕಾರಿ ಕಾಲೇಜು ತೆರೆಯಲು ಬೃಹತ್ತಾದ ಜಮೀನೊಂದನ್ನು ದಾನವಾಗಿ ಅಂದಿನ ತಮಿಳುನಾಡಿನ ಸರ್ಕಾರಕ್ಕೆ ನೀಡಿದ್ದರು. 1953ರಲ್ಲಿ ಕಾಲೇಜು ಕಟ್ಟಡ ನಿರ್ಮಾಣ ಮಾಡಲಾಗಿತ್ತು.

ಖಾಸಗಿ ಕಾರ್ಯಕ್ರಮಕ್ಕೆ ಬ್ರೇಕ್‌: ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಕಾಲೇಜಿನ ಹೊರ ವಲಯದ ಮೈದಾನದಲ್ಲಿ ಯಾವುದೇ ಆಡಚಣೆಗಳಾಗದಂತೆ ನಿಶ್ಯಬ್ದವಾಗಿದ್ದ ವೇಳೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಗತಿಯಲ್ಲಿ ತೊಡಗಲು ಉತ್ಸಾಹ ಹೆಚ್ಚಾಗಿರುತ್ತದೆ.

ಇಂಥ ವೇಳೆ ಖಾಸಗಿ ವ್ಯಕ್ತಿಗಳು ಕಾಲೇಜು ಮೈದಾನದಲ್ಲಿ ವ್ಯಾಪಾರ ಮಳಿಗೆ, ವಸ್ತು ಪ್ರದರ್ಶನ ಮತ್ತು ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರಿಂದ ಧ್ವನಿವರ್ಧಕ ಶಬ್ದದಿಂದ ವಿದ್ಯಾರ್ಥಿಗಳ ಗಮನ ಸಂಪೂರ್ಣ ಕಾರ್ಯಕ್ರಮದ ಮೇಲೆ ನಾಟುವುದ ಮನಗಂಡ ಸರ್ಕಾರ ಇಂಥ ಖಾಸಗಿ ಕಾರ್ಯಕ್ರಮಕ್ಕೆ ಮೈದಾನ ನಿರ್ಬಂಧ ಮಾಡುವುದರಿಂದ ಶೈಕ್ಷಣಿಕ ಪ್ರಗತಿ ಮತ್ತಷ್ಟು ಹೆಚ್ಚಾಗಲಿದೆ ಎಂದು ಕಾರ್ಯಕ್ರಮಗಳಿಗೆ ಬ್ರೇಕ್‌ ವೊಡ್ಡಿದೆ.

ಸ್ವಚ್ಛತೆ ಮರೀಚಿಕೆ: ಇತ್ತೀಚಿನ ದಿನಗಳಲ್ಲಿ ಖಾಸಗಿ ಸಂಘ ಸಂಸ್ಥೆಯವರಿಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆಗೆ ಮೈದಾನದ ಅವಕಾಶ ನೀಡುತ್ತಿದ್ದ ವೇಳೆ ಖಾಸಗಿ ವ್ಯಕ್ತಿಗಳು ಕಾರ್ಯಕ್ರಮ ನಡೆಸಿ, ಬಳಿಕ ಬಂದಿದ್ದ ಸಾರ್ವಜನಿಕರಿಗೆ ಊಟ, ಉಪಚಾರ ಮತ್ತು ಇನ್ನಿತರ ಲಘು ಉಪಾಹಾರಗಳನ್ನು ಸೇವನೆ ಮಾಡಿ ನಂತರ ಪೇಪರ್‌ ತಟ್ಟೆ ಇನ್ನಿತರ ಎಲೆಗಳನ್ನು ಮೈದಾನದಲ್ಲಿ ಬಿಸಾಡುವುದರಿಂದ ಮೈದಾನದಲ್ಲಿ ಸ್ವಚ್ಛತೆ ಮರೀಚಿಕೆಯಾಗಿತ್ತು.

ಕ್ಲಾಸ್‌ಗೆ ಚಕ್ಕರ್‌, ಕಾರ್ಯಕ್ರಮಕ್ಕೆ ಹಾಜರ್‌: ಮೈದಾನದಲ್ಲಿ ವಿವಿಧ ಸಾಂಸ್ಕೃತಿಕ ಮತ್ತು ಇನ್ನಿತರ ಕಾರ್ಯಕ್ರಮಗಳು ಆಯೋಜನೆ ಗೊಂಡ ವೇಳೆ ಕಾಲೇಜು ವಿದ್ಯಾರ್ಥಿಗಳು ಶೌಚಾಲಯಕ್ಕೆಂದು ತರಗತಿಯಿಂದ ಹೊರ ನಡೆದು ಕಾರ್ಯಕ್ರಮದಲ್ಲಿ ಪಾಲ್ಗೊಂಡು, ತರಗತಿಗೆ ಗೈರು ಆಗುವುದರಿಂದ ಶೈಕ್ಷಣಿಕ ಪ್ರಗತಿಗೆ ಮತ್ತಷ್ಟು ಕಂಠಕ ಏರ್ಪಡುತ್ತಿತ್ತು.

ಶೌಚಾಲಯ ಅಪೂರ್ಣ: ಸರ್ಕಾರ ಸುಮಾರು 17.90 ಲಕ್ಷ ರೂ. ಅಂದಾಜಿನಲ್ಲಿ ಶೌಚಾಲಯ ನಿರ್ಮಾಣ ಮಾಡಲು ಜಿಲ್ಲಾ ಪಂಚಾಯಿತಿ ಎಂಜಿನಿಯರ್‌ ವಿಭಾಗಕ್ಕೆ ಸೂಚನೆ ನೀಡಿತ್ತು. ಆದರೆ ಅಧಿಕಾರಿಗಳು ಕಾಮಗಾರಿಯನ್ನು ಅಪೂರ್ಣ ಮಾಡಿರುವುದರಿಂದ ಬಯಲು ಶೌಚಾಲಯಕ್ಕೆಂದು ಹೊರ ನಡೆಯುವ ವಿದ್ಯಾರ್ಥಿಗಳು ತರಗತಿಗಳಿಗೆ ಚಕ್ಕರ್‌ ಹಾಕುತ್ತಿರುವುದು ಪ್ರಾಂಶುಪಾಲರಿಗೆ ತಲೆನೋವಾಗಿ ಪರಿಣಮಿಸಿದೆ.

ಪಟ್ಟಣದ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಕಾಲೇಜು ಸ್ಥಳವನ್ನು ಲಪಟಾಯಿಸುವ ನೆಪದಲ್ಲಿ ತೊಡಗಿದ್ದ ವೇಳೆ ಸಂಬಂಧಪಟ್ಟ ಮೇಲಧಿಕಾರಿಗಳ ಗಮನ ಸೆಳೆದು ತೆರವು ಮಾಡುವ ಪ್ರಯತ್ನದಲ್ಲಿ ಪಟ್ಟಭದ್ರ ಹಿತಾಸಕ್ತಿಗಳು ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯದಲ್ಲಿ ಅವರಿಗೆ ಹಿನ್ನಡೆಯಾಗಿದೆ. ಅವರು ವಶಪಡಿಸಿಕೊಳ್ಳಲು ಯತ್ನಿಸಿದ ಸ್ಥಳ ಬಯಲಾಗಿ ರುವುದರಿಂದ ಕಾಲೇಜಿಗೆ ಏಕಾಏಕಿ ರಾಸುಗಳು, ನಾಯಿಗಳು ಮತ್ತು ಇನ್ನಿತರ ಸಾರ್ವಜನಿಕರು ನುಗ್ಗುವಂತಾಗಿದ್ದು, ಕೂಡಲೇ ಕ್ಷೇತ್ರದ ಶಾಸಕ ಎನ್‌.ಮಹೇಶ್‌ ಗಮನ ಸೆಳೆದು ತಂತಿ ಬೇಲಿ ಕಲ್ಪಿಸುವ ಮೂಲಕ ಕಾಲೇಜು ಮೈದಾನಕ್ಕೆ ಬರುವ ಅಡತಡೆಗಳಿಗೆ ನಿರ್ಬಂಧ ಹಾಕಲಾಗುವುದು.
-ಎಸ್‌.ಪ್ರಮೋದ್‌, ಪ್ರಾಂಶುಪಾಲ

* ಡಿ.ನಟರಾಜು

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.