ಭಾರೀ ಚರ್ಚೆಗೆ ಗ್ರಾಸವಾದ ಬಿಜೆಪಿ-ಜೆಡಿಎಸ್ ಬೆಂಬಲಿತ ಸದಸ್ಯರ ಮೈತ್ರಿ ಧರ್ಮಪಾಲನೆ ಆಣೆ ಪ್ರಮಾಣ
Team Udayavani, Jan 24, 2021, 10:38 PM IST
ಹನೂರು(ಚಾಮರಾಜನಗರ) : ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ವೇಳೆ ಬಿಜೆಪಿ-ಜೆಡಿಎಸ್ ಬೆಂಬಲಿತ ಸದಸ್ಯರು ಮೈತ್ರಿ ಧರ್ಮ ಪಾಲನೆ ಮಾಡಿ ಮಾತುಕತೆಯಂತೆ ಆಣೆ ಪ್ರಮಾಣ ಮಾಡಿರುವ ವಿಡಿಯೋವೊಂದು ವೈರಲ್ ಆಗಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.
ತಾಲೂಕಿನ ಕಣ್ಣೂರು ಗ್ರಾಮ ಪಂಚಾಯಿತಿಯಲ್ಲಿ ೧೫ ಸದ್ಯಸ ಬಲವಿದ್ದು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ 3 ಪಕ್ಷಗಳ ತಲಾ 5 ಬೆಂಬಲಿತರು ಗೆದ್ದಿದ್ದರು.. ಆದರೆ ಇಲ್ಲಿ ಅಧಿಕಾರ ಹಿಡಿಯಲು ಯಾವುದಾದರೂ 2 ಪಕ್ಷಗಳು ಮೈತ್ರಿ ಮಾಡಿಕೊಳ್ಳುವುದು ಅವಶ್ಯಕವಾಗಿತ್ತು. ಈ ಹಿನ್ನೆಲೆ ಬಿಜೆಪಿ-ಜೆಡಿಎಸ್ ಮೈತ್ರಿಗೆ ಸಿದ್ಧವಾಗಿ 2 ಪಕ್ಷಗಳ ಸದಸ್ಯರು ಧರ್ಮಸ್ಥಳಕ್ಕೆ ಪ್ರವಾಸಕ್ಕೆ ಹೊರಟಿದ್ದರು. ಈ ವೇಳೆ ಕೆಲ ಸದಸ್ಯರು ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಾಲಯದ ಮುಂಭಾಗ ಕರ್ಪೂರ ಹಚ್ಚಿ ನಾವೆಲ್ಲಾ ಆಡಿದ ಮಾತಿನಂತೆ ನಡೆದುಕೊಳ್ಳುತ್ತೇವೆ ಎಂದು ಪ್ರಮಾಣ ಮಾಡಿದ್ದಾರೆ.
ಮತ್ತೊಂದು ವಿಡಿಯೋದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ಕಣ್ಣೂರು ಬಸವರಾಜಪ್ಪ ಮಾತನಾಡಿ ಮೊದಲ 10 ತಿಂಗಳ ಅವಧಿಗೆ ಬಸವರಾಜು, ಮುಂದಿನ 12 ತಿಂಗಳು ಮಮತಾರಾಣಿ ಮತ್ತು ಉಳಿದ ೮ ತಿಂಗಳಿಗೆ ಶಬಾನ ಖಾನಮ್ ಅವರು ಅಧ್ಯಕ್ಷರಾಗಲಿದ್ದಾರೆ. ಏನೇ ಆದರೂ ನಾವೆಲ್ಲಾ 50-50 ಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದ್ದಾರೆ. ಇದೇ ವೇಳೆ ಮತ್ತೊರ್ವ ಮುಖಂಡ ಫೈರೋಜ್ ಮಾತನಾಡಿದ್ದು 5 ವರ್ಷ ಈಗ ಹೇಗಿದ್ದೇವೆ ಹಾಗೆಯೇ ಇರಬೇಕು, ಯಾರಾದರು ಒಬ್ಬರು ಹೆಚು ಕಡಿಮೆ ಮಾಡಿದರೆ ಅವರ ಮನೆ ಮುರಿದುಹೋಗುತ್ತದೆ ಎಂದು ಮಾತನಾಡಿದ್ದಾರೆ.
ಈ 2 ವಿಡಿಯೋಗಳು ಭಾರೀ ಚರ್ಚೆಗೆ ಗ್ರಾಸವಾಗಿದ್ದು ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆಯಲಿದೆ, ಅಥವಾ ಚುನಾವಣಾ ಆಯೋಗ ಮಧ್ಯೆ ಪ್ರವೇಶಿಸಿ ಏನಾದರೂ ಕ್ರಮ ಕೈಗೊಳ್ಳಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.
ಇದನ್ನೂ ಓದಿ : ಕೆಪಿಎಸ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ : ಬೀಳಗಿಯ ಓರ್ವ ವಶಕ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.