Chamarajanagar: ತೇಗದ ಮರ ಕಡಿಯಲು ಅಡ್ಡಿ; ಪ್ರತಿಭಟನೆ


Team Udayavani, Nov 11, 2023, 10:41 AM IST

Chamarajanagar: ತೇಗದ ಮರ ಕಡಿಯಲು ಅಡ್ಡಿ; ಪ್ರತಿಭಟನೆ

ಚಾಮರಾಜನಗರ: ರೈತರು ತಮ್ಮ ಜಮೀನಿನಲ್ಲಿ ಬೆಳೆದ ತೇಗದ ಮರಗಳನ್ನು ಕಟಾವು ಮಾಡಲು ಅರಣ್ಯ ಇಲಾಖೆ ಅಧಿಕಾರಿಗಳು ತೊಂದರೆ ನೀಡುತ್ತಿದ್ದಾರೆ ಎಂದುಆರೋಪಿಸಿ ಜಿಲ್ಲಾ ರೈತಸಂಘದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಸುಲ್ತಾನ್‌ ಷರೀಫ್ ವೃತ್ತದಲ್ಲಿರುವ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಮುಂಭಾಗ ಧರಣಿ ನಡೆಸಲಾಯಿತು. ಈ ವೇಳೆ ಪ್ರತಿಭಟನಾಕಾರರು, ನಮ್ಮ ಮರ ನಮ್ಮ ಹಕ್ಕು, ನಮ್ಮ ಜಮೀನಿನಲ್ಲಿರುವ ಮರ ಕಡಿಯಲು ಅವಕಾಶ ನೀಡದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಧಿಕ್ಕಾರ ಎಂಬಿತ್ಯಾದಿ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.

ಈ ವೇಳೆ ರೈತಸಂಘದ ರಾಜ್ಯ ಕಾರ್ಯದರ್ಶಿ ಡಾ. ಗುರುಪ್ರಸಾದ್‌ ಮಾತನಾಡಿ, ರೈತರು ತಮ್ಮ ಜಮೀನಿನಲ್ಲಿ ಬೆಳೆದ ತೇಗದ ಮರಗಳನ್ನು ಕಟಾವು ಮಾಡಲು ಅನುಮತಿ ನೀಡುವಂತೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಾರೆ. ತೇಗದ ಮರವನ್ನು ತಮ್ಮ ಸ್ವಂತ ಬಳಕೆಗೆ, ಮನೆ ಕಟ್ಟಲು ಬಳಸುವ ಸಲುವಾಗಿ ಕಟಾವು ಲೈಸೆನ್ಸ್‌ಗಾಗಿ ಅರ್ಜಿ ಸಲ್ಲಿಸಿದರೆ 2-3 ವರ್ಷ ಕಾದರೂ ಲೈಸೆನ್ಸ್‌ ನೀಡುವುದಿಲ್ಲ. ರೈತರು ತಮ್ಮ ಮರ ಕಡಿಯಲು ಅರಣ್ಯ ಇಲಾಖೆ ಕಚೇರಿಗೆ ವರ್ಷಗಟ್ಟಲೆ ಅಲೆಯಬೇಕಾಗಿದೆ. ನಮ್ಮ ಜಮೀನಲ್ಲಿರುವ ತೇಗದ ಮರಗಳನ್ನು ಕಟಾವು ಮಾಡಲು ಕಟ್ಟಿಂಗ್‌ ಆರ್ಡರ್‌, ಟ್ರಾನ್ಸ್‌ಪೋರ್ಟ್‌ ಆರ್ಡರ್‌ ಎಂದು ಇಲ್ಲ ಸಲ್ಲದ ಕಾನೂನುಗಳನ್ನು ನಮ್ಮ ಜಿಲ್ಲೆಯಲ್ಲಿ ಮಾತ್ರ ಹೇರುತ್ತಿದ್ದಾರೆ. ರೈತರು ತಮ್ಮ ಜಮೀನುಗಳಲ್ಲಿ ನ್ಯಾಯಯುತವಾಗಿ ಬೆಳೆದ ಮರಗಳನ್ನು ಕಡಿಯಲು ಅವಕಾಶ ನೀಡುತ್ತಿಲ್ಲ. ಈ ವಿಳಂಬ ನೀತಿಯಿಂದಾಗಿ ರೈತರು ರೋಸಿ ಹೋಗಿದ್ದಾರೆ. ಆದ್ದರಿಂದ ಅಧಿಕಾರಿಗಳು ತಕ್ಷಣವೇ ಇದೆಲ್ಲವನ್ನು ನಿಲ್ಲಿಸಿ ಮರಗಳನ್ನು ಕಟಾವು ಮಾಡಿ, ಬಳಕೆ ಮಾಡಲು ಅವಕಾಶ ಕಲ್ಪಿಸಿಕೊಡಬೇಕು. ಇಲ್ಲವೇ ಈ ವಿಷಯವಾಗಿ ನಾವು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತೇವೆ ಎಂದು ಎಚ್ಚರಿಸಿದರು.

ಕಾಡು ಪ್ರಾಣಿಗಳ ಹಾವಳಿಯು ಹೆಚ್ಚಾಗಿದ್ದು, ಬೆಳೆ ನಷ್ಟವನ್ನು ಸಹ ನೀಡುತ್ತಿಲ್ಲ. ಅಲ್ಲದೇ ಇತ್ತೀಚಿನ ದಿನಗಳಲ್ಲಿ ಹುಲಿ- ಚಿರತೆಗಳ ದಾಳಿಯೂ ಸಹ ನಡೆಯುತ್ತಿದ್ದು, ಇದರ ಬಗ್ಗೆ ಮಾಹಿತಿ ನೀಡಿದರೂ ಸಹ ಸ್ಥಳಕ್ಕೆ ಅರಣ್ಯ ಇಲಾಖೆಯವರು ಬಂದು ಪರಿಶೀಲನೆ ನಡೆಸಿ, ಬೋನ್‌ ಇಡಲು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ದೂರಿದರು.

ಸಾಮಿಲ್‌ಗ‌ಳಿಗಾಗಿ ರೈತರಿಂದ ಕಡಿಮೆ ಬೆಲೆಗೆ ಖರೀದಿ ಮಾಡುವ ಮಾರಾಟಗಾರರು ಅರಣ್ಯ ಇಲಾಖಾಧಿಕಾರಿಗಳಿಗೆ ಲಂಚ ನೀಡಿ ರಾತ್ರೋರಾತ್ರಿ ಮರ ಕಡಿದು ಸಾಮಿಲ್‌ ಗಳಿಗೆ ಸಾಗಿಸುತ್ತಾರೆ. ಅರಣ್ಯ ಇಲಾಖೆಯ ನಾನಾ ಕಾನೂನುಗಳಿಗೆ ಹೆದರಿ ಕೆಲವು ರೈತರು ಮಾರಾಟಗಾರರಿಗೆ ಮರ ಕೊಟ್ಟುಬಿಡುತ್ತಾರೆ. ಇವರು ಎಲ್ಲಾ ಸಾಮಿಲ್‌ಗ‌ಳಲ್ಲೂ ಸಿಸಿ ಟಿವಿ ಅಳವಡಿಸಿ ಪರಿಶೀಲನೆ ಮಾಡುತ್ತೀದ್ದೇವೆ ಎಂಬುವುದು ಶುದ್ಧ ಸುಳ್ಳು ಎಂದು ಆರೋಪಿಸಿದರು.

ರೈತಸಂಘದ ಜಿಲ್ಲಾಧ್ಯಕ್ಷ ಮಾಡ್ರಹಳ್ಳಿ ಮಹದೇವಪ್ಪ, ಮುಖಂಡರಾದ ಮಹೇಶ್‌, ಗುರು, ಷಣ್ಮುಖಸ್ವಾಮಿ, ಮಣಿ, ಶ್ರೀನಿವಾಸ್‌, ರಘು, ಬಸವರಾಜು ಇದ್ದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.