ಚಾ.ನಗರ ಜಿಲ್ಲೆಯಲ್ಲಿ ಮತ್ತೊಬ್ಬ ಲ್ಯಾಬ್ ಟೆಕ್ನಿಷಿಯನ್ ಸೇರಿ 12 ಮಂದಿಗೆ ಸೋಂಕು

ಯಳಂದೂರು ಸರ್ಕಾರಿ ಆಸ್ಪತ್ರೆ ಸೀಲ್ ಡೌನ್

Team Udayavani, Jul 9, 2020, 6:56 PM IST

ಚಾ.ನಗರ ಜಿಲ್ಲೆಯಲ್ಲಿ ಮತ್ತೊಬ್ಬ ಲ್ಯಾಬ್ ಟೆಕ್ನಿಷಿಯನ್ ಸೇರಿ 12 ಮಂದಿಗೆ ಸೋಂಕು

ಯಳಂದೂರು ಸರ್ಕಾರಿ ಆಸ್ಪತ್ರೆ ಸೀಲ್ ಡೌನ್ ಮಾಡಲಾಗಿರುವುದು.

ಚಾಮರಾಜನಗರ: ಸರ್ಕಾರಿ ಆಸ್ಪತ್ರೆ ಪ್ರಯೋಗಾಲಯ ತಂತ್ರಜ್ಞರೊಬ್ಬರಿಗೆ, 8 ವರ್ಷದ ಬಾಲಕಿ ಹಾಗೂ ಗರ್ಭಿಣಿಗೆ ಸೋಂಕು ತಗುಲಿದೆ.

ಈ ಮೂಲಕ ಜಿಲ್ಲೆಯಲ್ಲಿ ಗುರುವಾರ 12 ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಇದರಿಂದಾಗಿ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 132ಕ್ಕೆ ಏರಿಕೆಯಾಗಿದೆ. ಇವರಲ್ಲಿ 31 ಮಂದಿ ಗುಣಮುಖರಾಗಿದ್ದು ಜಿಲ್ಲೆಯಲ್ಲಿ ಇನ್ನೂ 101 ಸಕ್ರಿಯ ಪ್ರಕರಣಗಳಿವೆ.

ಇಂದು ಪರೀಕ್ಷಸಲಾಗಿರುವ ಒಟ್ಟು 952 ಮಾದರಿಗಳಲ್ಲಿ 11 ಪ್ರಕರಣಗಳು ಮಾತ್ರ ಪಾಸಿಟಿವ್ ಆಗಿರುವುದು ಕೊಂಚ ಸಮಾಧಾನಕರ ವಿಷಯವಾಗಿದೆ. ಇನ್ನೊಂದು ಪ್ರಕರಣ ಮೈಸೂರಿನಲ್ಲಿ ಪರೀಕ್ಷೆಗೊಳಪಟ್ಟಿತ್ತು.

ಇದುವರೆಗೆ ಜಿಲ್ಲೆಯಲ್ಲಿ 9897 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿರುವ ಮಾದರಿಗಳ ಪೈಕಿ 1032 ಮಾದರಿಗಳ ಫಲಿತಾಂಶ ಇನ್ನೂ ಬರಬೇಕಿದೆ.

ಇಂದಿನ 12 ಪ್ರಕರಣಗಳಲ್ಲಿ ಕೊಳ್ಳೇಗಾಲ 4, ಯಳಂದೂರು 4, ಗುಂಡ್ಲುಪೇಟೆ 3 ಹಾಗೂ ಚಾಮರಾಜನಗರಕ್ಕೆ 1 ಪ್ರಕರಣ ಸೇರಿವೆ.

ಕೋವಿಡ್ ಸ್ವಾಬ್ ಟೆಸ್ಟ್ ತೆಗೆದುಕೊಳ್ಳುತ್ತಿದ್ದ ಯಳಂದೂರು ಸರ್ಕಾರಿ ಆಸ್ಪತ್ರೆಯ 40 ವರ್ಷದ ಪ್ರಯೋಗಶಾಲಾ ತಂತ್ರಜ್ಞನಿಗೆ ಸೋಂಕು ತಗುಲಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಆ ಲ್ಯಾಬ್ ಸೇರಿದಂತೆ ಇಡೀ ಆಸ್ಪತ್ರೆ, ಪಕ್ಕದಲ್ಲಿರುವ ಆರೋಗ್ಯ ಇಲಾಖೆಯ ಕಚೇರಿ ಹಾಗೂ ವೈದ್ಯರು ಹಾಗೂ ದಾದಿಯರು ಇರುವ ವಸತಿ ಗೃಹಗಳ ಸಮುಚ್ಚಯಕ್ಕೆ ರಾಸಾಯನಿಕ ದ್ರಾವಣ ಸಿಂಪಡಿಸಿ ಸೀಲ್‌ಡೌನ್ ಮಾಡಲಾಗಿದೆ.

ಚಾಮರಾಜನಗರದ ರಹಮತ್ ನಗರದ 23 ವರ್ಷದ ಗರ್ಭಿಣಿಗೂ ಪಾಸಿಟಿವ್ ದೃಢಪಟ್ಟಿದೆ. ಎಲ್ಲರೂ ನಗರದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದಿನ ಪ್ರಕರಣಗಳ ವಿವರ ಇಂತಿದೆ:  ರೋಗಿ ಸಂಖ್ಯೆ ಸಿಎಚ್‌ಎನ್ 122: 14 ವರ್ಷದ ಬಾಲಕ, ಮಂಜುನಾಥ ನಗರ, ಕೊಳ್ಳೇಗಾಲ (ರೋಗಿಯ ಸಂಪರ್ಕಿತ), ಸಂಖ್ಯೆ 123: 60 ರ್ಷದ ವೃದ್ಧ, ಮಂಜುನಾಥನಗರ ಕೊಳ್ಳೇಗಾಲ (ರೋಗಿಯ ಸಂಪರ್ಕಿತ), ಸಂಖ್ಯೆ 124: 38 ವರ್ಷದ ಪುರುಷ ಮಂಜುನಾಥನಗರ, ಕೊಳ್ಳೇಗಾಲ (ರೋಗಿಯ ಸಂಪರ್ಕಿತ), ಸಂಖ್ಯೆ 125: 55 ವರ್ಷದ ಮಹಿಳೆ, ಮಂಜುನಾಥನಗರ, ಕೊಳ್ಳೇಗಾಲ (ರೋಗಿಯ ಸಂಪರ್ಕಿತ), ಸಂಖ್ಯೆ 126: 23 ವರ್ಷದ  ಗರ್ಭಿಣಿ, ಮೊಬೈಲ್ ಅಂಗಡಿ ಮಾಲೀಕನ ಪತ್ನಿ, ರೆಹಮತ್ ನಗರ, ಚಾಮರಾಜನಗರ. ಸಂಖ್ಯೆ 127: 40 ವರ್ಷದ ಪುರುಷ, ಸರ್ಕಾರಿ ಆಸ್ಪತ್ರೆ, ಯಳಂದೂರು. ಸಂಖ್ಯೆ 128: 27 ವರ್ಷದ ಯುವಕ ಕುರುಬರಬೀದಿ, ಗುಂಡ್ಲುಪೇಟೆ, ಸಂಖ್ಯೆ 129: 35 ವರ್ಷದ ಮಹಿಳೆ, ಯರಗಂಬಳ್ಳಿ, ಯಳಂದೂರು (ಬೆಂಗಳೂರಿನಿಂದ ಬಂದವರು), ಸಂಖ್ಯೆ 130: 33 ವರ್ಷದ ಮಹಿಳೆ, ಸುಣ್ಣದ ಕೇರಿ, ಗುಂಡ್ಲುಪೇಟೆ (ಪತಿ ಕಾರು ಚಾಲಕ), ಸಂಖ್ಯೆ 131: 36 ವರ್ಷದ ಮಹಿಳೆ, ಆಶ್ರಯ ಬಡಾವಣೆ ಯಳಂದೂರು. (ರೋಗಿಯ ಸಂಪರ್ಕಿತ), ಸಂಖ್ಯೆ 132: 8 ವರ್ಷದ ಬಾಲಕಿ, ಆಶ್ರಯ ಬಡಾವಣೆ, ಯಳಂದೂರು (ರೋಗಿಯ ಸಂಪರ್ಕಿತ), ರೋಗಿ ಸಂಖ್ಯೆ 133: 70 ವರ್ಷದ ವೃದ್ಧೆ, ಕಲ್ಲಹಳ್ಳಿ, ಗುಂಡ್ಲುಪೇಟೆ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.