ಜನರಿಕ್‌ ಮಳಿಗೆ ಪುನರಾರಂಭಿಸಲು ಆಗ್ರಹಿಸಿ ಧರಣಿ


Team Udayavani, May 17, 2019, 12:51 PM IST

cham-3

ಚಾಮರಾಜನಗರ: ಜಿಲ್ಲಾಸ್ಪತ್ರೆ ಆವರಣದಲ್ಲಿ ಮುಚ್ಚ ಲಾಗಿರುವ ಜನರಿಕ್‌ ಔಷಧಿ ಮಳಿಗೆಯನ್ನು ಪುನರಾ ಂಭಿಸುವಂತೆ ಹಾಗೂ ಜಿಲ್ಲಾಸ್ಪತ್ರೆ ಅವ್ಯವಸ್ಥೆ ಸರಿಪಡಿ ಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ನಗರದ ಜಿಲ್ಲಾಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿದರು.

ಕರ್ನಾಟಕ ಸೇನಾಪಡೆಯ ರಾಜ್ಯಾಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಿಲ್ಲಾಸ್ಪತ್ರೆ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಜಿಲ್ಲಾಡಳಿತ, ಡೀನ್‌, ಆರೋಗ್ಯ ಸಚಿವರ ವಿರುದ್ಧ ಧಿಕ್ಕಾರ ಕೂಗಿ ದರು. ಜಿಲ್ಲಾ ಆಸ್ಪತ್ರೆ ಸತ್ತು ಹೋಗಿದೆ ಎಂದು ಪುರಿ ಚೆಲ್ಲುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಡೀನ್‌ ಭೇಟಿ: ಪ್ರತಿಭಟನೆ ಸ್ಥಳಕ್ಕೆ ಡೀನ್‌ ರಾಜೇಂದ್ರ, ಜಿಲ್ಲಾ ಸರ್ಜನ್‌ ಡಾ. ರಘುರಾಂ ಸರ್ವೇಗಾರ್‌ ಭೇಟಿ ನೀಡಿ, ಮಾತನಾಡಿ, ಜನರಿಕ್‌ ಔಷಧಿ ಮಳಿಗೆ ನಿರ್ಮಿ ಸಿರುವ ಜಾಗ ಜಿಲ್ಲಾಸ್ಪತ್ರೆಗೆ ಸೇರಿದ್ದು, ಆದರೆ ಮಳಿಗೆ ಯ ಕಟ್ಟಡ ನಮ್ಮದಲ್ಲ. ಎಚ್ಎಲ್ಎಲ್ ಕಂಪನಿ ಟೆಂ ಡರ್‌ ಪಡೆದುಕೊಂಡಿದೆ. ಜನರಿಕ್‌ ಮಳಿಗೆ ನಡೆಸುತ್ತಿದೆ. ಅದು ನಮ್ಮ ಅಧಿಕಾರದಲ್ಲಿಲ್ಲ ಎಂದು ಹೇಳಿದರು.

ಜಾಗದ ಸಮಸ್ಯೆ: ಇದರಿಂದ ಸಮಾಧಾನಿತರಾಗದ ಪ್ರತಿಭಟನಾಕಾರರು, ಬೇಜಾಬ್ದಾರಿಯುತ ಉತ್ತರ ನೀಡುತ್ತಿದ್ದೀರಾ ಎಂದು ಡೀನ್‌ ಅವರನ್ನು ತರಾಟೆ ತೆಗೆದುಕೊಂಡರು. ನಂತರ ಜಿಲ್ಲಾ ಸರ್ಜನ್‌ ಡಾ. ರಘುರಾಂ ಸರ್ವೇಗಾರ್‌ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆಯಲಾಗಿದೆ. ಎಂಎಸ್‌ಐಎಲ್ ಮೂಲಕ ಬೇರೊಂದು ಜನರಿಕ್‌ ಮಳಿಗೆ ತೆರೆಯಲು ನಿರ್ಧರಿಸಲಾಗಿದೆ. ಆದರೆ ಜಿಲ್ಲಾಸ್ಪತ್ರೆ ಯಲ್ಲಿ ಜಾಗದ ಸಮಸ್ಯೆಯಾಗಿದೆ ಎಂದರು.

ಭರವಸೆ ನೀಡಿದ ಅಧಿಕಾರಿಗಳು: ಇದೆಲ್ಲ ಸಬೂಬು ಬೇಡಿ. ಯಾವುದೇ ಕಾರಣ ಹೇಳದೇ ಶೀಘ್ರವೇ ಆಸ್ಪತ್ರೆ ಆವರಣದಲ್ಲಿ ಜನರಿಕ್‌ ಔಷಧಿ ಮಳಿಗೆ ತೆರೆದು ಬಡವರಿಗೆ ಅನುಕೂಲ ಮಾಡುವಂತೆ ಪಟ್ಟು ಹಿಡಿದರು. ಒಂದು ತಿಂಗಳೊಳಗೆ ಜೆನರಿಕ್‌ ಔಷಧಿ ಮಳಿಗೆ ತೆರೆಯುವುದಾಗಿ ಅಧಿಕಾರಿಗಳು ಭರವಸೆ ನೀಡಿದ ಮೇಲೆ ಪ್ರತಿಭಟನೆ ಅಂತ್ಯಗೊಳಿಸಿದರು.

ಹೋರಾಟದ ಎಚ್ಚರಿಕೆ: ಕರ್ನಾಟಕ ಸೇನಾಪಡೆಯ ರಾಜ್ಯಾಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕೇಂದ್ರ ಸರ್ಕಾರ ಬಡ ಜನರಿಗೆ ಕಡಿಮೆ ದರದಲ್ಲಿ ಔಷಧಿ ವಿತರಿಸುವ ಸಲುವಾಗಿ ದೇಶಾದ್ಯಂತ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಜನರಿಕ್‌ ಔಷಧಿ ಮಳಿಗೆ ತೆರೆದಿದೆ. ಆದರೆ ಚಾಮರಾಜನಗರ ಜಿಲ್ಲಾಸ್ಪತ್ರೆಯ ಜನರಿಕ್‌ ಔಷಧಿ ಮಳಿಗೆ ಕಳೆದ 4 ತಿಂಗಳಿನಿಂದ ಮುಚ್ಚಿದ್ದು, ಬಡಜನರಿಗೆ ತೊಂದರೆಯಾಗಿದೆ. ಆಸ್ಪತ್ರೆಯ ವೈದ್ಯರು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು. ಇಲ್ಲದಿದ್ದರೆ ಚಾಮರಾಜನಗರ ಬಂದ್‌ ಘೋಷಿಸುವುದಾಗಿ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಶಾ.ಮುರಳಿ, ಚಾ.ಸಿ.ಸೋಮ ನಾಯಕ, ಚಾ.ಗು. ನಾಗರಾಜು, ಪುರುಷೋ ತ್ತಮ್‌, ನಿಜಧ್ವನಿ ಗೋವಿಂದರಾಜು, ಶಿವಶಂಕರನಾಯಕ, ವೀರಭದ್ರ, ತಾಂಡವಮೂರ್ತಿ, ಸ್ವಾಮಿ, ಮಹೇಶ್‌ಗೌಡ, ನಂಜುಂಡಸ್ವಾಮಿ, ಚಂದ್ರಣ್ಣ ಇದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14(1)

Gundlupete: 3 ತಿಂಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ

Thief

Chamarajnagar: ಪೊಲೀಸ್ ಪೇದೆಯ ಮನೆಯಲ್ಲೇ ಕೈ ಚಳಕ ತೋರಿದ ಚಾಲಾಕಿ ಕಳ್ಳರು!

6-yelandur

Yelandur: ಅಪರೂಪದ ನಕ್ಷತ್ರ ಆಮೆ ಕಳ್ಳ ಸಾಗಾಟ; ಇಬ್ಬರ ಬಂಧನ

AANE 2

Tiger ದಾಳಿ: 3 ತಿಂಗಳ ಮರಿಯಾನೆ ಸಾ*ವು

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.