![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 8, 2019, 3:00 AM IST
ಚಾಮರಾಜನಗರ: ಸೊಳ್ಳೆಗಳಿಂದ ಹರಡುವ ರೋಗಗಳ ತಡೆಗೆ ವಹಿಸಲಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ವಿವಿಧ ಇಲಾಖೆಗಳು ಅನುಷ್ಠಾನಗೊಳಿಸುವ ಕಾರ್ಯಕ್ರಮದ ಕುರಿತು ವರದಿಗಳನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಲೇರಿಯಾ, ಡೆಂ à, ಚಿಕೂನ್ ಗುನ್ಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳ ತಡೆ ಸಂಬಂಧ ನಡೆದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಹಾಗೂ ಆರೋಗ್ಯ ಇಲಾಖೆ ಕಾರ್ಯಕ್ರಮಗಳ ಅನುಷ್ಠಾನ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು.
ಸೊಳ್ಳೆಗಳಿಂದ ಹರಡುವ ರೋಗಗಳನ್ನು ತಡೆಯಲು ಹಲವಾರು ಇಲಾಖೆಗಳು ಮಹತ್ತರ ಜವಾಬ್ದಾರಿ ನಿರ್ವಹಿಸಬೇಕಿದೆ. ಸೊಳ್ಳೆಗಳ ಉತ್ಪತ್ತಿ, ನಿಯಂತ್ರಣಕ್ಕಾಗಿ ಜಾಗೃತಿ ಮೂಡಿಸುವ ಜತೆಗೆ ನೀರು ನಿಲ್ಲದೆ ಸರಾಗವಾಗಿ ಹರಿಯುವ ಹಾಗೆ ಸೂಕ್ತ ವ್ಯವಸ್ಥೆ ಮಾಡಬೇಕು. ಆರೋಗ್ಯ ಇಲಾಖೆ ಜತೆ ನಿರಂತರ ಸಂಪರ್ಕದಲ್ಲಿದ್ದು ನೈರ್ಮಲ್ಯ ಕಾಪಾಡುವುದರೊಂದಿಗೆ ಸಾಂಕ್ರಾಮಿಕ ರೋಗಗಳ ಹತೋಟಿಗೆ ಗಮನ ನೀಡಬೇಕು ಎಂದರು.
ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನೆ ವೇಳೆ ಮಕ್ಕಳಿಗೆ ಆರೋಗ್ಯ ಶಿಕ್ಷಣದ ಬಗ್ಗೆ ತಿಳಿವಳಿಕೆ ನೀಡಬೇಕು. ರೋಗ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಮುಂಜಾಗರೂಕತೆ ಕ್ರಮಗಳ ಬಗ್ಗೆ ಮಕ್ಕಳಿಗೆ ಮನದಟ್ಟಾಗುವ ರೀತಿಯಲ್ಲಿ ಜಾಗೃತಿ ಮೂಡಿಸಬೇಕು. ಕರಪತ್ರಗಳಲ್ಲಿ ಆರೋಗ್ಯ ಪಾಲನೆಗೆ ವಹಿಸಬೇಕಿರುವ ಅಂಶಗಳನ್ನು ಸರಳವಾಗಿ ತಿಳಿಸುವ ಕೆಲಸವಾಗಬೇಕು ಎಂದು ತಿಳಿಸಿದರು.
ನಗರ ಸ್ಥಳೀಯ ಸಂಸ್ಥೆ, ಗ್ರಾಮ, ಪಟ್ಟಣಗಳಲ್ಲಿ ಗುಂಡಿಗಳು, ತಗ್ಗು ಪ್ರದೇಶಗಳು, ಓವರ್ ಹೆಡ್ ಟ್ಯಾಂಕ್, ಇತರೆ ಪ್ರದೇಶಗಳಲ್ಲಿ ಸೊಳ್ಳೆಗಳು ಇರದಂತೆ ನೋಡಿಕೊಳ್ಳಬೇಕು. ಪ್ರತಿ ವಾರವೂ ನೀರಿನ ಸಂಗ್ರಹಗಳನ್ನು ಶುಚಿಗೊಳಿಸಬೇಕು. ಕೈಗಾರಿಕೆ ಪ್ರದೇಶಗಳು, ಹಾಸ್ಟೆಲ್, ವಸತಿ ತಾಣಗಳು ಸೇರಿದಂತೆ ಎಲ್ಲೆಡೆ ವ್ಯಾಪಕವಾಗಿ ಪರಿಶೀಲಿಸಿ ನೈರ್ಮಲ್ಯ ಕಾಪಾಡಿಕೊಳ್ಳಲು ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು.
ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಮರಗತಮಣಿ ಮಾತನಾಡಿ, ಗ್ರಾಮಾಂತರ ಪ್ರದೇಶದಲ್ಲಿ ನೀರಿನ ಸಂಗ್ರಹವಿರುವೆಡೆ ವ್ಯಾಪಕವಾಗಿ ಸ್ವಚ್ಚತಾ ಕೆಲಸಗಳು ಕೈಗೊಳ್ಳಬೇಕು. ಆರೋಗ್ಯದ ದೃಷ್ಠಿಯಿಂದ ಜನರನ್ನು ಜಾಗೃತಗೊಳಿಸಬೇಕು ಎಂದರು.
ರಾಷ್ಟ್ರೀಯ ಆರೋಗ್ಯ ಮಿಷನ್, ತ್ಯಾಜ್ಯ ವಿಲೇವಾರಿ, ಕ್ಷಯರೋಗ ನಿಯಂತ್ರಣ ಸೇರಿದಂತೆ ಆರೋಗ್ಯ ಇಲಾಖೆ ಅನುಷ್ಠಾನ ಮಾಡುತ್ತಿರುವ ವಿವಿಧ ಕಾರ್ಯಕ್ರಮಗಳ ಕುರಿತು ಸಭೆಯಲ್ಲಿ ಪರಿಶೀಲಿಸಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ.ರವಿ, ಆರ್ಸಿಎಚ್ ಅಧಿಕಾರಿ ಡಾ.ವಿಶ್ವೇಶ್ವರಯ್ಯ, ಡಾ. ಕಾಂತರಾಜು, ಡಾ. ರಾಜು, ಡಾ. ಕೃಷ್ಣ ಪ್ರಸಾದ್, ಡಾ. ನಾಗರಾಜು, ಡಾ. ಮಹದೇವು, ಇತರೆ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಇದ್ದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು
Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು
Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ
Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.