ಕಾಂಗ್ರೆಸ್‌ ನಿರ್ವಾತ ತುಂಬಲು ಧ್ರುವ ಆಗಮನ


Team Udayavani, Jan 22, 2021, 1:32 PM IST

druva arrival to Congress

ಚಾಮರಾಜನಗರ: ಹಳೆ ಮೈಸೂರು ಭಾಗದಲ್ಲಿ ಪಕ್ಷವನ್ನು ಸಂಘಟಿಸಲು ಹಾಗೂ ದಲಿತ ನಾಯಕರೊಬ್ಬರನ್ನು ಪ್ರಬಲವಾಗಿ ಬೆಳೆಸಲು ಆರ್‌. ಧ್ರುವನಾರಾಯಣ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ನೀಡಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಹಳೆ ಮೈಸೂರು ಭಾಗದಲ್ಲಿ ಬಿಜೆಪಿಯ ವಿ. ಶ್ರೀನಿವಾಸಪ್ರಸಾದ್‌ ಪ್ರಬಲ ದಲಿತ ನಾಯಕರು. ಅವರು ಕಾಂಗ್ರೆಸ್‌ನಲ್ಲಿದ್ದಾಗ ಪಕ್ಷಕ್ಕೆ ಈ ಭಾಗದಲ್ಲಿ ಪ್ರಬಲ ದಲಿತ ನಾಯಕರೊಬ್ಬರ ನಾಯಕತ್ವ ಪಕ್ಷಕ್ಕಿತ್ತು. ಇನ್ನೊಂದೆಡೆ ಕಾಂಗ್ರೆಸ್‌ಗೆ ಹೆಗಲಾಗಿ ಎಚ್‌ .ಸಿ.ಮಹದೇವಪ್ಪ ಇದ್ದರು. ಆದರೆ, ಕಳೆದ ವಿಧಾನಸಭಾ ಚುನಾವಣೆಯ ನಂತರ ಎಚ್‌ಸಿಎಂ ಪಕ್ಷದ ಕಾರ್ಯಕ್ರಮಗಳಲ್ಲಿ, ಸಂಘಟನೆಯಲ್ಲಿ ಸಕ್ರಿಯವಾಗಿ ಕಾಣಿಸಿಕೊಳ್ಳುತ್ತಿಲ್ಲ. ಒಂದು ರೀತಿಯ ಅಸಮಾಧಾನ ಅವರಲ್ಲಿದೆ. ಇಂಥ ಸನ್ನಿವೇಶದಲ್ಲಿ ಮೈಸೂರು ಚಾಮರಾಜನಗರ ಭಾಗದಲ್ಲಿ ಕಾಂಗೆಸ್‌ಗೆ ಪ್ರಬಲ ದಲಿತ ನಾಯಕತ್ವದ ಕೊರತೆಯಿದೆ. ಅಷ್ಟು ಮಾತ್ರವಲ್ಲ, ಎಚ್‌.ಎಸ್‌.ಮಹದೇವಪ್ರಸಾದ್‌ ನಿಧನದ ನಂತರ ಚಾಮರಾಜನಗರ ಜಿಲ್ಲೆಯಲ್ಲೇ ಪಕ್ಷಕ್ಕೆ ಪ್ರಭಾವಿ ನಾಯಕತ್ವದ ಕೊರತೆಯಿದೆ.

ಈ ಎಲ್ಲ ಕೊರತೆಗಳನ್ನೂ ಸರಿದೂಗಿಸಲು ಧ್ರುವನಾರಾಯಣಗೆ ಕಾರ್ಯಾಧ್ಯಕ್ಷ ಸ್ಥಾನ ನೀಡಿದೆ ಎಂಬುದು ಹೊರ ನೋಟಕ್ಕೇ ಗೊತ್ತಾಗುವ ಸಂಗತಿ. ಕಾಂಗ್ರೆಸ್‌ ನಿರ್ವಾತ ತುಂಬಲು ಪಕ್ಷಕ್ಕೆ ಇದೀಗ ಧ್ರುವ ಬಲ ಸಿಕ್ಕಿದೆ. ಧ್ರುವನಾರಾಯಣ ಪಕ್ಷದೊಳಗೆ ಎಲ್ಲ ನಾಯಕರ ಜೊತೆ ವಿಶ್ವಾಸದಿಂದಿದ್ದು, ಎಲ್ಲರೂ ಒಪ್ಪುವ ಮೃದು ಸ್ವಭಾವದ ವ್ಯಕ್ತಿ. ಅವರು 2 ಬಾರಿ ಶಾಸಕರಾಗಿ, 2 ಬಾರಿ ಸಂಸದರಾಗಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಈ ಭಾಗದಲ್ಲಿ ಜನಜನಿತ. ಸಂಸದರಾಗಿದ್ದ ಅವಧಿಯಲ್ಲಿ ಅವರು ತಮ್ಮ ಲೋಕಸಭಾ ಕ್ಷೇತ್ರಕ್ಕೆ ಕೇಂದ್ರದಿಂದ ತರಬಹುದಾದ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಹಗಲು ರಾತ್ರಿಯೆನ್ನದೆ ಶ್ರಮಿಸಿರುವುದು ಈ ಭಾಗದ ಜನರಿಗೆ ಚೆನ್ನಾಗಿ ಗೊತ್ತು.

ಸಂಸದರೊಬ್ಬರು ಇಷ್ಟೊಂದು ಕೆಲಸ ಮಾಡಲು ಸಾಧ್ಯವೆಂಬುದನ್ನು ಧ್ರುವ ತೋರಿಸಿಕೊಟ್ಟಿದ್ದಾರೆ ಎಂದು ಪ್ರತಿಪಕ್ಷ ನಾಯಕರು ಸಹ ಒಪ್ಪುತ್ತಾರೆ. ಚಾಮರಾಜನಗರದ ಕೇಂದ್ರೀಯ ವಿದ್ಯಾಲಯದ ಉದ್ಘಾಟನೆಗೆ ಆಗಮಿಸಿದ್ದ ಅಂದಿನ ಕೇಂದ್ರ ಸಚಿವ ದಿ. ಅನಂತಕುಮಾರ್‌ ಅವರು, ಅಂದಿನ ತಮ್ಮ ಭಾಷಣದಲ್ಲಿ ವಿರೋಧ ಪಕ್ಷದವರು ಎಂಬ ಭೇದ ತೋರದೆ ಧ್ರುವ ಅತ್ಯುತ್ತಮ ಸಂಸದ ಎಂದು ಬಣ್ಣಿಸಿದ್ದರು. ಸಂಸ್ಥೆಯೊಂದು ನಡೆಸಿದ ಸಂಸದರ ಅಭಿವೃದ್ಧಿ ಕಾರ್ಯಗಳ ಮೌಲ್ಯಮಾಪನದಲ್ಲಿ ಧ್ರುವ, ದೇಶದ ನಾಲ್ಕನೇ ಹಾಗೂ ಕರ್ನಾಟಕದ ಮೊದಲ ಸಂಸದರಾಗಿದ್ದರು.

ಧ್ರುವನಾರಾಯಣ ದಲಿತ ವರ್ಗದೊಡನೆ ಮಾತ್ರವಲ್ಲ, ಇತರ ವರ್ಗಗಳೊಡನೆಯೂ ವಿಶ್ವಾಸ ಹೊಂದಿದ್ದಾರೆ. ಬೇರೆ ಸಮುದಾಯದ ನಾಯಕರೊಡನೆ ಒಡನಾಟ ಇಟ್ಟುಕೊಂಡಿದ್ದಾರೆ. ಶಾಸಕ, ಸಂಸದರಾಗಿದ್ದಾಗ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳು ಎಲ್ಲ ವರ್ಗಗಳಿಗೂ ಪ್ರಯೋಜನಕಾರಿಯಾಗಿವೆ. ಹೀಗಾಗಿ ಎಲ್ಲ ಸಮುದಾಯದ ಜನರ ವಿಶ್ವಾಸ ಗಳಿಸಿಕೊಂಡಿದ್ದಾರೆ. ಕ್ರಿಯಾಶೀಲ, ಮೃದು ಸ್ವಭಾವದ ವ್ಯಕ್ತಿತ್ವ, ಪಕ್ಷದಲ್ಲಿ ಎಲ್ಲರೊಡನೆ ಹೊಂದಿಕೊಂಡು ಹೋಗುವ ಗುಣ ಇವೆಲ್ಲವನ್ನೂ ಪರಿಗಣಿಸಿದ ಕಾಂಗ್ರೆಸ್‌ ಪಕ್ಷ ಮೈಸೂರು ಭಾಗದ ಸಂಘಟನೆಗಾಗಿ ಹಾಗೂ ಕೆಪಿಸಿಸಿಯ ಉನ್ನತ ಹುದ್ದೆಯಲ್ಲಿ ದಲಿತ ನಾಯಕರೊಬ್ಬರನ್ನು ಪ್ರತಿನಿಧಿಸಲು ಧ್ರುವನಾರಾಯಣ ಅವರನ್ನೇ ಆಯ್ಕೆ ಮಾಡಿದೆ. ಈ ಜವಾಬ್ದಾರಿಯನ್ನು ಅವರು ಯಾವ ರೀತಿ ನಿಭಾಯಿಸಿಕೊಂಡು ಹೋಗುತ್ತಾರೆ ಎಂಬುದನ್ನು ಮುಂದಿನ ದಿನಗಳಲ್ಲಿ ಕಾದು ನೋಡಬೇಕಾಗಿದೆ.

 ಕೆ.ಎಸ್‌.ಬನಶಂಕರ ಆರಾಧ್ಯ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.