Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Team Udayavani, Apr 25, 2024, 11:21 AM IST
ಚಾಮರಾಜನಗರ: ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ. ಆರ್. ಕೃಷ್ಣಮೂರ್ತಿ ಅವರು ಪ್ರಯಾಣಿಸುತ್ತಿದ್ದ ಕಾರು ಟೈರ್ ಸಿಡಿದು ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ಶಾಸಕ ಎ ಆರ್ ಕೃಷ್ಣಮೂರ್ತಿ, ಅವರ ಆಪ್ತ ಸಹಾಯಕ ಚೇತನ್ ಹಾಗೂ ಚಾಲಕ ಸತೀಶ್ ಕಾರಿನಲ್ಲಿದ್ದರು. ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯವಾಗಿಲ್ಲ.
ಎ ಅರ್ ಕೆ ಅವರು ಬುಧವಾರ ರಾತ್ರಿ ಕೊಳ್ಳೇಗಾಲದಿಂದ ಮೈಸೂರಿಗೆ ತಿ. ನರಸೀಪುರ ಮಾರ್ಗ ತೆರಳುತ್ತಿದ್ದರು. ನಾಡನಹಳ್ಳಿ ಬಳಿ ಕಾರಿನ ಟೈರ್ ಸಿಡಿದಿದೆ. ಆಗ ಕಾರು ಅಡ್ಡಾದಿಡ್ಡಿ ಚಲಿಸಿ ರಸ್ತೆ ಬದಿಯ ಹಳ್ಳಕ್ಕೆ ನುಗ್ಗಿದೆ. ರಸ್ತೆ ಬದಿ ಸಣ್ಣ ಬಂಡೆಗಳಿದ್ದುದರಿಂದ ಕಾರು ಉರುಳಿ ಬೀಳದಂತೆ ರಕ್ಷಿಸಿದೆ.
ಕಾರು ಎ ಆರ್ ಕೆ ಅವರ ಪುತ್ರನ ಗೆಳೆಯನದ್ದಾಗಿದ್ದು, ಹಿಂದೆ ಎ ಆರ್ ಕೆ ಅವರ ಕಾರು ಬರುತ್ತಿತ್ತು. ಆ ಕಾರಿನಲ್ಲಿ ಮೈಸೂರಿನ ಮನೆಗೆ ತಲುಪಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿದ ಶಾಸಕ ಎ ಆರ್ ಕೃಷ್ಣಮೂರ್ತಿ ಅವರು, ದೇವರ ದಯೆಯಿಂದ ಅಪಾಯದಿಂದ ಪಾರಾಗಿದ್ದೇವೆ. ನಾವೆಲ್ಲರೂ ಸುರಕ್ಷಿತವಾಗಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.