ಜಲ ಸಂರಕ್ಷಣೆ ಬಗ್ಗೆ ಪ್ರತಿಯೊಬ್ಬರು ಗಮನಹರಿಸಿ


Team Udayavani, Aug 28, 2019, 3:00 AM IST

jala-samrakshane

ಕೊಳ್ಳೇಗಾಲ: ಗ್ರಾಮೀಣ ಅಭಿವೃದ್ಧಿಗೆ ಸಾರ್ವಜನಿಕರು ಗ್ರಾಮ ಪಂಚಾಯಿತಿಯನ್ನೇ ಅವಲಂಬಿಸದೆ ಪ್ರಗತಿಪರ ಸಂಘಟನೆಯ ಮುಖಂಡರು ಮತ್ತು ಚುನಾಯಿತ ಪ್ರತಿನಿಧಿಗಳ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಮಾದರಿ ಗ್ರಾಮವನ್ನಾಗಿ ಮಾಡಬೇಕು ಎಂದು ಜಿಪಂ ಸಿಇಒ ಲತಾಕುಮಾರಿ ಹೇಳಿದರು.

ತಾಲೂಕಿನ ಸತ್ತೇಗಾಲ ಗ್ರಾಪಂ ಅಧ್ಯಕ್ಷೆ ಮಂಜುಳಾ ಅಧ್ಯಕ್ಷತೆಯಲ್ಲಿ ಏರ್ಪಡಿಸಿದ್ದ ಜಲಶಕ್ತಿ, ಜಲಾಮೃತ ಅಭಿಯಾನದ ವಿಶೇಷ ಗ್ರಾಮ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಪ್ರತಿಯೊಂದು ಅಭಿವೃದ್ಧಿ ಕೆಲಸವನ್ನು ಗ್ರಾಪಂ ನಿರ್ವಹಣೆ ಮಾಡಲು ಕಷ್ಟಕರ ಆದ್ದರಿಂದ ಸಾರ್ವಜನಿಕರು ಹಾಗು ಪ್ರಗತಿಪರ ಸಂಘಟನೆಯ ಮುಖಂಡರು ಪ್ರೋತ್ಸಾಹಿಸಿದಾಗ ಗ್ರಾಮ ಅಭಿವೃದ್ಧಿಯಾಗಲಿದೆ ಎಂದರು.

ಜಲಶಕ್ತಿ ಹೆಚ್ಚಿಸಿ: ಗ್ರಾಮದಲ್ಲಿ ಜಲಶಕ್ತಿ ವೃದ್ಧಿಗೊಳಿಸುವ ಸಲುವಾಗಿ ಜಲಾಮೃತ ಅಭಿಯಾನದ ವಿಶೇಷ ಗ್ರಾಮಸಭೆಯನ್ನು ಆಹ್ವಾನ ಮಾಡಲಾಗಿದೆ. ಗ್ರಾಮದಲ್ಲಿ ಈಗಾಗಲೇ 2008 ಜನಗಣತಿಯ ಪ್ರಕಾರ 13 ಸಾವಿರ ಇದ್ದು, 2019ರಲ್ಲಿ 18 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇರುವುದು ಕಂಡು ಬಂದಿದ್ದು, ಜಲರಕ್ಷಣೆ ಕಡೆ ಪ್ರತಿಯೊಬ್ಬರು ಗಮನ ಹರಿಸಬೇಕು ಎಂದು ತಿಳಿಸಿದರು.

ಜಲಸಾಕ್ಷರತೆ: ಜಿಲ್ಲಾ ಪಂಚಾಯಿತಿ ಈಗಾಗಲೇ ಪ್ರತಿ ಗ್ರಾಮೀಣ ಪ್ರದೇಶದಲ್ಲಿ ಜಲಸಾಕ್ಷರತೆ ಅರಿವು ಮೂಡಿಸಲು ಅನೇಕ ಸಭೆಗಳ ಮೂಲಕ ಮತ್ತು ಇತರ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಲಾಗಿದ್ದು, ಪ್ರತಿಯೊಬ್ಬರು ಜಲರಕ್ಷಣೆ ಮಾಡಬೇಕು ಎಂದರು.

ನೀರಿನ ಶೇಖರಣೆ: ಗ್ರಾಮದಲ್ಲಿರುವ ಕೆರೆಕಟ್ಟೆ, ಕೊಳಗಳಿಗೆ ಬೇಕಾದ ತಡೆಗೋಡೆಗಳನ್ನು ನಿರ್ಮಾಣ ಮಾಡಿ ನೀರು ಶೇಖರಣೆ ಮಾಡಬೇಕು. ಮತ್ತು ಮಳೆಯ ನೀರನ್ನು ವ್ಯರ್ಥಮಾಡದೆ ಸಂಗ್ರಹಿಸಿ ರೈತರ ಜಮೀನುಗಳಿಗೆ ನೀರು ಪೂರೈಕೆ ಮಾಡಬೇಕು ಎಂದು ತಿಳಿಸಿದರು.

ಹಸೀರಿಕರಣ: ಇತ್ತೀಚಿನ ದಿನಗಳಲ್ಲಿ ಅರಣ್ಯವನ್ನು ನಾಶ ಮಾಡುವುದರಿಂದ ವಾತವರಣದಲ್ಲಿ ವ್ಯತ್ಯಾಸ ಕಂಡು ಬರುತ್ತಿದ್ದು, ಕೂಡಲೇ ಗ್ರಾಮಸ್ಥರು ಹಸೀರಕರಣಕ್ಕೆ ಮುಂದಾಗಬೇಕು. ಆಗಮಾತ್ರ ಋತುಮಾನದಲ್ಲಿ ಯಾವುದೆ ತರಹದ ಆಡಚಣೆ ಉಂಟಾಗದೆ ಸಕಾಲದಲ್ಲಿ ಮಳೆ ಲಭ್ಯವಾಗಲಿದ್ದು, ಪ್ರತಿಯೊಬ್ಬರು ಹಸೀರಿಕರಣಕ್ಕೆ ಮುಂದಾಗಬೇಕು ಎಂದರು.

ನಾಲೆಗಳ ಅಭಿವೃದ್ಧಿ: ಈಗಾಗಲೇ ರೈತರ ಜಮೀನುಗಳಿಗೆ ನೀರು ಹರಿಸಲು ನಾಲೆಗಳನ್ನು ನಿರ್ಮಾಣ ಮಾಡಿದ್ದು, ಕೆಲವು ನಾಲೆಗಳು ಕಸ-ಕಡ್ಡಿ ಬೆಳೆದು, ನೀರು ಸರಾಗವಾಗಿ ಹರಿದು ಹೋಗದಂತೆ ತಡೆಗಳಿದ್ದು, ಕೂಡಲೇ ಅಂತಹ ಗಿಡಗಂಟೆಗಳನ್ನು ತೆರವು ಮಾಡಿ ನಾಲೆಯಲ್ಲಿರುವ ಊಳನ್ನು ತೆಗೆಸಿ, ನಾಲೆಯ ಅಭಿವೃದ್ಧಿ ಮಾಡಲು ಈಗಾಗಲೇ ಕ್ರಿಯಾಯೋಜನೆ ಸಿದ್ಧಗೊಂಡಿದೆ ಎಂದರು.

ಪರಿಹಾರಕ್ಕೆ ಮನವಿ: ಈಗಾಗಲೇ ವಿವಿಧೆಡೆಗಳಲ್ಲಿ ನೆರೆ ಹಾವಳಿಯಿಂದಾಗಿ ಆಸ್ತಿಪಾಸ್ತಿ ಕಳೆದುಕೊಂಡಿರುವವರಿಗಾಗಿ ತಾಲೂಕಿನ ಸಂಜೀವಿನಿ ಮಹಿಳಾ ಒಕ್ಕೂಟದ ಸಂಚಾಲಕಿ ಚಂದ್ರಮ್ಮ ಅವರ ನೇತೃತ್ವದಲ್ಲಿ ಸಂಗ್ರಹಿಸಲಾಗಿದ್ದ ಸುಮಾರು 26 ಸಾವಿರ ರೂ. ಪರಿಹಾರವನ್ನು ನೆರೆ ಸಂತ್ರಸ್ತರಿಗೆ ನೀಡುವಂತೆ ಸಿಇಒ ಅವರಿಗೆ ಸಲ್ಲಿಸಿದರು.

ಗ್ರಾಮಸ್ಥರು ನೀಡಿರುವ ಹಲವಾರು ಅಹವಾಲುಗಳನ್ನು ಪರಿಗಣಿಸಿ ಸೂಕ್ತ ಸೌಕರ್ಯ ಕಲ್ಪಿಸಲು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಗ್ರಾಮ ಅಭಿವೃದ್ಧಿಗೆ ಹೆಚ್ಚು ಗಮನ ಹರಿಸಲಾಗುವುದೆಂದು ಗ್ರಾಮಸ್ಥರಿಗೆ ಹೇಳಿದರು. ಗ್ರಾಪಂ ಅಧ್ಯಕ್ಷೆ ಮಂಜುಳ, ಉಪಾದ್ಯಕ್ಷ ರಾಜಪ್ಪ, ಜಿಪಂ ಸದಸ್ಯೆ ಜಯಂತಿ, ತಾಪಂ ಸದಸ್ಯ ಅರುಣ್‌ಕುಮಾರ್‌, ಇಒ ಚಂದ್ರು, ಗ್ರಾಪಂ ಪಿಡಿಒ ನಮಿತ ತೇಜಶ್ವಿ‌ನಿಗೌಡ ಹಾಗೂ ಸಿಬ್ಬಂದಿವರ್ಗ ಇದ್ದರು.

ಟಾಪ್ ನ್ಯೂಸ್

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-gundlupete

Gundlupete: ಬ್ರೇಕ್ ಫೇಲ್ ಆದ ಪರಿಣಾಮ ಲಾರಿ ಪಲ್ಟಿ: ಚಾಲಕನಿಗೆ ತೀವ್ರ ಗಾಯ

7

Kollegala: ದೇವಾಲಯದ ಹಿಂಭಾಗದ ಕಾವೇರಿ ನದಿಯಲ್ಲಿ ಯುವಕನ ಶವ ಪತ್ತೆ

Gundlupete: ಸಾಲಬಾಧೆ; ರೈತ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣು

Gundlupete: ಸಾಲಬಾಧೆ; ರೈತ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣು

2-gundlupete

Gundlupete: ಕಂದಕದ ಒಳಗೆ ಬಿದ್ದು ಗಂಡಾನೆ ಸಾವು

8-yelandur

Yelandur: ಜಾತಿ ನಿಂದನೆ: ಪ್ರಕರಣ ದಾಖಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Goa-iffai

IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.