ಆರ್‌ಸಿಇಪಿ ವಿರೋಧಿಸಿ ರೈತರ ಪ್ರತಿಭಟನೆ


Team Udayavani, Oct 26, 2019, 3:00 AM IST

rcep-pra

ಚಾಮರಾಜನಗರ: ಭಾರತ ಸರ್ಕಾರವು ಪ್ರಾದೇಶಿಕ ಸಮಗ್ರ ಅರ್ಥಿಕ ಸಹಭಾಗಿತ್ವ (ಆರ್‌ಸಿಇಪಿ) ಒಪ್ಪಂದದ ಮೂಲಕ ದೇಶದ ಕೃಷಿ ವಲಯವನ್ನು ತೆರಿಗೆ ಮುಕ್ತ ವ್ಯಾಪಾರ ವಲಯಕ್ಕೆ ಸೇರಿಸಲು ಮುಂದಾಗಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘದ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಪ್ರವಾಸಿ ಮಂದಿರದ ಆವರಣದಿಂದ ಮೆರವಣಿಗೆ ಹೊರಟು ದೊಡ್ಡ ಅಂಗಡಿ ಬೀದಿ, ಮಹಾವೀರ ವೃತ್ತ, ಹಳೆ ಖಾಸಗಿ ಬಸ್‌ ನಿಲ್ದಾಣ, ರೈತ ಸಂಘದ ಕಚೇರಿ ರಸ್ತೆ, ಚಿಕ್ಕ ಅಂಗಡಿ ಬೀದಿ, ಸಂತೆಮರಹಳ್ಳಿ ವೃತ್ತ, ಭುವನೇಶ್ವರಿ ವೃತ್ತಕ್ಕೆ ಬಂದು ಮಾನವ ಸರಪಳಿ ರಚಿಸಲಾಯಿತು. ಅಲ್ಲಿಂದ ಮುಂದುವರೆದು ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ತೆರಳಿ, ಧರಣಿ ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿ ಕಾವೇರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಒಪ್ಪಂದಕ್ಕೆ ಸಹಿ ಹಾಕಬಾರದು: ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ವಿಭಾಗೀಯ ಕಾರ್ಯದರ್ಶಿ ಮಹೇಶ್‌ಪ್ರಭು, ಕೇಂದ್ರ ಸರ್ಕಾರ ಆರ್‌ಇಸಿಪಿ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲು ಮಾತುಕತೆ ನಡೆಸಿದ್ದು, ಯಾವುದೇ ಕಾರಣಕ್ಕೂ ಈ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಬಾರದು. ಮುಂದುವರೆದ ದೇಶಗಳಲ್ಲಿ ಕೃಷಿಗೆ ಹೆಚ್ಚಿನ ಸಹಾಯಧನ ನೀಡುವುದರಿಂದ ಹಾಗೂ ಯಾಂತ್ರಿಕ ಬೇಸಾಯ ಇರುವುದಿಂದ ಕಡಿಮೆ ಬೆಲೆಗೆ ಕೃಷಿ, ಹೈನುಗಾರಿಕೆ ಉತ್ಪನ್ನಗಳನ್ನು ತೆರಿಗೆ ಇಲ್ಲದೇ ಭಾರತಕ್ಕೆ ತಂದು ಸುರಿ ಮಾರುಕಟ್ಟೆ ಮಾಡುವುದದರಿಂದ, ನಮ್ಮ ದೇಶಕ ಕೃಷಿ, ಹೈನುಗಾರಿಕೆ ನಷ್ಟಕ್ಕೆ ಸಿಲುಕಿ, ಉದ್ಯೋಗ ಕಡಿತವಾಗಲಿದೆ ಎಂದರು.

ಹೈನುಗಾರಿಕೆ ಕ್ಷೇತ್ರ ಅಪಾಯ: ಚೀನಾ ಜಪಾನ್‌ ದಕ್ಷಿಣ ಕೊರಿಯಾ, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್‌ ಸೇರಿ ಇತರ 15 ರಾಷ್ಟ್ರಗಳದೊಂದಿಗೆ ಭಾರತ ಸರ್ಕಾರ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಕುರಿತು ಮಾತುಕತೆ ನಡೆಸುತ್ತಿದೆ. ನವೆಂಬರ್‌ ಒಳಗೆ ಮಾತುಕತೆ ಮುಕ್ತಾಯವಾಗಲಿದೆ. ಭಾರತದ ರೈತರನ್ನು ಇನ್ನೊಂದು ಮುಕ್ತ ವ್ಯಾಪಾರ ಒಪ್ಪಂದಕ್ಕೆ ಒಳಪಡಿಸಲಾಗುತ್ತಿರುವುದನ್ನು ನಾವು ಒಪ್ಪುವುದಿಲ್ಲ. ಇದರಿಂದ ಬಹುತೇಕ ಕೃಷಿ ಸರಕುಗಳ ಮೇಲಿನ ಆಮದು ಸುಂಕವೇ ಇಲ್ಲವಾಗುತ್ತದೆ. ಹೀಗಾಗಿ ಅನೇಕ ದೇಶಗಳ ಹೆಚ್ಚುವರಿ ಕೃಷಿ ಉತ್ಪನ್ನಗಳನ್ನು ಭಾರತಕ್ಕೆ ಮಾರಲು ಬರುತ್ತವೆ. ಇದರಿಂದಾಗಿ ದೇಶದ ಕೋಟ್ಯಂತರ ಸಣ್ಣ ರೈತರ ಸ್ಥಿತಿ ಶೋಚನೀಯವಾಗಲಿದೆ. ಅಲ್ಲದೇ ಹೈನುಗಾರಿಕೆ ಕ್ಷೇತ್ರ ಅಪಾಯಕ್ಕೆ ಸಿಲುಕಲಿದೆ ಎಂದರು.

ರೈತರಿಗೆ ಮರಣಶಾಸನ: ಪ್ರಧಾನ ಕಾರ್ಯದರ್ಶಿ ಜ್ಯೋತಿಗೌಡನಪುರ ಸಿದ್ದರಾಜು ಮಾತನಾಡಿ, ಬೀಜ ಕಂಪನಿಗಳು ತಮ್ಮ ಬೌದ್ಧಿಕ ಆಸ್ತಿ ಹಕ್ಕುಗಳನ್ನು ರಕ್ಷಿಸಲು ಹೆಚ್ಚಿನ ಅಧಿಕಾರವನ್ನು ಪಡೆಯುತ್ತವೆ. ಬೀಜಗಳನ್ನು ರಕ್ಷಿಸಿ, ಸಂಗ್ರಹಿಸುವ ರೈತರು ಅಪರಾಧಿಗಳಾಗುತ್ತಾರೆ. ಆದ್ದರಿಂದ ಆರ್‌ಇಸಿಪಿಯನ್ನು ದೇಶದ ಎಲ್ಲರೂ ವಿರೋಧಿಸಬೇಕು. ಆಯಾ ರಾಜ್ಯ ಸರ್ಕಾರಗಳನ್ನು ಈ ವಿಷಯದಲ್ಲಿ ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸಿದರು.

ಉಗ್ರ ಹೋರಾಟ: ಕಾರ್ಯಾಧ್ಯಕ್ಷ ಶೈಲೇಂದ್ರ ಮಾತನಾಡಿ, ತಮ್ಮ ಅಸ್ತಿತ್ವದ ಪ್ರಶ್ನೆ ಎದುರಿಸುತ್ತಿರುವುದು ರೈತರು ಮಾತ್ರವಲ್ಲ. ದೇಶದ ಆಹಾರ ಸಾರ್ವಭೌಮತ್ವವೂ ಅಪಾಯದಲ್ಲಿದೆ. ಹಾಗಾಗಿ ಈ ನೀತಿಯನ್ನು ವಿರೋಧಿಸುತ್ತಿದ್ದೇವೆ. ಯಾವುದೇ ಕಾರಣಕ್ಕೂ ಭಾರತ ಈ ಒಪ್ಪಂದಕ್ಕೆ ಸಹಿ ಹಾಕಬಾರದು ಎಂದರು.

ವಿಭಾಗೀಯ ಕಾರ್ಯದರ್ಶಿ ಮಹೇಶ್‌ಪ್ರಭು, ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಶಿವರಾಮು, ರಾಜ್ಯ ವರಿಷ್ಠ ಎಚ್‌.ಸಿ. ಮಹೇಶ್‌ಕುಮಾರ್‌, ಜಿಲ್ಲಾ ಉಪಾಧ್ಯಕ್ಷ ಶಾಂತಮಲ್ಲಪ್ಪ, ಬಸವಣ್ಣ, ಪ್ರಧಾನ ಕಾರ್ಯದರ್ಶಿ ಜ್ಯೋತಿಗೌಡನಪುರ ಸಿದ್ದರಾಜು, ತಾಲೂಕು ಅಧ್ಯಕ್ಷ ಮಹದೇವಪ್ರಸಾದ್‌, ಸಂಪತ್ತು, ಗೌಡೇಗೌಡ, ಚಿನ್ನಸ್ವಾಮಿ ಗೌಂಡರ್‌, ಹೆಬ್ಬಸೂರು ಶೇಷಪ್ಪ, ಅಬ್ಟಾಸ್‌, ಬೇಡರಪುರಗಿರೀಶ್‌, ರಾಮಸಮುದ್ರ ಮಂಜುನಾಥ್‌, ಶಿವಮ್ಮ, ಪುಷ್ಪಾ, ನಾಗಮಣಿ, ರಾಣಿ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.