ಡಾ.ರಾಜ್‌ಕುಮಾರ್‌ ಚಾ.ನಗರ ಜಿಲ್ಲೆಯ ಹೆಮ್ಮೆ


Team Udayavani, Apr 25, 2022, 1:41 PM IST

Untitled-1

ಚಾಮರಾಜನಗರ: ಇಡೀ ಕುಟುಂಬವೇ ಒಟ್ಟಾಗಿ ಕುಳಿತು ನೋಡುವಂತಹ ಚಲನಚಿತ್ರಗಳಲ್ಲಿ ನಟಿಸಿದ ಡಾ.ರಾಜಕುಮಾರ್‌ ಅವರು, ನಾಡಿನ ಜನಮಾನಸದಲ್ಲಿ ಎಂದೆಂದಿಗೂ ಅಜರಾಮರರಾಗಿದ್ದಾರೆ. ಅವರು ನಮ್ಮ ಜಿಲ್ಲೆಯ ಹೆಮ್ಮೆ ಎಂದು ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಎಂ.ರಾಮಚಂದ್ರ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾಧಿ ಕಾರಿ ಕಚೇರಿ ಸಭಾಂ ಗಣದಲ್ಲಿ ಜಿಲ್ಲಾಡಳಿತ, ಜಿಪಂ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಮ್ಮಿ ಕೊಂಡಿದ್ದ ಕನ್ನಡದ ಮೇರುನಟ, ಡಾ.ರಾಜ ಕುಮಾರ್‌ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ರಾಜಕುಮಾರ್‌ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.

ಯುವಕರಿಗೆ ಆದರ್ಶ: ಡಾ.ರಾಜಕುಮಾರ್‌ ಅವರು 50 ವರ್ಷ ಚಲನಚಿತ್ರಗಳಲ್ಲಿ ನಟಿಸಿದ ವಿಶ್ವದ ಗಮನ ಸೆಳೆದ ಏಕೈಕ ನಟರು. ಸಾಮಾನ್ಯ ಜನಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಬಿತ್ತಿದ ರಾಜಕುಮಾರ್‌, ತಪ್ಪುಗಳನ್ನು ತಿದ್ದುವಂತಹ ಸಾಕಷ್ಟು ಚಿತ್ರಗಳಲ್ಲಿ ನಟಿಸಿ ಜನಮನ ಸೂರೆಗೊಂಡಿದ್ದಾರೆ. ಬಂಗಾರದ ಮನುಷ್ಯ ಹಾಗೂ ಧ್ರುವತಾರೆ ಚಿತ್ರಗಳಲ್ಲಿ ರಾಜಕುಮಾರ್‌ ರೈತರ ಪ್ರೇರಣೆಯಾಗಿದ್ದರು. ಯುವಕರು ಸಮಾಜದ ಸತøಜೆಗಳಾಗಲು ರಾಜ್‌ ಅದರ್ಶರಾಗಿದ್ದಾರೆ ಎಂದು ತಿಳಿಸಿದರು.

ಭಾಷಾಪ್ರೇಮ ಅಪಾರ: ಡಿ.ವೈ.ಎಸ್‌.ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ಮಾತನಾಡಿ, ಡಾ.ರಾಜಕುಮಾರ್‌ ಅವರಿಗೆ ಕನ್ನಡ ಭಾಷಾಪ್ರೇಮ ಅಪಾರವಾಗಿತ್ತು. ಸಾಮಾಜಿಕ ಮೌಲ್ಯಗಳಿಗೆ ಒತ್ತು ನೀಡುವ ಚಿತ್ರಗಳಲ್ಲಿ ನಟಿಸುತ್ತಿದ್ದ ರಾಜಕುಮಾರ್‌ ಅವರು ಚಲನಚಿತ್ರಗಳಲ್ಲಿ ಮಹಿಳೆಯರಿಗೆ ಗೌರವ ತರುವ ನಿಟ್ಟಿನಲ್ಲಿ ಹೆಚ್ಚಿನ ಪ್ರಾಧಾನ್ಯತೆ ನೀಡುತ್ತಿದ್ದರು. ರಾಜಕುಮಾರ್‌ ಮುಂದಿನ ಪೀಳಿಗೆಗೂ ಜೀವಂತವಾಗಿರುತ್ತಾರೆ ಎಂದರು.

ಕನ್ನಡಪರ ಸಂಘಟನೆಯ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಡಾ.ರಾಜಕುಮಾರ್‌ ಅವರು ಕನ್ನಡ ನಾಡು ನುಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ರಾಜಕುಮಾರ್‌ ಅವರು ಕನ್ನಡ ಶಕ್ತಿ. ಕನ್ನಡದ ಜ್ಞಾನಕೋಶವಾಗಿದ್ದ ರಾಜಕುಮಾರ್‌ ಅವರನ್ನು ನೂರು ಆಯಾಮಗಳಲ್ಲಿ ನೋಡಬಹುದಾಗಿದೆ. ಆಡು ಮುಟ್ಟದ ಸೊಪ್ಪಿಲ್ಲ, ರಾಜ್‌ ನಟಿಸದ ಪಾತ್ರವಿಲ್ಲ. ರಾಜಕುಮಾರ್‌ ತವರು ಜಿಲ್ಲೆಯಲ್ಲಿರುವ ನಾವೇ ಧನ್ಯರು ಎಂದರು.

ಗಾಯಕರಾದ ಸಿ.ಎಂ.ನರಸಿಂಹಮೂರ್ತಿ, ಸಿ.ಎಂ. ವೆಂಕಟೇಶ್‌, ಸುರೇಶ್‌ನಾಗ್‌, ಕಲೆ ನಟರಾಜು ನಡೆಸಿಕೊಟ್ಟ ಡಾ. ರಾಜಕುಮಾರ್‌ ಅಭಿನಯಿಸಿದ ಪ್ರಮುಖ ಚಲನಚಿತ್ರಗಳ ಗೀತೆಗಳ ಗಾಯನ ಎಲ್ಲರ ಮೆಚ್ಚುಗೆ ಗಳಿಸಿತು. ಎಎಸ್ಪಿ ಕೆ.ಎಸ್‌.ಸುಂದರರಾಜು, ಜಿಪಂ ಲೆಕ್ಕಾಧಿಕಾರಿ ಎಚ್‌.ಎಸ್‌.ಗಂಗಾಧರ್‌, ಬರಹಗಾರ ಲಕ್ಷ್ಮೀನರಸಿಂಹ ಮಾತನಾಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್‌, ತಹಶೀಲ್ದಾರ್‌ ಚಿದಾನಂದ ಗುರುಸ್ವಾಮಿ, ತಾಪಂ ಇಒ ಪ್ರೇಮ್‌ಕುಮಾರ್‌, ಸಾಹಿತಿ ಸೋಮಶೇಖರ ಬಿಸಿಲವಾಡಿ, ಕುಮಾರಿ ವೈಷ್ಣವಿ, ವಿವಿಧ ಸಂಘಟನೆಗಳ ಮುಖಂಡರಾದ ನಿಜಧ್ವನಿ ಗೋವಿಂದರಾಜು, ಆಲೂರು ನಾಗೇಂದ್ರ, ಜಿ. ಬಂಗಾರು, ಗು.ಪುರುಷೋತ್ತಮ್‌, ಕೆ.ಎಂ.ನಾಗರಾಜು, ಜಯಕುಮಾರ್‌, ಸಿ.ಎಂ. ಮಹದೇವಶೆಟ್ಟಿ ಇತರರಿದ್ದರು.

ಅಹಂಕಾರ, ಹಣ ವ್ಯಾಮೋಹ ವಿಲ್ಲದ ಪರಿಪೂರ್ಣ ಮಾನವ ಪ್ರೇಮವನ್ನು ಅಭಿವ್ಯಕ್ತಿಗೊಳಿಸಿದ ಡಾ.ರಾಜಕುಮಾರ್‌ ಅವರಿಗೆ ಚಾಮರಾಜನಗರ ಸ್ವರ್ಗದ ಬಾಗಿಲಾಗಿತ್ತು. ಗುರುನಿಂದನೆ, ಮಾತಾಪಿತೃ ನಿಂದನೆಯಂತಹ ಇಂದಿನ ಪರಿಸ್ಥಿತಿಯಲ್ಲಿ ರಾಜಕುಮಾರ್‌ ಪ್ರತಿಯೊಬ್ಬರಿಗೂ ಆದರ್ಶ ವ್ಯಕ್ತಿತ್ವವಾಗಿದ್ದಾರೆ. ಸರಳತೆ, ಮಾನವತೆಗೆ ಉತ್ತಮ ಉದಾಹರಣೆ ಡಾ.ರಾಜಕುಮಾರ್‌. – ಸುರೇಶ್‌ ಋಗ್ವೇದಿ, ತಾಲೂಕು ಅಧ್ಯಕ್ಷ, ಕಸಾಪ

ಜಿಲ್ಲೆಯ ಹಾಗೂ ಕನ್ನಡನಾಡಿನ ಸಾಂಸ್ಕೃತಿಕ ರಾಯಭಾರಿ ಯಾಗಿದ್ದ ಡಾ.ರಾಜಕುಮಾರ್‌ ಅವರು ಭಾಷೆಯನ್ನು ಹೇಗೆ ಮಾತನಾಡಬೇಕು, ಉತ್ಛರಿಸಬೇಕು ಎಂಬುದನ್ನು ಕನ್ನಡಿಗರಿಗೆ ಹೇಳಿಕೊಟ್ಟರು. – ಸಿ.ಎಂ.ನರಸಿಂಹಮೂರ್ತಿ, ಕರ್ನಾಟಕ ಜಾನಪದ ಅಕಾಡಮಿ ಸದಸ್ಯ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.