ಚಾಮರಾಜನಗರ:ಫ‌ಲಪುಷ್ಪ ಪ್ರದರ್ಶನಕ್ಕೆ ಸೋಮಣ್ಣ ಚಾಲನೆ

ಹಿರಿಕೆರೆ ತುಂಬಿದರೆ ಸುತ್ತಮುತ್ತಲಿನ ಎಲ್ಲಾ ಕೆರೆಗಳು ತುಂಬಲಿವೆ

Team Udayavani, Sep 29, 2022, 6:26 PM IST

ಚಾಮರಾಜನಗರ:ಫ‌ಲಪುಷ್ಪ ಪ್ರದರ್ಶನಕ್ಕೆ ಸೋಮಣ್ಣ ಚಾಲನೆ

ಚಾಮರಾಜನಗರ: ಚಾಮರಾಜನಗರ ದಸರಾ ಮಹೋತ್ಸವದ ಅಂಗವಾಗಿ ನಗರದ ಜಿಲ್ಲಾಡಳಿತ ಭವನದ ಅವರಣದಲ್ಲಿ ಆಯೋಜಿಸಿರುವ ಮೂರು ದಿನಗಳ ಫ‌ಲಪುಷ್ಪ ಪ್ರದರ್ಶನ ಹಾಗೂ ವಿವಿಧ ಇಲಾಖೆಗಳ ಮಳಿಗೆಗೆಳ ಪ್ರದರ್ಶನಕ್ಕೆ ವಸತಿ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಬುಧವಾರ ಚಾಲನೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ತೋಟಗಾರಿಕೆ ಇಲಾಖೆ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾಗಿರುವ ಫ‌ಲಪುಷ್ಪ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯ ಬೆಳವಣಿಗೆ ದೃಷ್ಟಿಯಿಂದ ಫ‌ಲಪುಷ್ಪ ಪ್ರದರ್ಶನ ಆಯೋಜನೆ ಅಗತ್ಯವಿದೆ. ಇನ್ನೂ ವಿಸ್ತಾರವಾದ ಜಾಗದಲ್ಲಿ ಪ್ರದರ್ಶನ ಏರ್ಪಡಿಸಿ ಜನಾಕರ್ಷಣೆ ಮಾಡಬೇಕು ಎಂದರು.

ಹಂತಹಂತವಾಗಿ ಬೆಳವಣಿಗೆ: ಫ‌ಲಪುಷ್ಪ ಪ್ರದರ್ಶನಕ್ಕೆ ಇತಿಹಾಸವಿದೆ. ಫ‌ಲಪುಷ್ಪ ಪ್ರದರ್ಶನವನ್ನು ಹೆಚ್ಚಿನ ಜನರು ವೀಕ್ಷಿಸುವಂತಿರಬೇಕು. ಮುಂದಿನ ದಿನಗಳಲ್ಲಿ ಇನ್ನೂ ಉತ್ತಮವಾಗಿ ಫ‌ಲಪುಷ್ಪ ಪ್ರದರ್ಶನ ಕಾರ್ಯ ಕ್ರಮ ಏರ್ಪಡಿಸಿ ಚಾಮರಾಜನಗರ ಜಿಲ್ಲೆಯ ತೋಟಗಾರಿಕಾ ಕ್ಷೇತ್ರದಲ್ಲಿ ಹೆಸರು ಗಳಿಸಬೇಕು. ಜಿಲ್ಲೆ ಅಭಿವೃದ್ಧಿಯತ್ತ ಸಾಗಲು ಹಂತಹಂತವಾಗಿ ಬೆಳವಣಿಗೆ ಯಾಗಬೇಕಿದೆ ಎಂದು ಸಚಿವರು ತಿಳಿಸಿದರು.

ಈ ಬಾರಿ ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯಾಗಿರುವುದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ರೈತರು ಇದರಿಂದ ಎದೆಗುಂದ ಬೇಕಾಗಿಲ್ಲ ಸರ್ಕಾರ ರೈತರ ಪರವಾಗಿದೆ. ರೈತರಿಗೆ ಆಗಿರುವ ನಷ್ಟವನ್ನು ಭರಿಸಲು ಸರ್ಕಾರ ನೇರವಾಗಿ ರೈತರ ಖಾತೆಗೆ ಹಣ ಜಮೆ ಮಾಡುತ್ತಿದೆ ಎಂದು ತಿಳಿಸಿದರು. ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ಚಾಮರಾಜನಗರ ಜಿಲ್ಲೆಯಾಗಿ 25 ವರ್ಷಗಳನ್ನು ಪೂರೈಸಿದೆ. ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಬೇಕಾಗಿದೆ. ವಿವಿಧತೆಯಲ್ಲಿ ಏಕತೆಯನ್ನು ಚಾಮ ರಾಜನಗರ ಹೊಂದಿದೆ.

ಹಾಗೆಯೇ ಜಿಲ್ಲೆಯಲ್ಲಿ ವಿವಿಧ ತೋಟಗಾರಿಕಾ ಬೆಳೆಗಳನ್ನು ಬೆಳೆಯಲಾಗುತ್ತಿದೆ ಎಂದರು. ಎಲ್ಲೆಡೆ ಅಂತರ್ಜಲ ವೃದ್ಧಿ: ಜಿಲ್ಲೆಯಲ್ಲಿ ಈ ಬಾರಿ ಮಳೆ, ಕೆರೆಗಳು ತುಂಬಿದ ಪರಿಣಾಮ ಎಲ್ಲೆಡೆ ಅಂತ ರ್ಜಲ ವೃದ್ಧಿಯಾಗಿದೆ. ಚಾಮರಾಜನಗರ ಸಮೃದ್ಧಿ ಯತ್ತ ಸಾಗಲಿದೆ. ಸರ್ಕಾರ ಹನಿ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ರೈತರ ಹಿತಕ್ಕಾಗಿ ಹಿರಿಕೆರೆಯನ್ನು ತುಂಬಿಸಬೇಕು. ಹಿರಿಕೆರೆ ತುಂಬಿದರೆ ಸುತ್ತಮುತ್ತಲಿನ ಎಲ್ಲಾ ಕೆರೆಗಳು ತುಂಬಲಿವೆ. ಇದರಿಂದ ರೈತರಿಗೆ
ಅನುಕೂಲವಾಗಲಿದೆ ಎಂದು ತಿಳಿಸಿದರು.

ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜಿ. ನಿಜಗುಣರಾಜು, ನಗರಸಭೆ ಅಧ್ಯಕ್ಷೆ ಸಿ.ಎಂ. ಆಶಾ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಕೇಂದ್ರ ಪರಿಹಾರ ಸಮಿತಿಯ ಮಾಜಿ ಅಧ್ಯಕ್ಷ ಎಂ. ರಾಮಚಂದ್ರ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶಿವಕುಮಾರ್‌, ಮಾಜಿ ಸದಸ್ಯರಾದ ಬಾಲರಾಜು, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಿವಪ್ರಸಾದ್‌, ಇತರರು ಕಾರ್ಯಕ್ರಮದಲ್ಲಿ ಇದ್ದರು.

ಕಾರ್ಯಕ್ರಮಕ್ಕೂ ಮೊದಲು ಪುಷ್ಪಗಳಿಂದ ಅಲಂಕೃತಗೊಳಿ ಸಲಾಗಿರುವ ವಿವಿಧ ಕಲಾಕೃತಿಗಳನ್ನು ಉಸ್ತುವಾರಿ ಸಚಿವರು ವೀಕ್ಷಿಸಿದರು. ವಿವಿಧ ಇಲಾಖೆ ಗಳ ನೆರವಿನಡಿ ಮಹಿಳಾ ಸ್ವ ಸಹಾಯ ಸಂಘಗಳು ತಯಾರಿಸಿದ ಉತ್ಪನ್ನಗಳ ಮಾರಾಟ ಪ್ರದರ್ಶನ, ಕೈಮಗ್ಗ, ಜವಳಿಯಿಂದ ಉತ್ಪಾದಿಸಿದ ವಸ್ತು ಗಳನ್ನು ವೀಕ್ಷಣೆ ಮಾಡಿದರು. ಕೃಷಿ, ಮೀನುಗಾರಿಕೆ, ಸೇರಿದಂತೆ ವಿವಿಧ ಇಲಾಖೆಗಳು ತೆರೆದಿರುವ ಮಾಹಿತಿ ಮಳಿಗೆಗಳನ್ನು ಸಚಿವರು ವೀಕ್ಷಿಸಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.