Elephants: ಬಂಡೀಪುರ ರಸ್ತೆಯಲ್ಲಿ ಕುಂಟುತ್ತ ಸಾಗಿದ ಮರಿಯಾನೆ
Team Udayavani, Aug 20, 2023, 2:43 PM IST
ಗುಂಡ್ಲುಪೇಟೆ(ಚಾಮರಾಜನಗರ): ಮರಿಯಾನೆಯೊಂದರ ಎಡಗಾಲಿಗೆ ಗಂಭೀರ ಗಾಯವಾಗಿ ಕುಂಟುತ್ತ ರಸ್ತೆ ದಾಟಿದ ಘಟನೆ ತಾಲೂಕಿನ ಬಂಡೀಪುರ ಅಭಯಾರಣ್ಯದ ಹೆದ್ದಾರಿ ರಸ್ತೆಯಲ್ಲಿ ನಡೆದಿದ್ದು, ಈ ದೃಶ್ಯವನ್ನು ಪ್ರವಾಸಿಗರೊಬ್ಬರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.
ಬಂಡೀಪುರದಿಂದ ಊಟಿಗೆ ತೆರಳುವ ಮಾರ್ಗ ಮಧ್ಯೆ ರಸ್ತೆಯಲ್ಲಿ ಮರಿಯಾನೆಯೊಂದು ತಾಯಿ ಮತ್ತು ಇತರೆ ಎರಡು ಆನೆಗಳ ಜೊತೆ ರಸ್ತೆ ದಾಟಿದೆ. ಈ ವೇಳೆ ಮರಿಯಾನೆ ಕಾಲು ನೋವಿನಿಂದ ಬಳಲುತ್ತಿದ್ದ ಹಿನ್ನಲೆ ಕುಂಟುತ್ತ ಸಾಗಿದೆ ಎನ್ನಲಾಗುತ್ತಿದೆ. ಆದರೆ ಆನೆ ಕುಂಟುತ್ತ ತೆರಳಲು ನಿಖರ ಕಾರಣ ತಿಳಿದು ಬಂದಿಲ್ಲ. ಗಾಯಗೊಂಡ ಮರಿಯಾನೆಗೆ ಚಿಕಿತ್ಸೆಯ ಅಗತ್ಯವಿದೆ.
ಈ ಬಗ್ಗೆ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶ ಕುಮಾರ್ ಪ್ರತಿಕ್ರಿಯೆ ನೀಡಿ, ಮರಿಯಾನೆ ಕುಂಟುತ್ತ ರಸ್ತೆ ದಾಟಿರುವ ಕುರಿತು ಪರಿಶೀಲನೆ ನಡೆಸಿ ಕ್ರಮ ವಹಿಸುವಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
SAFF U-17 Championship: ಭಾರತ-ಬಾಂಗ್ಲಾ ಫೈನಲ್
Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್
ICC Women’s T20 World Cup: ವನಿತಾ ಟಿ20 ವಿಶ್ವಕಪ್; ಅಂಪಾಯರ್ಸ್ ಆಯ್ಕೆ
T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್ ಯಾದವ್ ನಾಯಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.