Chamarajanagar: ವನ್ಯಜೀವಿಗಳ ಕೆಣಕಿ ಪ್ರಾಣಕ್ಕೆ ಸಂಚಕಾರ ತಂದು ಕೊಳ್ಳಬೇಡಿ


Team Udayavani, Feb 6, 2024, 4:44 PM IST

13

ಚಾಮರಾಜನಗರ: ಅರಣ್ಯದೊಳಗೆ ಹಾದು ಹೋ ಗುವ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರು ಸುಮ್ಮನೆ ಹೋಗದೇ ಹಾದಿಯಲ್ಲಿ ಇಳಿದು ಆನೆಗಳು ಕೆರಳುವಂತೆ, ಕೂಗುವುದು, ಸೆಲ್ಫಿ, ರೀಲ್ಸ್‌ ಮಾಡಲು ಯತ್ನಿಸುವುದರಿಂದ ಆನೆಗಳು ಅಟ್ಟಿಸಿಕೊಂಡು ಜೀವಕ್ಕೇ ಸಂಚಕಾರ ತಂದುಕೊಳ್ಳುವ ಪ್ರಕರಣಗಳು ನಡೆಯುತ್ತಿವೆ. ಅರಣ್ಯ ಇಲಾಖೆ ಇದರ ಬಗ್ಗೆ ಎಚ್ಚರಿಕೆ ನೀಡಿದ್ದರೂ, ಜನರ ಕುಚೇಷ್ಟೆಗಳಿಂತ ಇಂಥ ಪ್ರಕರಣಗಳು ನಡೆಯುತ್ತಿವೆ.

ಇತ್ತೀಚಿಗೆ ಬಂಡೀಪುರ ಅರಣ್ಯ ಪ್ರದೇಶದಿಂದ ಹಾದು ಹೋಗುವ ಕೇರಳ ಕರ್ನಾಟಕ ಗಡಿಯ ಹೆದ್ದಾರಿಯಲ್ಲಿ ನಡೆದದ್ದು ಎನ್ನಲಾದ ವಿಡಿಯೋ ಒಂದರಲ್ಲಿ, ಕಾಡಾನೆಯೊಂದು ಇಬ್ಬರು ಪ್ರಯಾಣಿಕ ರನ್ನು ಅಟ್ಟಿಸಿಕೊಂಡು ಬರುವಾಗ, ಓರ್ವ ಕೆಳಗೆ ಬಿದ್ದರೂ, ಆನೆಯ ಕಾಲಿನ ತುಳಿತದಿಂದ ಸ್ವಲ್ಪದರಲ್ಲೇ ಬಚಾವ್‌ ಆಗುವ ದೃಶ್ಯ ವೈರಲ್‌ ಆಗಿತ್ತು.

ಪ್ರಾಣಕ್ಕೆ ಸಂಚಕಾರ ತಂದುಕೊಳ್ಳಬೇಡಿ: ಆ ವಿಡಿಯೋ ನೋಡಿದ ಎಲ್ಲರ ಪ್ರಶ್ನೆ, ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹಾದು ಹೋಗುವಾಗ ಈ ಪ್ರಯಾಣಿಕರು ವಾಹನದಿಂದ ಕೆಳಗೆ ಏಕೆ ಇಳಿಯಬೇಕಿತ್ತು? ಪ್ರಯಾ ಣಿಕರು ಕಾಡಿನ ಹಾದಿಯಲ್ಲಿ ಸಾಗುವಾಗ, ವಾಹನ ಗಳಲ್ಲಿ ಕುಳಿತು ಕೇಕೆ ಹಾಕುವುದು, ಪ್ರಾಣಿಗಳನ್ನು ಕಂಡಾಗ ಕೂಗುವುದು, ವಾಹನಗಳನ್ನು ನಿಲ್ಲಿಸಿ, ಆನೆಯ ಮುಂದೆಯೇ ಸೆಲ್ಫಿ ತೆಗೆದುಕೊಳ್ಳಲು ಹೋಗುವುದು, ರೀಲ್ಸ್‌ ಮೂಲಕ ತಮ್ಮ ಪೌರುಷ ತೋರಿಸಲು ಮುಂದಾಗುವುದನ್ನು ಕಾಣಬಹುದು. ಈ ಸ್ವಯಂಕೃತ ಅಪರಾಧದಿಂದಾಗಿ ತಮ್ಮ ಪ್ರಾಣಕ್ಕೇ ಸಂಚಕಾರ ತಂದುಕೊಳ್ಳುವ ಪ್ರಸಂಗ ಬರುತ್ತದೆ ಎಂದು ಅರಣ್ಯಾಧಿಕಾರಿಗಳು ಎಚ್ಚರಿಸುತ್ತಾರೆ.

ತೊಂದರೆಯಾಗದಂತೆ ಎಚ್ಚರವಹಿಸಿ: ಬಿಆರ್‌ಟಿ ಉಪ ಅರಣ್ಯ ಸಂರಕ್ಷಣಾಧಿಕಾರಿ, ದೀಪ್‌ ಜೆ ಕಂಟ್ರಾ ಕ್ಟರ್‌ ಈ ಬಗ್ಗೆ ಉದಯವಾಣಿ ಜೊತೆ ಮಾತನಾಡಿ, ನಾವು ಪ್ರಾಣಿಗಳ ಆವಾಸಸ್ಥಾನದಲ್ಲಿ ಹಾದು ಹೋಗುತ್ತಿದ್ದೇವೆ. ಇದು ಪ್ರಾಣಿಗಳ ಮನೆ ಎಂಬುದುನ್ನು ಪ್ರಯಾಣಿಕರು ಮೊದಲು ಅರ್ಥ ಮಾಡಿಕೊಳ್ಳಬೇಕು. ನಾವು ಹೇಗೆ ಜನವಸತಿ ಪ್ರದೇಶದಲ್ಲಿ ನಿರಾತಂಕವಾಗಿ ಜೀವಿಸುತ್ತಿದ್ದೇವೆಯೋ, ಹಾಗೆಯೇ ವನ್ಯಜೀವಿಗಳಿಗೂ ಅರಣ್ಯ ಪ್ರದೇಶಗಳಲ್ಲಿ ನಿರಾತಂಕವಾಗಿ ಜೀವಿಸುವ ಹಕ್ಕಿದೆ. ಅವುಗಳ ವಾಸ ಸ್ಥಾನದಲ್ಲೇ ರಸ್ತೆಗಳು ಹಾದು ಹೋಗಿರುವುದರಿಂದ ಅಲ್ಲಿ ಹೋಗುವ ವಾಹನಗಳು, ಪ್ರಾಣಿಗಳಿಗೆ ಯಾವುದೇ ರೀತಿಯ ತೊಂದರೆಯಾಗ ದಂತೆ ಎಚ್ಚರಿಕೆ ವಹಿಸಬೇಕು ಎನ್ನುತ್ತಾರೆ.

ನಾವು ವಾಹನಗಳಲ್ಲಿ ಹೋಗುವಾಗ ಪ್ರಾಣಿಗಳು ಎದುರಾಗಬಹುದು, ಪ್ರಾಣಿಗಳು ರಸ್ತೆ ದಾಟಲು ಕಾಯುತ್ತಾ ನಿಂತಿರಬಹುದು. ಅಂಥದನ್ನು ಕಂಡಾಗ ಅವುಗಳು ರಸ್ತೆ ದಾಟಲು ಅವಕಾಶ ನೀಡಿ. ಅವುಗಳಿಗೆ ನಾವು ತೊಂದರೆ ಮಾಡದಿದ್ದರೆ ಅವು ನಮ್ಮ ತಂಟೆಗೆ ಬರುವುದಿಲ್ಲ. ರಸ್ತೆ ಬದಿಯಲ್ಲಿ ಆನೆ ನಿಂತಿದ್ದರೆ, ರೀಲ್ಸ್‌ ಮಾಡುವುದು, ಸೆಲ್ಫಿ ತೆಗೆದುಕೊಳ್ಳವುದು ಸರಿಯಲ್ಲ ಎನ್ನುತ್ತಾರೆ.

ಅರಣ್ಯ ಪ್ರಾಣಿಗಳು ಅವುಗಳ ಪಾಡಿಗೆ ಅವು ಇರುತ್ತವೆ. ಅವುಗಳನ್ನು ನಾವು ಕೆರಳಿಸುವುದು, ಚೇಷ್ಟೆ ಮಾಡುವುದ ರಿಂದ ಕೆರಳುತ್ತವೆ. ಅರಣ್ಯ ಪ್ರಾಣಿಗಳಿಗೆ ಚೇಷ್ಟೆ ಮಾಡುವುದು ಅಪರಾಧ. ವನ್ಯಜೀವಿಗಳಿಗೆ ಆಹಾರವನ್ನೂ ನೀಡಬಾರದು. ಸುರಕ್ಷಿತ ಅಂತರದಿಂದ ನೋಡಬಹುದು. ನಾವು ಶಿಸ್ತಿನಿಂದ ಇರಬೇಕು ಎಂದು ದೀಪ್‌ ಸಲಹೆ ನೀಡುತ್ತಾರೆ.

ಕಬ್ಬಿಗಾಗಿ ರಸ್ತೆ ಬದಿಯಲ್ಲೇ ನಿಲ್ಲುವ ಆನೆಗಳು..:

ಅರಣ್ಯದೊಳಗಿನ ಹೆದ್ದಾರಿಗಳಲ್ಲಿ ಜನರ ಕುಚೇಷ್ಟೆಗಳಿಂದ ಆನೆಗಳು ಅಟ್ಟಿಸಿಕೊಂಡು ಬರುವ ಪ್ರಕರಣಗಳು ಒಂದೆಡೆಯಾದರೆ, ಹೆದ್ದಾರಿಗಳಲ್ಲಿ ನಿಂತಿರುವ ಆನೆಗಳಿಗೆ ಕಬ್ಬು ತಿನ್ನುವುದನ್ನು ರೂಢಿ ಮಾಡಿರುವುದರಿಂದ ಆನೆಗಳು ರಸ್ತೆ ಬದಿಯಲ್ಲೇ ನಿಂತಿರುವ ದೃಶ್ಯ ಚಾಮರಾಜನಗರದಿಂದ ಸತ್ಯಮಂಗಲಕ್ಕೆ ಹೋಗುವ ಹಾಸನೂರು ರಸ್ತೆಯಲ್ಲಿ ಸರ್ವೆ ಸಾಮಾನ್ಯವಾಗಿದೆ. ತಮಿಳುನಾಡಿಗೆ ತರಕಾರಿ ಕೊಂಡು ಹೋಗುವ ವಾಹನಗಳು ರಸ್ತೆ ಬದಿ ನಿಂತಿರುವ ಜಿಂಕೆ,ಆನೆಗಳಿಗೆ ತರಕಾರಿ ಎಸೆಯುವುದು, ಕಬ್ಬಿನ ಲಾರಿಗಳವರು ಒಂದಷ್ಟು ಕಬ್ಬಿನ ಜಲ್ಲೆಯನ್ನು ಎಸೆಯುವುದರಿಂದ ಕೆಲವು ಆನೆಗಳು ಅರಣ್ಯದ ಆಹಾರಕ್ಕಿಂತ ಹೊರಗಿನ ಆಹಾರಕ್ಕೆ ಒಗ್ಗಿ ಹೋಗಿವೆ. ಹಾಸನೂರು ಚೆಕ್‌ ಪೋಸ್ಟ್‌ ಸಮೀಪ ಕಬ್ಬಿನ ಲಾರಿಗಳನ್ನು ನಿಲ್ಲಿಸಿದಾಗ ಸೊಂಡಿಲು ಹಾಕಿ ಕಬ್ಬು ಎತ್ತಿಕೊಳ್ಳುತ್ತವೆ.

ಕೆಲವು ಆನೆಗಳಂತೂ ರಸ್ತೆ ಮಧ್ಯದಲ್ಲೇ ನಿಂತು ಲಾರಿಗಳನ್ನು ತಪಾಸಣೆ ಮಾಡುತ್ತವೆ! ಹೀಗೆ ಆನೆಗಳು ಕಬ್ಬಿನ ಲಾರಿಗಳಿಗೆ ಸೊಂಡಿಲು ಹಾಕುವುದನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುವ ಲಾರಿ ಚಾಲಕರು ಜಾಲತಾಣಗಳಲ್ಲಿ ಶೇರ್‌ ಮಾಡುವ ಮೂಲಕ ವೈರಲ್‌ ಮಾಡುವ ಮೂಲಕ ಮಜಾ ತೆಗೆದುಕೊಳ್ಳುತ್ತಿದ್ದಾರೆ. ಆದರೆ ವನ್ಯಜೀವಿಗಳನ್ನು ಹೀಗೆ ಕಾಡಿನ ಆಹಾರದಿಂದ ನಾಡಿನ ಆಹಾರಕ್ಕೆ ಒಗ್ಗಿಸುವುದು ಅಪರಾಧ ಮತ್ತು ಆತಂಕಕಾರಿ ಎಂದು ವನ್ಯಜೀವಿ ತಜ್ಞರು ಹೇಳುತ್ತಾರೆ. ಕಾಡು ಪ್ರಾಣಿಗಳಿಗೆ ಪ್ರಯಾಣಿಕರು ಆಹಾರ ನೀಡುವುದು ವನ್ಯಜೀವಿ ಕಾಯಿದೆಯಡಿ ಅಪರಾಧ. ವಿರಳ ಸಂಖ್ಯೆಯಲ್ಲಿ ಇಂಥವರಿಗೆ ದಂಡ ವಿಧಿಸಲಾಗಿದೆ. ಆದರೆ ಅರಣ್ಯ ಇಲಾಖೆ ಇಂಥವರ ವಿರುದ್ಧ ವ್ಯಾಪಕ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂಬುದು ವನ್ಯಜೀವಿ ತಜ್ಞರ ಒತ್ತಾಯ.

ಅರಣ್ಯದೊಳಗೆ ಹಾದು ಹೋಗುವ ಮುನ್ನವೇ ಅನೇಕ ಎಚ್ಚರಿಕೆ ಫ‌ಲಕಗಳನ್ನು ಹಾಕಲಾಗಿದೆ. ನೋ ಪಾರ್ಕಿಂಗ್‌, ನೋ ಸ್ಟಾಪ್‌, ಪಿಕ್‌ನಿಕ್‌ ಮಾಡಬಾರದು, ಫೋಟೋ ತೆಗೆಯಬಾರದು. ಎಂಬ ನಾಮಫ‌ಲಕಗಳನ್ನು ಹಾಕಿದ್ದೇವೆ. ಸ್ಥಳೀಯರು ಬುಡಕಟ್ಟು ಜನರು ಪ್ರಾಣಿಗಳನ್ನು ಕೆಣಕಲು ಹೋಗುವುದಿಲ್ಲ. ದೊಡ್ಡ ನಗರ ಪ್ರದೇಶಗಳಿಂದ ಮೋಜಿಗಾಗಿ ಬರುವ ವಿದ್ಯಾವಂತರೇ ಹೀಗೆ ಮಾಡುವುದು. ಇಂಥವರಿಗೆ ಕಾಮನ್‌ಸೆನ್ಸ್‌ ಇದ್ದರೆ ಇಂಥ ಪ್ರಕರಣ ನಡೆಯುವುದಿಲ್ಲ.-ದೀಪ್‌ ಜೆ ಕಾಂಟ್ರಾಕ್ಟರ್‌, ಉಪ ಅರಣ್ಯ ಸಂರಕ್ಷಣಾಧಿಕಾರಿ, ಬಿಆರ್‌ಟಿ

ಹೆದ್ದಾರಿ ಬದಿ ನಿಲ್ಲುವುದನ್ನು ಅಭ್ಯಾಸ ಮಾಡಿಕೊಂಡಿರುವ ಆನೆಗಳು ಇತರ ಪ್ರಾಣಿಗಳ ಬಗ್ಗೆ ಅರಣ್ಯ ಇಲಾಖೆ ಎಚ್ಚರಿಕೆ ವಹಿಸಬೇಕು. ಹೆದ್ದಾರಿಯಿಂದ ಈ ಪ್ರಾಣಿಗಳು ದೂರ ಇರುವಂತೆ ನೋಡಿಕೊಳ್ಳಬೇಕು. ಸಾರ್ವಜನಿಕರು ಪ್ರಾಣಿಗಳಿಗೆ ಆಹಾರ ನೀಡದಂತೆ ಕಠಿಣ ಕ್ರಮ ಕೈಗೊಳ್ಳಬೇಕು. ಇಂಥ ಪ್ರಕರಣ ಕಂಡುಬಂದಾಗ ದಂಡ ವಿಧಿಸಬೇಕು. ಜನರು ಆಹಾರ ಕೊಡದಿದ್ದರೆ, ಪ್ರಾಣಿಗಳು ರಸ್ತೆ ಬದಿ ಬಂದು ಆಹಾರಕ್ಕೆ ಕಾಯುವುದಿಲ್ಲ.– ಸಂಜಯ ಗುಬ್ಬಿ, ನೇಚರ್‌ ಕನ್ಸರ್‌ವೇಶನ್‌ ಫೌಂಡೇಷನ್‌

– ಕೆ.ಎಸ್‌.ಬನಶಂಕರ ಆರಾಧ್ಯ

 

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.